Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮರದ ಸೇತುವೆ ನಿರ್ಮಾಣದ ಕೌಶಲ್ಯ ಉಳಿಸುವ...

ಮರದ ಸೇತುವೆ ನಿರ್ಮಾಣದ ಕೌಶಲ್ಯ ಉಳಿಸುವ ‘ಸೇತುಬಂಧ’ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ13 Jun 2020 7:34 PM IST
share
ಮರದ ಸೇತುವೆ ನಿರ್ಮಾಣದ ಕೌಶಲ್ಯ ಉಳಿಸುವ ‘ಸೇತುಬಂಧ’ ಅಭಿಯಾನ

ಉಡುಪಿ, ಜೂ.13: ಕಂಗು, ಬೊಂಬು, ಬಿಳಲುಗಳಿಂದ ಸೇತುವೆ ನಿರ್ಮಿಸುವ ಹಳ್ಳಿಯ ಶ್ರಮಿಕ ಜನರ ಸ್ಥಳೀಯ ಕೌಶಲ್ಯವನ್ನು ಉಳಿಸುವ ಉದ್ದೇಶದಿಂದ ಮಾಳ ಮಣ್ಣಪಾಪು ಮನೆ ಮತ್ತು ಪ್ರಾಚಿ ಪ್ರತಿಷ್ಠಾನದ ವತಿಯಿಂದ ‘ಸೇತು ಬಂಧ’ ಎಂಬ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಅನೇಕ ತೊರೆಗಳನ್ನು ಹೊಂದಿರುವ ಕಾರ್ಕಳ ತಾಲೂಕಿನ ಮಾಳನಂತಹ ಹಳ್ಳಿಯಲ್ಲಿ ಸೇತುವೆಗಳು ಜನರ ಜೀವನದಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ. ಇಲ್ಲಿ ಕಾಂಕ್ರೀಟ್ ಸೇತುವೆಗಳು ದಶಕಗಳವರೆಗೆ ಇದ್ದರೆ, ಮರದ ಸೇತುವೆಗಳನ್ನು ಪ್ರತಿ ವರ್ಷ ಅಥವಾ ಎರಡು ಬಾರಿ ನಿರ್ಮಿಸಲಾಗುತ್ತದೆ. ಈ ಮರದ ಸೇತುವೆ ಯನ್ನು ನಿರ್ಮಿಸಲು ಇಲ್ಲಿನ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆ ಮರಗಳನ್ನು ಬಳಸಲಾಗುತ್ತದೆ. ಈ ಅಭಿಯಾನದ ಪ್ರಯುಕ್ತ ಮಾಳದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಸ್ಥಳೀಯರು ಮತ್ತು ನುರಿತ ಸಿಬ್ಬಂದಿಗಳ ಸಹಾಯದಿಂದ ಸುಮಾರು 4-5 ಮರದ ಸೇತುವೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ. ಪ್ರತಿಯೊಂದು ಸೇತುವೆ ವಿಭಿನ್ನ ವಿನ್ಯಾಸವನ್ನು ಹೊಂದಿರುತ್ತದೆ.

ಸ್ಥಳೀಯ ಸೇತುವೆಗಳ ನಿರ್ಮಾಣದಲ್ಲಿ ಹೆಚ್ಚು ನುರಿತರಾದ ಸ್ಥಳೀಯ ನಿವಾಸಿ ಶ್ರೀನಿವಾಸ್, ಅಪ್ಪಣ್ಣ ಮತ್ತು ತಂಡದ ಸಹಾಯದಿಂದ ಮೊದಲ ಸೇತುವೆ ಈಗಾಗಲೇ ಪೂರ್ಣ ಗೊಂಡಿದೆ. ಇದೇ ತಂಡ ನಿರ್ಮಿಸುತ್ತಿರುವ ಎರಡನೆ ಸೇತುವೆ ಅಂತಿಮ ಹಂತ ದಲ್ಲಿದೆ.‘ಇಲ್ಲಿನ ಜೀವಂತ ಸಂಸ್ಕೃತಿಯಾಗಿರುವ ಈ ಸೇತುವೆಗಳು ಇಲ್ಲಿನ ಜನರನ್ನು ಪರಸ್ಪರ ಸಂಪರ್ಕಿಸುವ ಕೆಲಸ ಮಾಡುತ್ತದೆ. ಇಂದು ಸೇತುವೆ ನಿರ್ಮಿಸುವ ಈ ವಾರ್ಷಿಕ ಆಚರಣೆ ಮರೆಯಾಗುತ್ತಿದೆ.

ಈಗಲೂ ಈ ಸೇತುವೆಗಳ ಬಳಕೆ ಇರುವುದರಿಂದ ನೈಸರ್ಗಿಕ ವಸ್ತುಗಳನ್ನು ಮಾತ್ರ ಬಳಸಿಕೊಂಡು ಅಡಿಕೆ ಮರದ ಸೇತುವೆಗಳನ್ನು ನಿರ್ಮಿಸುವ ಈ ಕೌಶಲ್ಯವನ್ನು ಉಳಿಸಿಕೊಳ್ಳುವ ಉದ್ದೇಶದಿಂದ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ. ಇಂತಹ ಕಾರ್ಯದಿಂದ ಜನ ಒಟ್ಟಿಗೆ ಸೇರಲು ಒಂದು ಅವಕಾಶ ಸಿಕ್ಕಿದಂತಾಗುತ್ತದೆ ಮತ್ತು ಒಂದು ಪ್ರಮುಖ ಕೌಶಲ್ಯವನ್ನು ಉಳಿಸಿದಂತೆ ಆಗುತ್ತದೆ’ ಎಂದು ಮಣ್ಣಪಾಪುವಿನ ಪುರುಷೋತ್ತಮ ಅಡ್ವೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X