ಪಿಎಂಇಜಿಪಿ ಯೋಜನೆಯಡಿ ಸ್ವ ಉದ್ಯೋಗ ಆರಂಭಿಸಲು ಅರ್ಜಿ ಆಹ್ವಾನ
ಉಡುಪಿ, ಜೂ.13:2020-21ನೇ ಸಾಲಿನ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಉಡುಪಿ ಜಿಲ್ಲೆಯಲ್ಲಿ ಸ್ವಉದ್ಯೋಗ ಆರಂಭಿಸಲು ಆಸಕ್ತಿ ಇರುವ ನಿರುದ್ಯೋಗಿ ಯುವಕ /ಯುವತಿಯರಿಂದ ಅರ್ಜಿಯನ್ನು ಆಹ್ವಾನಿಸ ಲಾಗಿದೆ.
ಈ ಯೋಜನೆಯನ್ನು ಸ್ವಂತ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಜಿಲ್ಲಾ ಕೈಗಾರಿಕಾ ಕೇಂದ್ರ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ಮತ್ತು ಕಾಯರ್ ಬೋರ್ಡ್ಗಳ ಮುಖಾಂತರ ಜಾರಿಗೊಳಿಸಲಾಗುತ್ತಿದೆ.
ಈ ಯೋಜನೆಯಲ್ಲಿ ನಿರುದ್ಯೋಗಿ ಯುವಕ/ಯುವತಿಯರಿಗೆ ಗರಿಷ್ಠ ಯೋಜನಾ ವೆಚ್ಚ 25 ಲಕ್ಷ ರೂ. ಬ್ಯಾಂಕ್ ಸಾಲದೊಂದಿಗೆ ಹೊಸ ಕೈಗಾರಿಕಾ ಉತ್ಪಾದನೆ ಚಟುವಟಿಕೆ ಹಾಗೂ ಆಯ್ದ ಕೆಲವು ಸೇವಾ ಘಟಕ ಸ್ಥಾಪಿಸುವವರಿಗೆ ಅವಕಾಶವಿದೆ. ಯೋಜನಾ ವೆಚ್ಚದ ಮೇಲೆ ಶೇ.15ರಿಂದ 35ರವರೆಗೆ ಸಹಾಯಧನ ನೀಡಲಾಗುವುದು.
ಉತ್ಪಾದನಾ ಘಟಕವಾಗಿದ್ದಲ್ಲಿ 10 ಲಕ್ಷ ರೂ. ಮತ್ತು ಸೇವಾ ಘಟಕವಾಗಿದ್ದಲ್ಲಿ 5 ಲಕ್ಷ ರೂ.ಗಳಿಗಿಂತ ಮೇಲ್ಪಟ್ಟ ಯೋಜನಾ ವೆಚ್ಚ ಗಳನ್ನೊಳಗೊಂಡ ಘಟಕ ಗಳನ್ನು ಸ್ಥಾಪಿಸುವವರು ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿರಬೇಕು. ಅರ್ಜಿದಾರರಿಗೆ ಕನಿಷ್ಟ 18 ವರ್ಷ ತುಂಬಿರಬೇಕು.
ನಿರುದ್ಯೋಗಿ ಯುವಕ/ಯುವತಿಯರು -https://www.kviconline.gov.in/pmegpeportal/jsp/pmegponline.jsp - ವೆಬ್ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸುವಾಗ ಫೋಟೋ, ಯೋಜನಾ ವರದಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಜನಸಂಖ್ಯೆ ಪ್ರಮಾಣ ಪತ್ರ ಹಾಗೂ ವಿಧ್ಯಾಭ್ಯಾಸದ ದಾಖಲಾತಿಗಳನ್ನು ಆಪ್ಲೋಡ್ ಮಾಡಿದ ನಂತರ ಅರ್ಜಿಯ ಪ್ರಿಂಟ್ ತೆಗೆದು, ಸಂಬಂಧಪಟ್ಟ ದಾಖಲಾತಿ ಗಳೊಂದಿಗೆ, ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಪ್ಲಾಟ್ ನಂ:36-ಸಿ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ ಉಡುಪಿ. (ದೂ.- 0820-2575650), ಅಥವಾ ಜಿಲ್ಲಾ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ರಜತಾದ್ರಿ, ಬಿ ಬ್ಲಾಕ್, 2ನೇ ಮಹಡಿ, ಮಣಿಪಾಲ, ಉಡುಪಿ (0820-2574855), ರಾಜ್ಯ ನಿರ್ದೇಶಕರು, ಖಾದಿ ಗ್ರಾಮೋದ್ಯೋಗ ಆಯೋಗ, ದೂರವಾಣಿ ನಗರ, ಜಿನಾಪುರ, ಬೆಂಗಳೂರು (080-25665885, 080-25665883), ಪ್ರಾದೇಶಿಕ ಕಚೇರಿ, ಕಾಯರ್ ಬೋರ್ಡ್, ನಂ:3ಎ, ಪೀಣ್ಯಾ ಕೈಗಾರಿಕಾ ಪ್ರದೇಶ, ಟಿವಿಎಸ್ ಕ್ರಾಸ್ ಹತ್ತಿರ, ಬೆಂಗಳೂರು 080-28375023 ಇವರಿಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳನ್ನು ಜಿಲ್ಲಾ ಕೈಗಾರಿಕಾ ಕೇಂದ್ರ, ಪ್ಲಾಟ್ ನಂ: 36-ಸಿ, ಶಿವಳ್ಳಿ ಕೈಗಾರಿಕಾ ಪ್ರದೇಶ ಮಣಿಪಾಲ, ಉಡುಪಿ ಹಾಗೂ ಕೈಗಾರಿಕಾ ವಿಸ್ತರಣಾಧಿಕಾರಿ, ಉಡುಪಿ/ಕಾರ್ಕಳ/ ಕುಂದಾಪುರ ಇವರ ಕಛೇರಿಗಳಲ್ಲಿ ಸಹ ಪಡೆಯಬಹುದು. ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರಕಾರ ದಿಂದ ಯಾವುದೇ ಯೋಜನೆಯಲ್ಲಿ ಸಹಾಯಧನ ಪಡೆದವರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ಈ ಯೋಜನೆ ಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಯೋಜನೆಯಲ್ಲಿ ಯಾವುದೇ ಆದಾಯ ಮಿತಿ ಇಲ್ಲ. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಜು.31 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.