Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಎಸ್‍ಎನ್‍ಎಲ್‍ ಗೆ 38.54 ಕೋಟಿ ರೂ....

ಬಿಎಸ್‍ಎನ್‍ಎಲ್‍ ಗೆ 38.54 ಕೋಟಿ ರೂ. ಬಾಕಿ ಉಳಿಸಿಕೊಂಡ ರಾಜ್ಯ ಸರಕಾರ !

-ಯುವರಾಜ್ ಮಾಳಗಿ-ಯುವರಾಜ್ ಮಾಳಗಿ13 Jun 2020 10:01 PM IST
share
ಬಿಎಸ್‍ಎನ್‍ಎಲ್‍ ಗೆ 38.54 ಕೋಟಿ ರೂ. ಬಾಕಿ ಉಳಿಸಿಕೊಂಡ ರಾಜ್ಯ ಸರಕಾರ !

ಬೆಂಗಳೂರು, ಜೂ.13: ರಾಜ್ಯ ಸರಕಾರ ಕೊರೋನ ಲಾಕ್‍ಡೌನ್ ಹಿನ್ನೆಲೆ ಆರ್ಥಿಕವಾಗಿ ಸಂಕಷ್ಟಕ್ಕೆ ಈಡಾಗಿದ್ದು, ಇ-ಆಡಳಿತ, ಗೃಹ, ಲೋಕೋಪಯೋಗಿ, ಬಿಬಿಎಂಪಿ, ಶಿಕ್ಷಣ, ನಗರಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳಿಂದ ಸುಮಾರು 38.54 ಕೋಟಿ ರೂ. ಬಿಎಸ್ಎನ್ಎಲ್‍ ದೂರವಾಣಿ ಬಿಲ್ ಬಾಕಿ ಉಳಿಸಿಕೊಂಡಿವೆ.

2019ರ ನವೆಂಬರ್ ನಿಂದ ಇಲ್ಲಿಯವರಗೆ ಬಿಎಸ್ಎನ್ಎಲ್‍ ದೂರವಾಣಿ ಬಿಲ್‍ಅನ್ನು ರಾಜ್ಯ ಸರಕಾರ ಬಾಕಿ ಉಳಿಸಿಕೊಂಡಿದೆ. ಇಲಾಖೆಗಳ ಕಚೇರಿಗಳಲ್ಲಿರುವ ಸ್ಥಿರ ದೂರವಾಣಿ ಬಳಕೆಗೆ ಸಂಬಂಧಿಸಿದಂತೆ 34.59 ಕೋಟಿ ರೂ. ಹಾಗೂ ಅಧಿಕಾರಿ, ನೌಕರರು ಬಳಸಿಕೊಂಡಿರುವ ಮೊಬೈಲ್ ಸೇವೆಗಳಿಗೆ ಸಂಬಂಧಿಸಿ 3.95 ಕೋಟಿ ರೂ. ಬಾಕಿ ಉಳಿದಿದೆ.

ಶಾಸಕರ ದೂರವಾಣಿ ಬಿಲ್ ಬಾಕಿ: ರಾಜ್ಯ ಸರಕಾರದ ವಿವಿಧ ಇಲಾಖೆಗಳು ಮಾತ್ರವಲ್ಲದೇ ಶಾಸಕರು ಮತ್ತವರ ಕಚೇರಿಯ ದೂರವಾಣಿ ಬಿಲ್ ಕೂಡ ಬಾಕಿ ಇದೆ. ಈ ಸಂಬಂಧ ಸರಕಾರದ ಗಮನ ಸೆಳೆಯಲಾಗಿದೆ. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬಿಎಸ್ಎನ್ಎಲ್‍ ನ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

ಸರಕಾರಕ್ಕೆ ಪತ್ರ: ಬಾಕಿ ಉಳಿಸಿಕೊಂಡಿರುವ ಬಿಎಸ್ಎನ್ಎಲ್‍ ದೂರವಾಣಿ ಬಿಲ್ ಪಾವತಿಸಲು ಸರಕಾರದ ಇಲಾಖೆಗಳ ಮುಖ್ಯಸ್ಥರಿಗೆ ಸೂಚಿಸಬೇಕು ಎಂದು ಬಿಎಸ್ಎನ್ಎಲ್‍ ಮುಖ್ಯ ವ್ಯವಸ್ಥಾಪಕ ಸುಶೀಲ್ ಕುಮಾರ್ ಮಿಶ್ರಾ ಅವರು ಆರ್ಥಿಕ ಇಲಾಖೆಯ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಆರ್ಥಿಕ ಸಂಕಷ್ಟದಲ್ಲಿ ರಾಜ್ಯ ಸರಕಾರ: ಕೊರೋನ ಹಿನ್ನೆಲೆ ಸರಕಾರವೇ ಆರ್ಥಿಕ ಸಂಕಷ್ಟದಲ್ಲಿದ್ದು, ತೆರಿಗೆ ಸಂಗ್ರಹ, ಸೇವಾ ತೆರಿಗೆ, ನೋಂದಣಿ, ಅಬಕಾರಿ ಸೇರಿ ವಿವಿಧ ಮೂಲಗಳಿಂದ ಬರಬೇಕಿದ್ದ ತೆರಿಗೆ ಸರಿಯಾಗಿ ಬಾರದಿರುವುದು ಸಮಸ್ಯೆಯಾಗಿ ಪರಿಣಮಿಸಿದೆ. ಇದರ ನಡುವೆ ಬಾಕಿ ಬಿಲ್ ಪಾವತಿಗೆ ಮುಂದಾಗುವುದು ಕಷ್ಟಸಾಧ್ಯವಾಗಿದೆ.

