Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಭಿಮಾನಿಯ ಪರವಾಗಿ ಕೇರಳ ನೆರೆ...

ಅಭಿಮಾನಿಯ ಪರವಾಗಿ ಕೇರಳ ನೆರೆ ಸಂತ್ರಸ್ತರಿಗಾಗಿ 1 ಕೋ.ರೂ. ದೇಣಿಗೆ ನೀಡಿದ್ದ ಸುಶಾಂತ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ14 Jun 2020 9:41 PM IST
share
ಅಭಿಮಾನಿಯ ಪರವಾಗಿ ಕೇರಳ ನೆರೆ ಸಂತ್ರಸ್ತರಿಗಾಗಿ 1 ಕೋ.ರೂ. ದೇಣಿಗೆ ನೀಡಿದ್ದ ಸುಶಾಂತ್ ಸಿಂಗ್

ಹೊಸದಿಲ್ಲಿ,ಜೂ.14: ಎರಡು ವರ್ಷಗಳ ಹಿಂದೆ ಕೇರಳದಲ್ಲಿ ಉಂಟಾಗಿದ್ದ ಭಾರೀ ನೆರೆ ಎಲ್ಲವನ್ನೂ ನುಂಗಿ ಹಾಕಿತ್ತು. ಅದೆಷ್ಟೋ ಜೀವಗಳು ಬಲಿಯಾಗಿದ್ದವು, ಎಷ್ಟೋ ಜನರು ಸರ್ವಸ್ವವನ್ನೂ ಕಳೆದುಕೊಂಡು ನಿರ್ಗತಿಕರಾಗಿ ಬೀದಿಗೆ ಬಿದ್ದಿದ್ದರು. ರಾಜ್ಯದ ಪುನರ್‌ನಿರ್ಮಾಣಕ್ಕಾಗಿ ಉದಾರ ಹೃದಯಿಗಳು ತಮ್ಮಿಂದ ಸಾಧ್ಯವಿದ್ದ ಎಲ್ಲ ನೆರವುಗಳನ್ನೂ ನೀಡಿದ್ದರು. ಇನ್‌ಸ್ಟಾಗ್ರಾಂ ಬಳಕೆದಾರ ಹಾಗೂ ಸುಶಾಂತ್ ಸಿಂಗ್ ರಜಪೂತ್ ಅವರ ಅಭಿಮಾನಿಯೋರ್ವ ಆಗ ನೆರೆ ಸಂತ್ರಸ್ತರಿಗೆ ಆಹಾರವನ್ನು ಒದಗಿಸಲು ಬಯಸಿದ್ದ,ಏಕೆಂದರೆ ಆತನ ಬಳಿ ನಗದು ದೇಣಿಗೆ ನೀಡಲು ಹಣವಿರಲಿಲ್ಲ. ಅಭಿಮಾನಿಯ ಉದಾತ್ತತೆಗೆ ಸೋತಿದ್ದ ಸುಶಾಂತ್ ಆತನ ಪರವಾಗಿ ಕೇರಳ ನೆರೆ ಪರಿಹಾರ ನಿಧಿಗೆ ಒಂದು ಕೋಟಿ ರೂ.ಗಳ ಬೃಹತ್ ದೇಣಿಗೆಯನ್ನು ಸಲ್ಲಿಸುವುದಾಗಿ ಭರವಸೆ ನೀಡಿದ್ದರು.

ರವಿವಾರ ಮಧ್ಯಾಹ್ನ ಸುಶಾಂತ್ ಅಕಾಲಿಕ ಸಾವಿನ ಸುದ್ದಿ ಅಂತರ್ಜಾಲದಲ್ಲಿ ಹರಿದಾಡುತ್ತಿದ್ದಂತೆ ಅವರು ಈ ಅಭಿಮಾನಿಯೊಂದಿಗೆ ನಡೆಸಿದ್ದ ಹಳೆಯ ಇನ್‌ಸ್ಟಾಗ್ರಾಂ ಸಂಭಾಷಣೆಯ ಸ್ಕ್ರೀನ್‌ಶಾಟ್‌ಗಳೂ ಮತ್ತೆ ಕಾಣಿಸಿಕೊಂಡಿವೆ.

