Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಇಂದು 20 ಮಂದಿಯಲ್ಲಿ ಕೋವಿಡ್-19...

ಉಡುಪಿ: ಇಂದು 20 ಮಂದಿಯಲ್ಲಿ ಕೋವಿಡ್-19 ಸೋಂಕು ದೃಢ

ಆಸ್ಪತ್ರೆಯಿಂದ ಬಿಡುಗಡೆಯಾದವರು 789, ಚಿಕಿತ್ಸೆಯಲ್ಲಿ 235 ಮಂದಿ

ವಾರ್ತಾಭಾರತಿವಾರ್ತಾಭಾರತಿ14 Jun 2020 8:29 PM IST
share
ಉಡುಪಿ: ಇಂದು 20 ಮಂದಿಯಲ್ಲಿ ಕೋವಿಡ್-19 ಸೋಂಕು ದೃಢ

ಉಡುಪಿ, ಜೂ.14: ಉಡುಪಿಯಲ್ಲಿ ರವಿವಾರ ಹೊಸದಾಗಿ 20 ನೋವೆಲ್ ಕೊರೋನ ವೈರಸ್ (ಕೋವಿಡ್-19) ಸೋಂಕಿತರು ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಈವರೆಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ 1025 ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಸೋಂಕು ಪತ್ತೆಯಾದವರಲ್ಲಿ 14 ಮಂದಿ ಪುರುಷರು, ಐವರು ಮಹಿಳೆಯರು ಹಾಗೂ ನಾಲ್ಕು ವರ್ಷ ಪ್ರಾಯದ ಗಂಡು ಮಗು ಸೇರಿದೆ. ಇವರಲ್ಲಿ 17 ಮಂದಿ ಮುಂಬೈ ಹಾಗೂ ಮಹಾರಾಷ್ಟ್ರ ರಾಜ್ಯದಿಂದ ಬಂದರೆ ಒಬ್ಬರು ತಮಿಳುನಾಡಿನಿಂದ ಬಂದವರು, ಒಬ್ಬರು ಉತ್ತರ ಪ್ರದೇಶದಿಂದ ಬಂದವರು ಹಾಗೂ ಒಬ್ಬರು ಸ್ಥಳೀಯವಾಗಿ ಸಂಪರ್ಕಕ್ಕೆ ಬಂದವರಾಗಿದ್ದಾರೆ.

ಇವರು ಮಹಾರಾಷ್ಟ್ರದಿಂದ ಬಂದು ಜೂ.8ರಂದು ಕೊರೋನಕ್ಕೆ ಪಾಸಿಟಿವ್ ಆದ 51 ವರ್ಷ ಪ್ರಾಯದ ಪುರುಷರ ಸಂಪರ್ಕಕ್ಕೆ ಬಂದ 53 ವರ್ಷ ಪ್ರಾಯದ ಪುರುಷರಾಗಿದ್ದಾರೆ ಎಂದು ಡಾ. ಸೂಡ ತಿಳಿಸಿದರು. ಇಂದು ಕುಂದಾಪುರ ತಾಲೂಕಿನ 15 ಮಂದಿ, ಉಡುಪಿಯ ಮೂವರು ಹಾಗೂ ಕಾರ್ಕಳದ ಇಬ್ಬರು ಪಾಸಿಟಿವ್ ಬಂದಿದ್ದಾರೆ.

ಮತ್ತೆ 69 ಮಂದಿ ಬಿಡುಗೆ: ಉಡುಪಿ ಜಿಲ್ಲೆ ಸೋಂಕಿತರ ಸಂಖ್ಯೆಯಲ್ಲಿ ಈಗಲೂ ರಾಜ್ಯದಲ್ಲೇ ಅಗ್ರಸ್ಥಾನದಲ್ಲಿದಲ್ಲಿದ್ದರೂ, ಜಿಲ್ಲೆಯಲ್ಲಿ ಈವರೆಗೆ ಪಾಸಿಟಿವ್ ಬಂದವರಲ್ಲಿ ಶೇ.77ರಷ್ಟು ಮಂದಿ ಈಗಾಗಲೇ ಚಿಕಿತ್ಸೆಯಿಂದ ಗುಣಮುಖರಾಗಿ ಸೋಂಕಿನಿಂದ ವಿಮುಕ್ತಿ ಪಡೆದು ತಮ್ಮ ಮನೆಗಳಿಗೆ ತೆರಳಿದ್ದಾರೆ ಎಂದು ಡಿಎಚ್‌ಓ ತಿಳಿಸಿದರು.

ಇಂದು ಸಂಜೆಯವರೆಗೆ ಒಟ್ಟು 69 ಮಂದಿ ಬಿಡುಗಡೆಯಾಗಿದ್ದು, ಹೀಗಾಗಿ ಜಿಲ್ಲೆಯಲ್ಲಿ ಒಟ್ಟು 789 ಮಂದಿ ಕೋವಿಡ್-19ರ ಸೋಂಕಿನಿಂದ ಸಂಪೂರ್ಣವನಾಗಿ ಚೇತರಿಸಿಕೊಂಡು ಉಡುಪಿ, ಕುಂದಾಪುರ, ಕೊಲ್ಲೂರು ಹಾಗೂ ಕಾರ್ಕಳ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ ಎಂದು ತಿಳಿಸಿದರು. ಈ ಮೂಲಕ ವಿವಿಧ ಆಸ್ಪತ್ರೆಗಳಲ್ಲಿ ಈಗ ಚಿಕಿತ್ಸೆಯಲ್ಲಿರುವವರು ಒಟ್ಟು 235 ಮಂದಿ ಮಾತ್ರ ಎಂದು ಡಾ.ಸುಧೀರ್‌ಚಂದ್ರ ಸೂಡ ಮಾಹಿತಿ ನೀಡಿದರು.