ಸರಕಾರದ ಮುಖ್ಯ ಕಾರ್ಯದರ್ಶಿಗೂ ಮನವಿ ಸಲ್ಲಿಕೆ

ಬಿಎಸ್ಎನ್ಎಲ್‍ ಆರ್ಥಿಕ ಸಂಕಷ್ಟದಲ್ಲಿದ್ದು, ಸರಕಾರದ ವಿವಿಧ ಇಲಾಖೆಗಳು ಬಾಕಿ ಉಳಿಸಿಕೊಂಡಿರುವ ಹಣ ನೀಡಿದರೆ, ಅನುಕೂಲವಾಗಲಿದೆ ಎಂದು ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ಇಲಾಖಾವಾರು ಪತ್ರ ಬರೆದು ಶೀಘ್ರ ಬಾಕಿ ಹಣ ಪಾವತಿಸುವಂತೆ ಸೂಚಿಸಲಾಗುವುದೆಂದು ಭರವಸೆ ನೀಡಿದ್ದಾರೆ ಎಂದು ಬಿಎಸ್ಎನ್ಎಲ್‍ ಸಿಬ್ಬಂದಿ ತಿಳಿಸಿದ್ದಾರೆ.

ಯಾವ ಇಲಾಖೆಯಿಂದ ಎಷ್ಟು ಬಿಲ್ ಬಾಕಿ?

ಇ-ಆಡಳಿತ ಇಲಾಖೆ 11,77,59,953 ರೂ., ಗೃಹ ಇಲಾಖೆ 9,53,23,581 ರೂ., ಆರೋಗ್ಯ ಇಲಾಖೆ 35,01,241 ರೂ., ಪಿಡಿಒ 5,47,60,039 ರೂ., ಕಂದಾಯ ಇಲಾಖೆ ವ್ಯಾಪ್ತಿಯ ನಾಡ ಕಚೇರಿಗಳು 2,81,06,219, ಕೃಷಿ ಇಲಾಖೆ 37,21,543 ರೂ., ಶಿಕ್ಷಣ 34,92,708 ರೂ., ಅರಣ್ಯ ಇಲಾಖೆ 19,51,259 ರೂ., ಬಿಬಿಎಂಪಿ 38,29,622 ರೂ., ಕಾರ್ಮಿಕ ಇಲಾಖೆ 3,11,780 ರೂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ 4,72,900 ರೂ., ನಗರಾಭಿವೃದ್ಧಿ ಇಲಾಖೆ 11,64,577 ರೂ., ತಾಲೂಕು ಪಂಚಾಯತ್ ಗಳು 11,12,518, ಸಾರಿಗೆ 13,02,495 ರೂ. ಸೇರಿದಂತೆ ವಿವಿಧ ಇಲಾಖೆಗಳಿಂದ ಒಟ್ಟಾರೆ 34.59 ಕೋಟಿ ರೂ. ಬಾಕಿ ಬರಬೇಕಿದೆ.

ಸರಿಯಾದ ಸಮಯಕ್ಕೆ ದೂರವಾಣಿ ಬಾಕಿ ಹಣ ಪಾವತಿಯಾಗದಿದ್ದರೆ ಸೇವೆಗಳನ್ನು ವಿಸ್ತರಿಸುವುದು ಕಷ್ಟವಾಗಲಿದೆ. ಸರಕಾರದ ಇಲಾಖೆಗಳಿಗೆ ಡಿಜಿಟಲ್ ಸಂಪರ್ಕ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಬಾಕಿ ಉಳಿಸಿಕೊಂಡಿರುವ ಮೊತ್ತವನ್ನು ತಕ್ಷಣವೇ ಪಾವತಿಸಲು ಕ್ರಮಕೈಗೊಳ್ಳಬೇಕು ಎಂದು ಸರಕಾರಕ್ಕೆ ಪತ್ರದ ಮುಖೇನ ಸೂಚಿಸಲಾಗಿದೆ.

-ಸುಶೀಲ್ ಕುಮಾರ್ ಮಿಶ್ರಾ, ಬಿಎಸ್ಎನ್ಎಲ್‍‍ ಮುಖ್ಯ ವ್ಯವಸ್ಥಾಪಕ

share
-ಯುವರಾಜ್ ಮಾಳಗಿ
-ಯುವರಾಜ್ ಮಾಳಗಿ
Next Story
X