Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಾಳೇಬರೆ ಘಾಟಿಯಲ್ಲಿ ಉರುಳಿದ ಮರ:...

ಬಾಳೇಬರೆ ಘಾಟಿಯಲ್ಲಿ ಉರುಳಿದ ಮರ: ಸಂಚಾರಕ್ಕೆ ಅಡ್ಡಿ

ವಾರ್ತಾಭಾರತಿವಾರ್ತಾಭಾರತಿ13 Jun 2020 8:57 PM IST
share
ಬಾಳೇಬರೆ ಘಾಟಿಯಲ್ಲಿ ಉರುಳಿದ ಮರ: ಸಂಚಾರಕ್ಕೆ ಅಡ್ಡಿ

ಅಮಾಸೆಬೈಲು, ಜೂ.13: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಗಾಳಿಮಳೆಯಿಂದಾಗಿ ಶನಿವಾರ ಬೆಳಗ್ಗೆ 11ರ ಸುಮಾರಿಗೆ ಹೊಸಂಗಡಿ ಬಳಿಯ ಬಾಳೇಬರೆ ಘಾಟಿಯಲ್ಲಿ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಕೆಲ ಸಮಯ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ರಸ್ತೆ ಬದಿಯ ಬೃಹತ್ ಮರ ರಸ್ತೆಗೆ ಅಡ್ಡವಾಗಿ ಉರುಳಿ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಇದರಿಂದ ಎರಡೂ ಕಡೆಯಿಂದ ಬಂದ ವಾಹನಗಳು ಸಂಚರಿಸಲಾಗದೆ ಸಾಲುಗಟ್ಟಿ ನಿಂತಿರುವುದು ಕಂಡುಬಂತು. ಬಳಿಕ ಸ್ಥಳಕ್ಕೆ ಅಮಾಸೆಬೈಲು ಪೊಲೀಸರು ಹಾಗೂ ಅರಣ್ಯ ಇಲಾಖೆಯವರು, ಹೊಸಂಗಡಿ ಗ್ರಾಪಂ ಗ್ರಾಮ ಕರಣಿಕ ಚಂದ್ರಶೇಖರ್ ಆಗಮಿಸಿ ಪರಿಶೀಲನೆ ನಡೆಸಿದರು. ಸುಮಾರು ಒಂದೂವರೆ ಗಂಟೆಗಳ ನಂತರ ಮರವನ್ನು ರಸ್ತೆಯಿಂದ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಜಿಲ್ಲೆಯಲ್ಲಿ ಭಾರೀ ಮಳೆ, ಅಲ್ಲಲ್ಲಿ ಹಾನಿ

ಜಿಲ್ಲೆಯಲ್ಲಿ ಇಂದು ಭಾರೀ ಮಳೆ ಸುರಿಯುತ್ತಿದೆ. ನಿನ್ನೆಯೂ ಜಿಲ್ಲೆಯಲ್ಲಿ ಸತತ ಮಳೆ ಸುರಿದಿದ್ದು, ಕುಂದಾಪುರ ಮತ್ತು ಕಾಪು ತಾಲೂಕುಗಳಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿದೆ. ಇಂದು ಬೆಳಗ್ಗೆ 8:30ಕ್ಕೆ ಮುಕ್ತಾಯಗೊಂಡಂತೆ ಜಿಲ್ಲೆಯಲ್ಲಿ ಸರಾಸರಿ 57ಮಿ.ಮೀ. ಮಳೆಯಾಗಿದೆ.

ಉಡುಪಿಯಲ್ಲಿ 76ಮಿ.ಮೀ., ಕುಂದಾಪುರದಲ್ಲಿ 64ಮಿ.ಮೀ. ಹಾಗೂ ಕಾರ್ಕಳದಲ್ಲಿ 31ಮಿ.ಮೀ. ಮಳೆಯಾಗಿದೆ. ಅಲ್ಲದೇ ಜಿಲ್ಲೆಯಲ್ಲಿ ಲಕ್ಷಾಂತರ ರೂ.ವೌಲ್ಯದ ಸೊತ್ತುಗಳಿಗೆ ಹಾನಿಯಾಗಿದೆ ಎಂದು ಜಿ್ಲಾಧಿಕಾರಿ ಕಚೇರಿಯ ಪ್ರಕಟಣೆ ತಿಳಿಸಿದೆ.

