ಮೀನುಗಾರ ಭಾಗ್ಯರಾಜ್ ಕುಟುಂಬಕ್ಕೆ 2 ಲಕ್ಷ ರೂ. ಚೆಕ್ ಹಸ್ತಾಂತರ

ಮಲ್ಪೆ, ಜೂ.14: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಬಡಾನಿಡಿಯೂರು ಗ್ರಾಮದ ಮೀನುಗಾರ ಭಾಗ್ಯರಾಜ್ ಅವರ ಮನೆಗೆ ಮೀನುಗಾರಿಕೆ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ರವಿವಾರ ಭೇಟಿ ನೀಡಿ ಮೀನುಗಾರರ ಸಂಕಷ್ಟ ನಿಧಿಯಿಂದ 2 ಲಕ್ಷ ಮೊತ್ತದ ಚೆಕ್ ಕುಟುಂಬಕ್ಕೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಶಾಸಕ ಕೆ.ರಘುಪತಿ ಭಟ್, ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಬಡಾನಿಡಿಯೂರು ಗ್ರಾಪಂ ಅಧ್ಯಕ್ಷ ಉಮೇಶ್ ಪೂಜಾರಿ, ತಾಪಂ ಸದಸ್ಯ ಶರತ್ ಬೈಲಕೆರೆ, ಪ್ರಮುಖರಾದ ಮಂಜು ಕೊಳ, ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Next Story





