Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೀರಿನ ಬಿಲ್ ಅವ್ಯವಹಾರಕ್ಕೆ ಸಂಬಂಧಿಸಿ...

ನೀರಿನ ಬಿಲ್ ಅವ್ಯವಹಾರಕ್ಕೆ ಸಂಬಂಧಿಸಿ ಆರೋಪಿ ವಿರುದ್ಧ ಕ್ರಿಮಿನಲ್ ಮೊಕದ್ದಮೆಗೆ ಸೂಚನೆ

34 ನೆಕ್ಕಿಲಾಡಿ ಗ್ರಾಪಂ ಸಾಮಾನ್ಯ ಸಭೆ

ವಾರ್ತಾಭಾರತಿವಾರ್ತಾಭಾರತಿ13 Jun 2020 1:45 PM IST
share
ನೀರಿನ ಬಿಲ್ ಅವ್ಯವಹಾರಕ್ಕೆ ಸಂಬಂಧಿಸಿ ಆರೋಪಿ ವಿರುದ್ಧ ಕ್ರಿಮಿನಲ್ ಮೊಕದ್ದಮೆಗೆ ಸೂಚನೆ

ಉಪ್ಪಿನಂಗಡಿ, ಜೂ.13: 34 ನೆಕ್ಕಿಲಾಡಿಯ ನೀರಿನ ಬಿಲ್ ಅವ್ಯವಹಾರಕ್ಕೆ ಸಂಬಂಧಿಸಿ ಅವ್ಯವಹಾರ ನಡೆಸಿದ ಸಿಬ್ಬಂದಿಯ ವಿರುದ್ಧ ವಾರದೊಳಗೆ ಕ್ರಿಮಿನಲ್ ಕೇಸು ದಾಖಲಿಸುವಂತೆ ಹಾಗೂ ಗ್ರಾಪಂಗೆ ನಷ್ಟವಾದ ಮೊತ್ತವನ್ನು ಅವರಿಂದ ಭರಿಸಲು ಅವರಿಗೆ ನೋಟಿಸ್ ಜಾರಿ ಮಾಡುವಂತೆ ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಸೂಚಿಸಿದ್ದಾರೆ.

34 ನೆಕ್ಕಿಲಾಡಿ ಗ್ರಾಪಂ ಅಧ್ಯಕ್ಷೆ ರತಿ ಎಸ್. ನಾಯ್ಕ ಅಧ್ಯಕ್ಷತೆಯಲ್ಲಿ ಗ್ರಾಪಂ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಗೆ ದಿಢೀರ್ ಭೇಟಿ ನೀಡಿದ ಅವರು, ನೀರಿನ ಬಿಲ್‌ನಲ್ಲುಂಟಾದ ಅವ್ಯವಹಾರದ ಮಾಹಿತಿ ಪಡೆದರು.

