Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ.ಜಿಲ್ಲೆಯಲ್ಲಿ ಭತ್ತ ಕೃಷಿ ಚಟುವಟಿಕೆ...

ದ.ಕ.ಜಿಲ್ಲೆಯಲ್ಲಿ ಭತ್ತ ಕೃಷಿ ಚಟುವಟಿಕೆ ಆರಂಭ: 10,260 ಹೆಕ್ಟೇರ್ ಗುರಿ

ವಾರ್ತಾಭಾರತಿವಾರ್ತಾಭಾರತಿ14 Jun 2020 10:21 PM IST
share
ದ.ಕ.ಜಿಲ್ಲೆಯಲ್ಲಿ ಭತ್ತ ಕೃಷಿ ಚಟುವಟಿಕೆ ಆರಂಭ: 10,260 ಹೆಕ್ಟೇರ್ ಗುರಿ

ಮಂಗಳೂರು, ಜೂ.14: ಕರ್ನಾಟಕ ಕರಾವಳಿಯಲ್ಲಿ ಮುಂಗಾರು ಬಿರುಸುಗೊಳ್ಳುತ್ತಿರುವ ಮಧ್ಯೆಯೇ ರೈತರ ಮುಖದಲ್ಲಿ ಮಂದಹಾಸ ಕಂಡುಬರುತ್ತಿವೆ. ಕೃಷಿ ಚಟುವಟಿಕೆಯೂ ಚುರುಕುಗೊಳ್ಳುತ್ತಿವೆ. ಭತ್ತ ಕೃಷಿಗಾಗಿ ಉಳುಮೆ, ಬೀಜ ಬಿತ್ತನೆ ಕೆಲಸಗಳು ಆರಂಭಗೊಂಡಿವೆ.

ಕಳೆದ ಮುಂಗಾರು ತಡವಾಗಿ ಆರಂಭವಾದ ಕಾರಣ ಕೃಷಿ ಚಟುವಟಿಕೆಗಳು ವಿಳಂಬವಾಗಿತ್ತು. ಆದರೆ ಈ ಬಾರಿ ನಿಗದಿತ ಅವಧಿಯಲ್ಲೇ ಮುಂಗಾರು ಕರಾವಳಿಗೆ ಆಗಮಿಸಿದ್ದರಿಂದ ಗ್ರಾಮಾಂತರ ಪ್ರದೇಶದ ಹಳ್ಳ, ಕೊಳ್ಳ, ಕೆರೆಗಳಲ್ಲಿ ನೀರು ಸಂಗ್ರಹವಾಗಿದೆ. ರೈತರು ನಾಟಿಗಿಂತ ಬಿತ್ತನೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಉಳುಮೆ ಮಾಡಿ ಗದ್ದೆಗಳನ್ನು ಹದ ಮಾಡುವ ಕೆಲಸಗಳು ಭರದಿಂದ ನಡೆಯುತ್ತಿವೆ. ಚಾಪೆ ಮಾದರಿ ಯಲ್ಲಿ ನೇಜಿ ಮಾಡಿಟ್ಟುಕೊಂಡು ನಾಟಿ ಮಾಡಲು ರೈತರು ಮುಂದಾಗಿದ್ದಾರೆ.

ಜಿಲ್ಲೆಯಲ್ಲಿ ಈಗಾಗಲೇ ಭತ್ತದ ಕೃಷಿ ಆರಂಭವಾಗಿದೆ. ಈ ಬಾರಿ ಪೂರ್ವ ಮುಂಗಾರು ಮಳೆ ಉತ್ತಮವಾಗಿದ್ದರಿಂದ ರೈತರು ಗದ್ದೆ ಉತ್ತು ನಾಟಿಗೆ ಸಿದ್ಧರಾಗಿದ್ದಾರೆ. ಮುಂಗಾರು ಆರಂಭವಾಗುತ್ತಿದ್ದಂತೆ ಬಿತ್ತನೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಬಿತ್ತನೆ, ಬೀಜ, ರಸಗೊಬ್ಬರ ವಿತರಣೆ ಕಾರ್ಯವೂ ಭಾಗಶಃ ಪೂರ್ಣಗೊಂಡಿದೆ ಎಂದು ಕೃಷಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

10,260 ಹೆಕ್ಟೇರ್ ಗುರಿ

ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ದ.ಕ. ಜಿಲ್ಲೆಯಲ್ಲಿ 10,260 ಹೆಕ್ಟೇರ್ ಪ್ರದೇಶಲ್ಲಿ ಭತ್ತ ಬೆಳೆಯುವ ಗುರಿ ಇದೆ. 2019-20ನೇ ಸಾಲಿನಲ್ಲಿ 15,900 ಹೆಕ್ಟೇರ್ ಪ್ರದೇಶಲ್ಲಿ ಭತ್ತ ಬೆಳೆಯುವ ಗುರಿಯಲ್ಲಿ ಕೇವಲ 10,411 ಹೆಕ್ಟೇರ್ ಮಾತ್ರ ಬೆಳೆಯಾಗಿತ್ತು. ಜಿಲ್ಲೆಯಲ್ಲಿ ವರ್ಷ ದಿಂದ ವರ್ಷಕ್ಕೆ ಗದ್ದೆಗಳು, ಭತ್ತ ಬೆಳೆಯುವ ರೈತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತಿರುವುದೇ ಇದಕ್ಕೆ ಕಾರಣವಾಗಿದೆ.

ಬೀಜ-ರಸಗೊಬ್ಬರ ಪೂರೈಕೆ

ಶೇ.90ರಷ್ಟು ಬಿತ್ತನೆ ಬೀಜವನ್ನು ಈಗಾಗಲೇ ಜಿಲ್ಲೆಯ ರೈತರಿಗೆ ವಿತರಿಸಲಾಗಿದೆ. ಎಂಒ-4ಗೆ ರೈತರಿಂದ ಹೆಚ್ಚು ಬೇಡಿಕೆಯಿದ್ದು, ಉಳಿದಂತೆ ಜಯ, ಜ್ಯೋತಿ ತಳಿಯೂ ಲಭ್ಯವಿದೆ. ದ.ಕ ಜಿಲ್ಲೆಗೆ 600 ಕ್ವಿಂಟಾಲ್ ಬೀಜ ಬಂದಿದ್ದು, ಶೇ.95ರಷ್ಟು ರೈತ ಸಂಪರ್ಕ ಕೇಂದ್ರಗಳ ಮೂಲಕ ವಿತರಣೆ ಮಾಡಲಾಗಿದೆ. ಅಲ್ಲದೆ 5 ಸಾವಿರ ಟನ್ ರಸಗೊಬ್ಬರ ದಾಸ್ತಾನಿದ್ದು, ರೈತರಿಗೆ ವಿತರಿಸುವ ಪ್ರಕ್ರಿಯೆ ನಡೆಯುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X