Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿರ್ವ ಸಮೀಪ ಜಗತ್ತಿನ ಬೃಹತ್ ಗಾತ್ರದ...

ಶಿರ್ವ ಸಮೀಪ ಜಗತ್ತಿನ ಬೃಹತ್ ಗಾತ್ರದ ‘ಅಟ್ಲಾಸ್ ಮೋತ್’ ಪತ್ತೆ

ಬಾಯಿಯೇ ಇಲ್ಲದ ಈ ವಿಚಿತ್ರ ಪತಂಗದ ಜೀವಿತಾವಧಿ ಎರಡೇ ವಾರ !

ವಾರ್ತಾಭಾರತಿವಾರ್ತಾಭಾರತಿ15 Jun 2020 8:38 PM IST
share
ಶಿರ್ವ ಸಮೀಪ ಜಗತ್ತಿನ ಬೃಹತ್ ಗಾತ್ರದ ‘ಅಟ್ಲಾಸ್ ಮೋತ್’ ಪತ್ತೆ

ಶಿರ್ವ, ಜೂ.15: ಕಲ್ಲೊಟ್ಟಿ ಗ್ರಾಮದ ನೈಸರ್ಗಿಕ ನಾಗಬನದಲ್ಲಿ ಅಪರೂಪದ ದೈತ್ಯಾಕಾರದ ಪತಂಗ ‘ಅಟ್ಲಾಸ್ ಮೋತ್’ ಇಂದು ಪತ್ತೆಯಾಗಿದೆ.

ಉಡುಪಿಯ ಉರಗ ತಜ್ಞ ಗುರುರಾಜ್ ಸನಿಲ್ ಈ ಪತಂಗವನ್ನು ಗಮನಿಸಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಪ್ರಪಂಚದ ಅತ್ಯಂತ ಬೃಹತ್ ಗಾತ್ರದ ಈ ಪತಂಗದ ವೈಜ್ಞಾನಿಕ ಹೆಸರು ಅಟ್ಟಾಕಾಸ್ ಅಟ್ಲಾಸ್. ಇದರ ರೆಕ್ಕೆಯ ವಿಸ್ತೀರ್ಣ 24 ಸೆ.ಮೀ. ಆಗಿದೆ.

ಈ ಪತಂಗ ಸ್ಥಳೀಯವಾಗಿ ಕಂಡುಬರುವ ಪೇರಳೆ, ಸಂಪಿಗೆ ಸೇರಿದಂತೆ ಕೆಲವೊಂದು ಸೀಮಿತ ಮರಗಳ ಎಲೆಗಳಲ್ಲಿ ಮೊಟ್ಟೆ ಇಡುತ್ತದೆ. ಬಳಿಕ ಮೊಟ್ಟೆ ಯಿಂದ ಹೊರ ಬರುವ ಹುಳ ಆ ಮರದ ಎಲೆಗಳನ್ನು ತಿಂದು ಕೋಶವನ್ನು ರಚಿಸುತ್ತದೆ. ಅದರಿಂದ ಹೊರಗೆ ಬರುವ ಗಂಡು ಪತಂಗವು, ಹೆಣ್ಣು ಪತಂಗ ದೊಂದಿಗೆ ಸೇರಿ ಸಾಯುತ್ತದೆ. ಮುಂದೆ ಹೆಣ್ಣು ಪತಂಗ ಮೊಟ್ಟೆ ಇಟ್ಟು ನಂತರ ಸಾಯುತ್ತದೆ.

ವಿಶೇಷ ಅಂದರೆ ಈ ಪತಂಗಕ್ಕೆ ಬಾಯಿ, ಜೀರ್ಣಾಂಗ ವ್ಯವಸ್ಥೆ ಎಂಬುದೇ ಇಲ್ಲ. ಆದುದರಿಂದ ಕೋಶದಿಂದ ಹೊರಬಂದು ