Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಭೂಸುಧಾರಣೆ ತಿದ್ದುಪಡಿಗೆ ಕಿಸಾನ್...

ಉಡುಪಿ: ಭೂಸುಧಾರಣೆ ತಿದ್ದುಪಡಿಗೆ ಕಿಸಾನ್ ಕಾಂಗ್ರೆಸ್ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ15 Jun 2020 6:33 PM IST
share

ಉಡುಪಿ, ಜೂ.15: ಕರ್ನಾಟಕದ ಬಿಜೆಪಿ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ಭೂಸುಧಾರಣೆಯ ಕಾಯ್ದೆಯ ತಿದ್ದುಪಡಿ ರೈತರಿಗೆ ಬಹುದೊಡ್ಡ ಹೊಡೆತವಾಗಿದ್ದು, ಇದನ್ನು ಕೂಡಲೇ ಹಿಂಪಡೆಯಬೇಕೆಂದು ಉಡುಪಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಬಲವಾಗಿ ಒತ್ತಾಯಿಸಿದೆ.

ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಪ್ರಾರಂಭದಿಂದಲೂ ರೈತ ವಿರೋಧಿ ನೀತಿಯನ್ನೇ ಅನುಸರಿಸುತ್ತಿದ್ದು, ಇದು ಕೂಡ ಅದರದ್ದೆ ಮುಂದಿನ ಭಾಗವಾಗಿದೆಎಂದು ಆಕ್ರೋಶ ವ್ಯಕ್ತಪಡಿಸಿರುವ ಕಿಸಾನ್ ಕಾಂಗ್ರೆಸ್, ಕೇಂದ್ರದಲ್ಲಿ ಆರು ವರ್ಷಗಳ ಹಿಂದೆ ಅಧಿಕಾರ ಪಡೆದ ಮೋದಿ ಸರಕಾರ, ರೈತರ ಭೂಮಿ ಯನ್ನು ಕಂಪೆನಿಗಳಿಗೆ ನೀಡುವ ತಿದ್ದುಪಡಿ ಆದೇಶಕ್ಕೆ ಮೂರು ಬಾರಿ ಸುಗ್ರೀವಾಜ್ಞೆ ಯನ್ನು ತಂದು ರಾಜ್ಯಸಭೆಯಲ್ಲಿ ಬಹುಮತವಿಲ್ಲದೆ ಬಿದ್ದು ಹೋಗಿರುವುದನ್ನು ರೈತರು ಇನ್ನೂ ಮರೆತಿಲ್ಲಾ ಎಂದು ಹೇಳಿದೆ.

ಈಗಾಗಲೇ ರಾಜ್ಯ ಸರಕಾರ ಎಪಿಎಂಸಿ ಹಾಗೂ ಮೆಸ್ಕಾಂ ಇಲಾಖೆಗೆ ತಿದ್ದುಪಡಿಯನ್ನು ತಂದು ರೈತರಿಗೆ ಆಘಾತವನ್ನು ನೀಡಿಯಾಗಿದೆ. ಈಗ ರೈತರ ಭೂಮಿಯನ್ನು ಉದ್ಯಮಿಗಳು ಖರೀದಿಸುವಂತೆ ಮಾಡುವ ಹುನ್ನಾರ ಇದರಲ್ಲಿ ಅಡಗಿದೆ. ಈ ಕಾಯಿದೆ ಏನಾದರೂ ಜಾರಿಗೆ ಬಂದರೆ ನಮ್ಮ ಹಿರಿಯರು ಕಷ್ಟಪಟ್ಟು ನಿರ್ಮಾಣ ಮಾಡಿದ ಗದ್ದೆಗಳೇ ಇಲ್ಲದೆ ಹೋಗುವ ಸಂಭವವಿದೆ. ಬ್ರಿಟಿಷ ಸಹ ತಮ್ಮ ಅವಧಿಯಲ್ಲಿ ಭಾರತದ ಕೃಷಿಗೆ ತೊಂದರೆಯಾಗುವ ಯಾವುದೇ ಕಾಯ್ದೆಗಳನ್ನು ಜಾರಿಗೆ ತಂದಿರಲಿಲ್ಲ. ಆದರೆ ಜನರಿಂದಲೇ ಆಯ್ಕೆಯಾದ ನಮ್ಮ ಸರಕಾರ, ರೈತರ ಕಾನೆ, ಬಾನೆ, ಕೆರೆ, ಗೋಮಾಳ, ಕುಮ್ಕಿಗಳನ್ನು ಈಗಾಗಲೇ ರಾಜಕಾರಣಿಗಳಿಗೆ ದಾನ ಮಾಡಿಯಾಗಿದೆ. ಈಗ ಕೃಷಿ ಭೂಮಿಯನ್ನು ಕೂಡ ರಿಯಲ್ ಎಸ್ಟೇಟ್ ದಂಧೆಯವರ ಪಾಲಾಗುವ ಕಾಯ್ದೆಯನ್ನು ತರಲಾಗುತ್ತಿದೆ ಎಂದು ಕಿಸಾನ್ ಕಾಂಗ್ರೆಸ್ ಕಳವಳ ವ್ಯಕ್ತಪಡಿಸಿದೆ.

ಖಂಡಿತವಾಗಿ ಇದು ಬಡವರಿಗೋಸ್ಕರ ಮಾಡಿದ ಕಾಯ್ದೆ ಅಲ್ಲ. ಇದು ಕಂದಾಯ ಸಚಿವ ಆರ್. ಆಶೋಕರ ರಿಯಲ್ ಎಸ್ಟೇಟ್ ಸಹೋದ್ಯೋಗಿ ಗಳಿಗಾಗಿ ಮಾಡಿದ ಕಾನೂನಾಗಿದೆ. ಇದರ ಹಿಂದೆ ಯಾವ ಕಾಣದ ಕೈಗಳು ಕೆಲಸ ಮಾಡಿವೆ ಎಂದು ಎಲ್ಲಾ ರಾಜಕೀಯ ನಾಯಕರುಗಳಿಗೆ ಗೊತ್ತಿದೆ. ಆದ್ದರಿಂದ ರೈತರ ಭೂಮಿ ಕಸಿಯುವ ಕಾಯಿದೆಯನ್ನು ಜಾರಿಗೆ ತಂದಲ್ಲಿ ಕಿಸಾನ್ ಕಾಂಗ್ರೆಸ್ ಘಟಕ ಪಕ್ಷಭೇದವಿಲ್ಲದೆ ಎಲ್ಲಾ ರೈತರ ಪರವಾಗಿ ರಸ್ತೆಗಿಳಿದು ತೀವ್ರವಾದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ ಎಂದು ಉಡುಪಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಎಲ್ಲೂರು ಶಶಿಧರ್ ಶೆಟ್ಟಿ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X