ಈ ಬಗ್ಗೆ ಮಾಹಿತಿ ನೀಡಿದ 34 ನೆಕ್ಕಿಲಾಡಿ ಗ್ರಾಪಂ ಪಿಡಿಒ ಜಯಪ್ರಕಾಶ್, ಗ್ರಾಪಂನಲ್ಲಿ ನೀರಿನ ಬಿಲ್ ವಸೂಲಿಗೆ ಬೇಡಿಕೆ ಹಾಗೂ ವಸೂಲಾತಿಯ ಎರಡು ರಶೀದಿಗಳಿವೆ. ಬೇಡಿಕೆಯ ರಶೀದಿ ಬಿಳಿ ಬಣ್ಣದ್ದಾಗಿದ್ದರೆ, ವಸೂಲಾತಿಯ ರಶೀದಿ ಕೆಂಪು ಬಣ್ಣದ್ದಾಗಿದೆ. ಇಲ್ಲಿನ ನೀರಿನ ಕರ ವಸೂಲಿಗ ಸಿಬ್ಬಂದಿಯು ಕುಡಿಯುವ ನೀರಿನ ಬಳಕೆದಾರರಿಗೆ ಬೇಡಿಕೆಯ ರಶೀದಿ ನೀಡಿ ಹಣ ಪಡೆದಿದ್ದು, ಆದರೆ ಇಲ್ಲಿ ವಸೂಲಾತಿಯ ರಶೀದಿಯಲ್ಲಿ ಕಡಿಮೆ ಮೊತ್ತವನ್ನು ಬರೆದಿದ್ದಾರೆ ಎಂಬ ಆರೋಪ ಬಳಕೆದಾರರಿಂದ ಕೇಳಿ ಬಂದಿದೆ. ವಸೂಲಾತಿಯ ಮೊತ್ತ ಮಾತ್ರ ಬ್ಯಾಂಕ್‌ಗೆ ಜಮೆಯಾಗಿದೆ. ಕುಡಿಯುವ ನೀರಿನ ಬಳಕೆದಾರರು ಆರೋಪಿಸುವಂತೆ ಉದಾಹರಣೆಗೆ ಓರ್ವ ಕುಡಿಯುವ ನೀರಿನ ಬಳಕೆದಾರ 500 ರೂ. ಪಾವತಿಸಿದರೆ ಅವರಿಗೆ 500 ರೂ. ಎಂದು ನಮೂದಿಸಿ ಬಿಳಿ ಬಣ್ಣದ ಬೇಡಿಕೆ ರಶೀದಿ ನೀಡಲಾಗಿದೆ. ಆದರೆ ಕೆಂಪು ಬಣ್ಣದ ವಸೂಲಾತಿಯ ರಶೀದಿಯಲ್ಲಿ 100 ರೂ. ಎಂದು ಮಾತ್ರ ಬರೆಯಲಾಗಿದೆ. ಇದರಿಂದ ಬಳಕೆದಾರ 500 ರೂ. ಪಾವತಿಸಿದರೂ ಗ್ರಾಪಂಗೆ ಬಂದಿರುವುದು 100 ರೂ. ಮಾತ್ರ. ಉಳಿದ 400 ರೂ. ಬಾಕಿ ಎಂದಾಗುತ್ತದೆ. ಈ ರೀತಿ ಅವ್ಯವಹಾರ ನಡೆಸಿದ ಬಗ್ಗೆ ಕೆಲವರು ದಾಖಲೆ ಸಹಿತ ಗ್ರಾ.ಪಂ.ಗೆ ದೂರು ನೀಡಿದ್ದಾರೆ ಎಂದರು.

ನೀರಿನ ಬಿಲ್ ವಸೂಲಾತಿಯಲ್ಲಿ ಈ ರೀತಿಯ ವಂಚನೆ ನಡೆದಿರುವಾಗ ಅವರ ಮೇಲೆ ಕ್ರಮ ಕೈಗೊಳ್ಳಲು ವಿಳಂಬ ಮಾಡಿದ್ದೇಕೆ ಎಂದು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯನ್ನು ಇಒ ತರಾಟೆಗೈದರು. ಅವ್ಯವಹಾರದ ದಾಖಲೆಗಳನ್ನು ಕ್ರೋಡೀಕರಿಸಿಕೊಂಡು ತಪ್ಪಿತಸ್ಥರ ಮೇಲೆ ಕ್ರಿಮಿನಲ್ ಕೇಸ್ ಮಾಡಿ. ವಾರದೊಳಗೆ ಈ ಎಲ್ಲ ಕೆಲಸಗಳು ಆಗಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಅನಧಿಕೃತ ಕುಡಿಯುವ ನೀರಿನ ಸಂಪರ್ಕ, ಚರಂಡಿ ನಿರ್ವಹಣೆ ಹಾಗೂ ದಾರಿ ದೀಪ ಅಳವಡಿಕೆಯ ಕಾಮಗಾರಿಗಳ ಚರ್ಚೆ ನಡೆಯಿತು.

ಸಭೆಯಲ್ಲಿ ಪ್ರಭಾರ ಕಾರ್ಯದರ್ಶಿ ಚಂದ್ರಾವತಿ, ಗ್ರಾಪಂ ಉಪಾಧ್ಯಕ್ಷ ಅಸ್ಗರ್ ಅಲಿ, ಸದಸ್ಯರಾದ ಅನಿ ಮಿನೇಜಸ್, ಸತ್ಯವತಿ ಪೂಂಜಾ, ಎನ್. ಶೇಕಬ್ಬ, ಪ್ರಶಾಂತ್, ಮೈಕಲ್ ವೇಗಸ್, ಬಾಬು ನಾಯ್ಕ ಉಪಸ್ಥಿತರಿದ್ದು, ಚರ್ಚೆಯಲ್ಲಿ ಭಾಗವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X