Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ...

ಓ ಮೆಣಸೇ...

ಪಿ.ಎ.ರೈಪಿ.ಎ.ರೈ14 Jun 2020 11:02 PM IST
share
ಓ ಮೆಣಸೇ...

ಮೋದಿ ನೇತೃತ್ವದ ಕೇಂದ್ರ ಸರಕಾರ ನುಡಿದಂತೆ ನಡೆಯುತ್ತಿದೆ
 - ಅಮಿತ್‌ಶಾ, ಕೇಂದ್ರ ಸಚಿವ

ಬಹುಶಃ ಆರೆಸ್ಸೆಸ್ ನುಡಿದಂತೆ ನಡೆಯುತ್ತಿರಬೇಕು.


ಒಂದು ಕುಟುಂಬದವರು ತಮ್ಮ ಭಾವನೆಗಳನ್ನು ಹಂಚಿಕೊಳ್ಳುವುದು ಅಸಮಾಧಾನ ಎಂದಾದರೆ ಬಿಜೆಪಿಯಲ್ಲಿ ಅಸಮಾಧಾನವಿದೆ
 -ಈಶ್ವರಪ್ಪ, ಸಚಿವ
ಭಾವನೆಗಳನ್ನು ಹಂಚಿಕೊಳ್ಳುವಾಗ ಕುಟುಂಬ ಒಡೆಯಬಾರದಲ್ಲ?


ಕೊರೋನ ಸಹಿತ ಪ್ರತಿಯೊಂದು ವಿಚಾರದಲ್ಲೂ ಸರಕಾರವೇ ಕಡಿವಾಣ ಹಾಕುವುದು ಸಾಧ್ಯವಿಲ್ಲ -ಬಸವರಾಜ ಬೊಮ್ಮಾಯಿ, ಸಚಿವ

ಸರಕಾರಕ್ಕೆ ಕಡಿವಾಣ ಹಾಕುವವರಿಲ್ಲದ ಪರಿಣಾಮ ಇದು.


ಈ ತನಕ ದೇಶದಲ್ಲಿ ಯಾರೊಬ್ಬರೂ ಪ್ರಶ್ನೆ ಮಾಡದಂತೆ ನಾನು ನಡೆದುಕೊಂಡು ಬಂದಿದ್ದೇನೆ -ದೇವೇಗೌಡ, ಮಾಜಿ ಪ್ರಧಾನಿ
ಅಂದರೆ ನಿಮ್ಮನ್ನು ಪ್ರಶ್ನೆ ಮಾಡುವುದು ತಪ್ಪೇ?


ಎಸೆಸೆಲ್ಸಿ ಪರೀಕ್ಷೆಯನ್ನು ರದ್ದುಗೊಳಿಸುವ ಪ್ರಶ್ನೆಯೇ ಇಲ್ಲ - ಸುರೇಶ್‌ಕುಮಾರ್, ಸಚಿವ

ಕೊರೋನ ಪರೀಕ್ಷೆಯನ್ನು ರದ್ದುಗೊಳಿಸುವ ಉದ್ದೇಶ ಇರಬೇಕು.


ಸಕ್ಕರೆ ಕಾರ್ಖಾನೆ ಸಹಿತ ರಾಜ್ಯದ ಎಲ್ಲ ಕೈಗಾರಿಕೆಗಳನ್ನು ಖಾಸಗೀಕರಣ ಮಾಡುವುದು ಉತ್ತಮ
 -ಮುರುಗೇಶ್ ನಿರಾಣಿ, ಶಾಸಕ

=ಖಾಸಗಿಯವರ ಬಾಯಿಗೆ ಸಕ್ಕರೆ, ಬಡವರ ಬಾಯಿಗೆ ವಿಷ.


ಕೋವಿಡ್-19 ಸೋಂಕಿನ ವಿಷಯದಲ್ಲಿ ವಿಶ್ವದ ಇತರ ರಾಷ್ಟ್ರಗಳಿಗಿಂತ ಭಾರತ ಸುರಕ್ಷಿತ ಸ್ಥಾನದಲ್ಲಿದೆ - ಡಾ.ಹರ್ಷವರ್ಧನ್, ಕೇಂದ್ರ ಸಚಿವ

ಬಹುಶಃ ಬಾಲ್ಕನಿ ಇವರ ಪ್ರಕಾರ ಸುರಕ್ಷಿತ ಸ್ಥಾನವಾಗಿರಬೇಕು.


ನಾವು ಕಾನೂನು ಗೌರವಿಸುವವರೇ ಹೊರತು ಕಾನೂನು ಭಂಗ ಮಾಡುವವರಲ್ಲ -ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ

ಕಾನೂನುಗಳನ್ನು ಮಾಡಿರುವುದೇ ಅವುಗಳನ್ನು ಭಂಗ ಮಾಡುವುದಕ್ಕಂತೆ.


ಜಾತ್ಯತೀತತೆ, ಜನರ ಸಮಸ್ಯೆ, ಪಕ್ಷದ ಉಳಿವು ನನಗೆ ಮುಖ್ಯ - ದೇವೇಗೌಡ, ಮಾಜಿ ಪ್ರಧಾನಿ

ಕೆಲವೊಮ್ಮೆ ಪಕ್ಷದ ಉಳಿವಿಗಾಗಿ ಜಾತ್ಯತೀತತೆ, ಜನರ ಸಮಸ್ಯೆಗಳನ್ನು ಬದಿಗಿಡಲಾಗುವುದು.


ಮಹಾರಾಷ್ಟ್ರದಿಂದ ಬಂದವರಿಗೆ ಇನ್ನ್ನು ಅವರವರ ಮನೆಯಲ್ಲಿಯೇ ಕ್ವಾರಂಟೈನ್ - ಶ್ರೀರಾಮುಲು, ಸಚಿವ
ನಿಮ್ಮನ್ನು ಮಹಾರಾಷ್ಟ್ರಕ್ಕೆ ಕೊಂಡೊಯ್ದು ಕ್ವಾರಂಟೈನ್ ಮಾಡಿದರೆ ಹೇಗೆ?


ಈ ಡಿಸೆಂಬರ್ ಒಳಗಾಗಿ ದೇಶದಲ್ಲಿ ರಾಜಕೀಯ ಧ್ರುವೀಕರಣ ಸಂಭವಿಸಲಿದೆ - ಎಚ್.ವಿಶ್ವನಾಥ್, ಮಾಜಿ ಸಚಿವ
ಈ ಬಾರಿ ನಿಮ್ಮ ರೇಟೆಷ್ಟು?


ರಾಜ್ಯದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲಿ ಈ ಬಾರಿ ರಾಜ್ಯಸಭೆಗೆ ಬಿಜೆಪಿ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಟ್ಟಿದೆ - ಯಡಿಯೂರಪ್ಪ, ಮುಖ್ಯಮಂತ್ರಿ

ಆರೆಸ್ಸೆಸ್‌ನ ಸಾಮಾನ್ಯ ಕಾರ್ಯಕರ್ತರಿಗೆ ಎಂದರೆ ಇನ್ನೂ ಅರ್ಥಪೂರ್ಣ.


ನಮ್ಮ ಪಕ್ಷದಲ್ಲಿ ಮಾತ್ರ ಸಾಮಾನ್ಯ ಕಾರ್ಯಕರ್ತರಿಗೆ ಅಧಿಕಾರ ಸಿಗುತ್ತದೆ - ನಳಿನ್ ಕುಮಾರ್ ಕಟೀಲು, ಸಂಸದ

ಮತಹಾಕಿದವರಿಗೆ ಮಾತ್ರ ಚಿಪ್ಪು ಸಿಗುತ್ತದೆ ಎಂಬ ಆರೋಪಗಳಿವೆ.


ಮೋದಿ ಹೇಳಿದಂತೆ ಜನರು ಕೇಳುವುದರಿಂದಲೇ ಭಾರತದಲ್ಲಿ ಕೊರೋನ ನಿಯಂತ್ರಣ ಸಾಧ್ಯವಾಯಿತು
 -ಆದಿತ್ಯನಾಥ್, ಉ.ಪ್ರ.ಮುಖ್ಯಮಂತ್ರಿ
ಭಾರತದಲ್ಲಿ ಕೊರೋನ ನಿಯಂತ್ರಣದಲ್ಲಿದೆಯೇ?


ಪ.ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜಕೀಯ ನಿರಾಶ್ರಿತೆ ಆಗುವುದು ನಿಶ್ಚಿತ - ಅಮಿತ್ ಶಾ, ಕೇಂದ್ರ ಸಚಿವ

ಇಡೀ ಭಾರತವೇ ನಿರಾಶ್ರಿತರ ಶಿಬಿರವಾಗಿದೆ ನಿಮ್ಮ ಪ್ರಯತ್ನದಿಂದ.


