Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಶುಗರ್ ಆರಂಭಕ್ಕೆ ಅಗತ್ಯ ಕ್ರಮ: ಡಿಸಿಎಂ...

ಮೈಶುಗರ್ ಆರಂಭಕ್ಕೆ ಅಗತ್ಯ ಕ್ರಮ: ಡಿಸಿಎಂ ಡಾ.ಅಶ್ವಥ್ ನಾರಾಯಣ

ಮಂಡ್ಯ ವಿವಿ, ಮಹಿಳಾ ಸರಕಾರಿ ಕಾಲೇಜಿಗೆ ಭೇಟಿ

ವಾರ್ತಾಭಾರತಿವಾರ್ತಾಭಾರತಿ13 Jun 2020 12:04 AM IST
share
ಮೈಶುಗರ್ ಆರಂಭಕ್ಕೆ ಅಗತ್ಯ ಕ್ರಮ: ಡಿಸಿಎಂ ಡಾ.ಅಶ್ವಥ್ ನಾರಾಯಣ

ಮಂಡ್ಯ, ಜೂ.12: ಮೈಶುಗರ್ ಕಾರ್ಖಾನೆಯನ್ನು ಆರಂಭಿಸಲು ಅಗತ್ಯ ಕ್ರಮವಹಿಸಲಾಗಿದೆ. ಕಾರ್ಯಾಚರಣೆ ಮತ್ತು ನಿರ್ವಹಣೆ(ಒ ಅಂಡ್ ಎಂ)ಯನ್ನು ಗುತ್ತಿಗೆ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ತಿಳಿಸಿದ್ದಾರೆ.

ಶುಕ್ರವಾರ ನಗರದ ಮಂಡ್ಯ ವಿಶ್ವವಿದ್ಯಾಲಯ ಹಾಗೂ ಮಹಿಳಾ ಸರಕಾರಿ(ಸ್ವಾಯತ್ತ) ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ವರ್ಷವೇ  ಕಾರ್ಖಾನೆ ಆರಂಭಕ್ಕೆ ಕ್ರಮ ವಹಿಸಲಾಗುವುದು ಎಂದರು.

ಸರಕಾರಿ ಸ್ವಾಮ್ಯದಲ್ಲೇ ನಡೆಸಲಾಗುವುದಿಲ್ಲವೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾರ್ಖಾನೆ ಜವಾಬ್ಧಾರಿ ಯಾರು ಹೊರಬೇಕೆಂಬುದು ಮುಖ್ಯವಲ್ಲ. ರೈತರಿಗೆ ಅನುಕೂಲವಾಗಬೇಕು ಎಂಬುದು ಸಿಎಂ ಯಡಿಯೂರಪ್ಪ ಅವರ ತೀರ್ಮಾನವಾಗಿದೆ ಎಂದು ಹೇಳಿದರು. ಜಿಲ್ಲೆಯ ಜನರು ಜೆಡಿಎಸ್‍ನವರಿಗೆ ಎಲ್ಲಾ ರೀತಿಯ ಅಧಿಕಾರ ಕೊಟ್ಟಿದ್ದರು. ಆದರೆ, ಕಾರ್ಖಾನೆ ನಡೆಸಲು ಏಕೆ ಆಗಲಿಲ್ಲ. ಕನ್ನಡಿ ಹಿಡಿದು ನೋಡಿದರೆ ಜೆಡಿಎಸ್ ಶಾಸಕರ ಪ್ರಶ್ನೆಗೆ ಉತ್ತರ ಅಲ್ಲೇ ಸಿಗುತ್ತದೆ ಎಂದು ಅವರು ವ್ಯಂಗ್ಯವಾಡಿದರು.

ಗುತ್ತಿಗೆ ಅಥವಾ ಒ ಅಂಡ್ ಎಂ ಮೂಲಕ ಕಾರ್ಖಾನೆ ಆರಂಭಿಸಲು ಸರಕಾರ ಸಿದ್ದವಾಗಿದೆ. ಅರ್ಹರು ಬಂದರೆ ಈ ವರ್ಷವೇ ಕಾರ್ಖಾನೆ ಆರಂಭಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಎಂ.ಟಿ.ಬಿ.ನಾಗರಾಜು, ಎಚ್.ವಿಶ್ವನಾಥ್, ಸಿ.ಪಿ.ಯೋಗೇಶ್ವರ್, ಆರ್.ಶಂಕರ್ ಪರಿಷತ್ ಚುನಾವಣೆ ಟಿಕೆಟ್ ಆಕಾಂಕ್ಷಿತರಾಗಿದ್ದು, ಶಂಕರ್ ಅವರೊಬ್ಬರಿಗೆ ಮಾತ್ರ ಪರಿಷತ್ ಚುನಾವಣೆಗೆ ಟಿಕೆಟ್ ನೀಡುವ ಭರವಸೆ ನೀಡಲಾಗಿತ್ತು. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಅಶ್ವಥ್ ನಾರಾಯಣ ಪ್ರತಿಕ್ರಿಯಿಸಿದರು.

ಮಂಡ್ಯ ವಿವಿಗೆ ಕಾಯಕಲ್ಪ:
ಇದಕ್ಕೂ ಮುನ್ನ ಮಂಡ್ಯ ವಿವಿ ಪರಿಶೀಲಸಿದ ಅಶ್ವಥ್ ನಾರಾಯಣ, ವಿವಿಗೆ ಅಭಿವೃದ್ಧಿಗೆ ಸರಕಾರ ಕ್ರಮವಹಿಸಲಿದೆ. ಜಿಲ್ಲೆಯಲ್ಲಿ ಕೆ.ವಿ.ಶಂಕರಗೌಡರು ಶಿಕ್ಷಣ ಕ್ರಾಂತಿಗೆ ಅಡಿಗಲ್ಲು ಹಾಕಿದ್ದು, ಅಂತೆಯೇ ವಿವಿಯಲ್ಲೂ ಶಿಕ್ಷಣ ಕ್ರಾಂತಿ ಆಗಲಿದೆ ಎಂದರು.

ಎದುರಾಗಿದ್ದ ಕೆಲವು ತಾಂತ್ರಿಕ ತೊಂದರೆಗಳು ನಿವಾರಣೆಯಾಗಿವೆ. ಸದ್ಯದಲ್ಲೇ ಉಪಕುಲಪತಿಯನ್ನು ನೇಮಕ ಮಾಡಲಾಗುವುದು. ವಿವಿಯ 31 ಎಕರೆ ಪ್ರದೇಶದಲ್ಲಿ 6 ಎಕರೆ ಒತ್ತುವರಿಯಾಗಿದ್ದು, ತೆರವಿಗೆ ಕ್ರಮವಹಿಸಲಾಗುವುದು ಎಂದು ಅವರು ತಿಳಿಸಿದರು.

ಶಾಸಕ ಎಂ.ಶ್ರೀನಿವಾಸ್, ಪದವಿ ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಎಸ್ಪಿ ಕೆ.ಪರಶುರಾಂ, ಎಎಸ್ಪಿ ಡಾ.ಶೋಭಾರಾಣಿ, ಇತರೆ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X