ಅಂಗನವಾಡಿಗೆ ಹಾನಿ: ಕುಂದಾಪುರ ತಾಲೂಕಿನ ಉಳ್ತೂರು ಗ್ರಾಮದಲ್ಲಿ ನಿನ್ನೆ ಬೀಸಿದ ಗಾಳಿ ಮಳೆಗೆ ಹಲವು ಮನೆಗಳ ಮೇಲೆ ಮರಗಳು ಉರುಳಿ ದೊಡ್ಡ ಮಟ್ಟದ ಹಾನಿ ಸಂಭವಿಸಿದೆ. ಗಜೇಂದ್ರದ ಅವರ ವಾಸ್ತವ್ಯದ ಮನೆಗೆ 30ಸಾವಿರ ರೂ., ಗಿರಿಜ ಅವರ ಮನೆಗೆ 35ಸಾವಿರ, ಲಕ್ಷ್ಮೀ ದೇವಾಡಿಗರ ಮನೆಗೆ 30ಸಾವಿರ, ಸೀತಾ ಅವರ ಮನೆಗೆ 80ಸಾವಿರ ರೂ., ಚಿಕ್ಕು ಅವರ ಮನೆಗೆ 25ಸಾವಿರ ರೂ., ಗುಲಾಬಿ ಅವರ ಮನೆಗೆ 30ಸಾವಿರ, ಪ್ರಭಾಕರರ ಮನೆಗೆ 30ಸಾವಿರ ರೂ. ಹಾಗೂ ಗ್ರಾಮದಲ್ಲಿರುವ ಹಾಲು ಡೈರಿ ಕಟ್ಟಡ ಮೇಲ್ಚಾವಣಿಗೆ 30 ಸಾವಿರ ರೂ. ಹಾಗೂ ಗ್ರಾಮದ ಅಂಗನವಾಡಿ ಕಟ್ಟಡದ ಮೇಲೆ ಮರ ಬಿದು್ದ 30ಸಾವಿರ ರೂ. ನಷ್ಟ ಸಂಭವಿಸಿದೆ.

ಬೈಂದೂರು ತಾಲೂಕು ಉಪ್ಪುಂದ ಗ್ರಾಮದ ಸುಂದರ ಖಾರ್ವಿ ಅವರ ಪಕ್ಕಾ ಮನೆಗೆ ಗಾಳಿ-ಮಳೆಯಿಂದ 50 ಸಾವಿರ ರೂ. ಹಾಗೂ ಶೀರೂರು ಗ್ರಾಮದ ನಾರಾಯಣ ಅವರ ಪಕ್ಕಾ ಮನೆಯ ಮೇಲ್ಚಾವಣಿ ಗಾಳಿಗೆ ಹಾರಿಹೋಗಿ ಒಂದು ಲಕ್ಷ ರೂ.ನಷ್ಟವಾಗಿದೆ.

ಕಾಪು ತಾಲೂಕಿನ ನಂದಿಕೂರು ಗ್ರಾಮದ ಜಯಕರ ಅವರ ಮನೆ ಮೇಲೆ ಮರ ಬಿದ್ದು 15 ಸಾವಿರ ರೂ., ಅದೇ ಗ್ರಾಮದ ಮುದ್ದು ಭಾಸ್ಕರ ಅವರ ಮೇಲೆ ಮರ ಬಿದ್ದು 15 ಸಾವಿರ ರೂ.ಹಾನಿಯಾಗಿದೆ. ಉಡುಪಿ ತಾಲೂಕು ಬೊಮ್ಮರಬೆಟ್ಟು ಗ್ರಾಮದ ಫಕ್ರುದ್ದೀನ್ ಇವರ ವಾಸ್ತವ್ಯದ ಪಕ್ಕಾ ಮನೆ ಗಾಳಿ-ಮಳೆಗೆ ಭಾಗಶ: ಹಾನಿಯಾಗಿ 30ಸಾವಿರ ರೂ., 76 ಬಡಗುಬೆಟ್ಟು ಗ್ರಾಮದ ಲೋಕಯ್ಯ ಇವರ ಮನೆಗೆ 35 ಸಾವಿರ ಹಾಗೂ ಬಡಾನಿಡಿಯೂರು ಗ್ರಾಮದ ತುಕಾರಾಮ್ ರಾವ್ ಅವರ ಮನೆ ಮೇಲೆ ತೆಂಗಿನಮರ ಬಿದ್ದು 15ಸಾವಿರ ರೂ.ನಷ್ಟ ಸಂಭವಿಸಿದೆ.

ಕುಂದಾಪುರ ತಾಲೂಕಿನ ಹೆಂಗವಳ್ಳಿ ಗ್ರಾಮದ ಆನಂದ ಕುಲಾಲರ ಮನೆಯ ತೋಟಕ್ಕೆ ನಿನ್ನೆ ಬೀಸಿದ ಗಾಳಿಯಿಂದ 20 ಸಾವಿರ ರೂ.ಗಳಿಗೂ ಅಧಿಕ ನಷ್ಟ ಸಂಭವಿಸಿದೆ. ಅಲ್ಲದೇ ತಾಲೂಕಿನ ತೆಕ್ಕಟ್ಟೆ ಗ್ರಾಮದ ಗುಲಾಬಿ ಎಂಬವರ ಮನೆಯ ಜಾನುವಾರ ಕೊಟ್ಟಿಗೆಗೆ 30 ಸಾವಿರ ರೂ. ಹಾನಿ ಸಂಭ  ವಿಸಿದೆ ಎಂದು ವರದಿಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X