ಅಭಿಮಾನಿಗೆ ಭರವಸೆ ನೀಡಿದ್ದಂತೆ ಸುಶಾಂತ್ ಕೇರಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಂದು ಕೋ.ರೂ.ಗಳ ದೇಣಿಗೆಯನ್ನು ಸಲ್ಲಿಸಿದ್ದರು. ನಂತರ ಸುಶಾಂತ್‌, “ಪ್ರೀತಿಯ ಗೆಳೆಯ,ನಿಮಗೆ ಭರವಸೆ ನೀಡಿದ್ದಂತೆ ನೀವು ಏನನ್ನು ಮಾಡಲು ಬಯಸಿದ್ದಿರೋ ಅದನ್ನು ಮಾಡಿದ್ದೇನೆ. ನಾನು ಹೀಗೆ ಮಾಡಲು ನೀವು ಸ್ಫೂರ್ತಿಯಾಗಿದ್ದೀರಿ, ಹೀಗಾಗಿ ನಿಮ್ಮ ಬಗ್ಗೆ ನನಗೆ ತುಂಬ ಹೆಮ್ಮೆಯಿದೆ. ಯಾವುದು ಅತ್ಯಂತ ಅಗತ್ಯವಾಗಿತ್ತೋ ಅದನ್ನು ನೀವು ಪೂರೈಸಿದ್ದೀರಿ. ಅಭಿನಂದನೆಗಳು” ಎಂದು ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ಬರೆದಿದ್ದರು.

ಪಿಣರಾಯಿ ಸಂತಾಪ

ಸುಶಾಂತ್ ಅವರ ನಿಸ್ವಾರ್ಥ ಕೊಡುಗೆಯನ್ನು ಸ್ಮರಿಸುತ್ತ ಅವರ ನಿಧನಕ್ಕೆ ಸಂತಾಪಗಳನ್ನು ವ್ಯಕ್ತಪಡಿಸಿ ಟ್ವೀಟಿಸಿರುವ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, “ಸುಶಾಂತ್ ಸಿಂಗ್ ರಜಪೂತ್ ಇನ್ನಿಲ್ಲವೆಂಬ ಸುದ್ದಿ ನಮಗೆ ತುಂಬ ದುಃಖವನ್ನುಂಟು ಮಾಡಿದೆ. ಅವರ ಅಕಾಲಿಕ ಸಾವಿನಿಂದ ಭಾರತೀಯ ಚಿತ್ರೋದ್ಯಮಕ್ಕೆ ಭಾರೀ ನಷ್ಟವಾಗಿದೆ. ಅವರ ಕುಟುಂಬ,ಸ್ನೇಹಿತರು ಮತ್ತು ಬೆಂಬಲಿಗರಿಗೆ ನಮ್ಮ ಹೃತ್ಪೂರ್ವಕ ಸಂತಾಪಗಳು. ಕೇರಳ ನೆರೆ ಸಂದರ್ಭದಲ್ಲಿ ಅವರ ಬೆಂಬಲವನ್ನು ನಾವು ಸ್ಮರಿಸುತ್ತಿದ್ದೇವೆ” ಎಂದು ಹೇಳಿದ್ದಾರೆ. ಟ್ವೀಟ್ ಜೊತೆ ಸುಷಾಂತ್ ಚಿತ್ರವನ್ನೂ ಅವರು ಲಗತ್ತಿಸಿದ್ದಾರೆ.

ಎಲ್ಲರಂತಿರಲಿಲ್ಲ

 ಒಳ್ಳೆಯ ಕೆಲಸಕ್ಕೆ ದೇಣಿಗೆಯನ್ನು ನೀಡುವ ತಾರೆಯರನ್ನು ನಾವು ನೋಡಿದ್ದೇವೆ. ಆದರೆ ಬಹುಶಃ ಈ ರೀತಿಯಲ್ಲಿ ಅಲ್ಲ. ಸುಶಾಂತ್ ಬಹುಬೇಡಿಕೆಯ ತಾರೆಯಾಗಿದ್ದರೂ ತಳಮಟ್ಟದಲ್ಲಿಯೂ ಅಭಿಮಾನಿಗಳೊಂದಿಗೆ ಸಂಪರ್ಕವಿಟ್ಟುಕೊಂಡಿರುವ ಕೆಲವೇ ಬಾಲಿವುಡ್ ನಟರ ಪೈಕಿ ಒಬ್ಬರಾಗಿದ್ದರು. ಅವರು ಪ್ರತಿಯೊಂದೂ ಕಮೆಂಟ್‌ನ್ನು ಗಮನವಿಟ್ಟು ಓದುತ್ತಿದ್ದರು. ತನ್ನ ಮನಸ್ಸನ್ನು ತಟ್ಟಿದ ಕಮೆಂಟ್‌ಗಳಿಗೆ ಉತ್ತರಿಸುತ್ತಿದ್ದರು. ಅವರು ಹಲವಾರು ಬಾರಿ ಇನ್‌ಸ್ಟಾಗ್ರಾಮ್‌ನಲ್ಲಿ ತನ್ನ ಅಭಿಮಾನಿಗಳೊಂದಿಗೆ ಬೌದ್ಧಿಕ ಚರ್ಚೆಗಳಲ್ಲಿಯೂ ತೊಡಗಿಕೊಳ್ಳುತ್ತಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X