44 ಮಂದಿಯ ಸ್ಯಾಂಪಲ್ ನೆಗೆಟಿವ್:  ಪ್ರಯೋಗಾಲಯದ ಪರೀಕ್ಷೆ ಯಲ್ಲಿ ಇಂದು 20 ಮಂದಿಯ ಸ್ಯಾಂಪಲ್ ಪಾಸಿಟಿವ್ ಆಗಿ ಬಂದಿದ್ದರೆ, 44 ಮಂದಿಯ ವರದಿ ನೆಗೆಟಿವ್ ಆಗಿ ಬಂದಿವೆ ಎಂದು ಡಾ.ಸೂಡ ತಿಳಿಸಿದ್ದಾರೆ. ಇದರೊಂದಿಗೆ ಇಂದು ಕೋವಿಡ್-19ರ ಗುಣಲಕ್ಷಣವಿರುವ 77 ಮಂದಿಯ ಗಂಟಲುದ್ರವ ಮಾದರಿಯನ್ನು ಪರೀಕ್ಷೆಗಾಗಿ ಪಡೆಯಲಾಗಿದೆ. ಇವರಲ್ಲಿ ಕೋವಿಡ್ ಶಂಕಿತರು ಐವರಾದರೆ, ನಾಲ್ವರು ಕೋವಿಡ್ ಸಂಪರ್ಕಿತರು. ಇನ್ನು ಮೂವರು ಉಸಿರಾಟದ ತೊಂದರೆಯಿಂದ, 9 ಮಂದಿ ಶೀತಜ್ವರದಿಂದ ಬಳಲುವವರು. ಅಲ್ಲದೇ 56 ಮಂದಿ ವಿವಿಧ ಕೋವಿಡ್ ಹಾಟ್‌ಸ್ಪಾಟ್‌ಗಳಿಂದ ಬಂದವರ ಮಾದರಿಗಳನ್ನು ಸಹ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಡಾ.ಸೂಡ ವಿವರಿಸಿದರು.

ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಒಟ್ಟು ಮಾದರಿಗಳ ಸಂಖ್ಯೆ 12,907ಕ್ಕೇರಿದೆ. ಇವುಗಳಲ್ಲಿ ಇಂದು ಸಂಜೆಯವರೆಗೆ ಒಟ್ಟು 11,778 ನೆಗೆಟಿವ್ ಆಗಿ ಬಂದರೆ, 1025 ಸ್ಯಾಂಪಲ್ ಪಾಸಿಟಿವ್ ಬಂದಿವೆ. ಹೀಗಾಗಿ ಇನ್ನು 103 ಸ್ಯಾಂಪಲ್‌ಗಳ ವರದಿ ಇನ್ನಷ್ಟೇ ಬರಬೇಕಿದೆ ಎಂದವರು ಹೇಳಿದರು.

ಐಸೋಲೇಷನ್ ವಾರ್ಡಿಗೆ 9 ಮಂದಿ: ಇಂದು ರೋಗದ ಲಕ್ಷಣ ದೊಂದಿಗೆ ಐವರು ಪುರುಷರು ಹಾಗೂ ನಾಲ್ವರು ಮಹಿಳೆಯರು ಸೇರಿ ಒಟ್ಟು 9 ಮಂದಿ ಐಸೋಲೇಷನ್ ವಾರ್ಡ್‌ಗಳಿಗೆ ದಾಖಲಾಗಿದ್ದಾರೆ. ಇವರಲ್ಲಿ ಕೊರೋನ ಶಂಕಿತರು ಒಬ್ಬರು, ಉಸಿರಾಟದ ತೊಂದರೆಯವರು 6 ಮಂದಿ ಹಾಗೂ ಶೀತಜ್ವರದಿಂದ ಬಾಧಿತರಾದ ಇಬ್ಬರು ಸೇರಿದ್ದಾರೆ.

ಜಿಲ್ಲೆಯ ವಿವಿಧ ಆಸ್ಪತ್ರೆಗಳ ಐಸೋಲೇಶನ್ ವಾರ್ಡ್‌ಗಳಿಂದ ಇಂದು 5 ಮಂದಿ ಬಿಡುಗಡೆಗೊಂಡಿದ್ದು, 79 ಮಂದಿ ಇನ್ನೂ ವೈದ್ಯರ ನಿಗಾದಲ್ಲಿ ದ್ದಾರೆ. ಜಿಲ್ಲೆಯಲ್ಲಿ ಕೊರೋನ ಸೋಂಕಿನ ಗುಣಲಕ್ಷಣದ 17ಮಂದಿ ಸೇರಿದಂತೆ ಒಟ್ಟು 5398 ಮಂದಿಯನ್ನು ಕೊರೋನ ತಪಾಸಣೆಗೆ ನೊಂದಾಯಿಸಿಕೊಳ್ಳಲಾಗಿದೆ. ಇವರಲ್ಲಿ 4769 ಮಂದಿ 28 ದಿನಗಳ ಹಾಗೂ 4856 ಮಂದಿ 14 ದಿನಗಳ ನಿಗಾವಣೆಯನ್ನು ಪೂರೈಸಿದ್ದಾರೆ. ಜಿಲ್ಲೆಯಲ್ಲಿ ಈಗ 475 ಮಂದಿ ಹೋಮ್ ಕ್ವಾರಂಟೈನ್‌ನಲ್ಲಿದ್ದಾರೆ ಎಂದು ಡಾ.ಸುಧೀರ್ ‌ಚಂದ್ರ ಸೂಡ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X