ರಾಜ್ಯದಲ್ಲಿ ಸೋಂಕು ಹರಡಲು ಮಹಾರಾಷ್ಟ್ರದಿಂದ ಬಂದವರೇ ಕಾರಣ - ಬಸವರಾಜ ಬೊಮ್ಮಾಯಿ, ಸಚಿವ
‘ನಮಸ್ತೆ ಟ್ರಂಪ್’ ಸಮಾವೇಶ ಮಹಾರಾಷ್ಟ್ರದಲ್ಲಿ ನಡೆದಿರುವುದೇ?


ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಕಾರಣ -ಸಿ.ಟಿ.ರವಿ, ಸಚಿವ
ಸಂತೋಷ್ ಅವರ ಹರ ಪ್ರಯತ್ನ ವಿಫಲವಾದದ್ದೇ ಕಾರಣ ಎನ್ನಬಹುದು.


ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಬಿಜೆಪಿಯನ್ನು ಕಂಗಾಲಾಗಿಸಿದೆ - ಯು.ಟಿ.ಖಾದರ್, ಮಾಜಿ ಸಚಿವ

ಕಾಂಗ್ರೆಸ್‌ನಲ್ಲಿರುವ ಕೆಲವು ನಾಯಕರನ್ನೂ ಕಂಗಾಲಾಗಿಸಿರುವ ವದಂತಿಗಳಿವೆ.


ಗುಜರಾತ್‌ನಲ್ಲಿ ಆದಂತೆ ರಾಜಸ್ಥಾನದಲ್ಲಿ ನಮ್ಮ ಶಾಸಕರನ್ನು ಸೆಳೆಯಲು ಬಿಜೆಪಿಗೆ ಸಾಧ್ಯವಿಲ್ಲ - ಅಶೋಕ್ ಗೆಹ್ಲೋಟ್, ರಾಜಸ್ಥಾನ ಮುಖ್ಯಮಂತ್ರಿ

ಮತ್ತೆ ಶಾಸಕರನ್ನು ರೆಸಾರ್ಟ್‌ನಲ್ಲಿ ಇಟ್ಟಿರುವುದು?.


ದೇವೇಗೌಡರು ನನ್ನ ಬೆಂಬಲದಿಂದ ರಾಜ್ಯಸಭೆಗೆ ಆಯ್ಕೆಯಾದರು ಎಂದು ಹೇಳಲು ನಾನು ಮುಟ್ಟಾಳನಲ್ಲ - ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ
ನಿಮ್ಮ ಬೆಂಬಲದಿಂದ ಆಯ್ಕೆಯಾದ ದೇವೇಗೌಡರೇ ಮುಟ್ಟಾಳರು ಎಂದು ಹೇಳುತ್ತಿದ್ದೀರಾ?


ಕೋವಿಡ್-19 ಬಿಕ್ಕಟ್ಟು ದಿಟ್ಟ ನಿರ್ಧಾರ ತಳೆಯಲು ದೊರೆತ ಸದವಕಾಶ -ನರೇಂದ್ರ ಮೋದಿ, ಪ್ರಧಾನಿ

ನಿಮಗೆ ದಿಟ್ಟ ನಿರ್ಧಾರ ತಳೆಯಲು ಇನ್ನೂ ಯಾವ ಯಾವ ವೈರಸ್‌ಗಳ ಅಗತ್ಯವಿದೆ ಎನ್ನುವುದನ್ನು ಹೇಳಿ ಬಿಡಿ.


ಬ್ರಾಹ್ಮಣರಿಗೆ ಆಸ್ತಿಗಿಂತ ಶಿಕ್ಷಣವೇ ಸಂಪತ್ತು - ಯಡಿಯೂರಪ್ಪ, ಮುಖ್ಯಮಂತ್ರಿ
ಅದಕ್ಕೇ ಉಳಿದವರ ಕೈಯಿಂದ ಶಿಕ್ಷಣ ಕಿತ್ತು ಬ್ರಾಹ್ಮಣರಿಗೆ ನೀಡುವ ಉದ್ದೇಶವೇನಾದರೂ ಇದೆಯೇ? 

share
ಪಿ.ಎ.ರೈ
ಪಿ.ಎ.ರೈ
Next Story
X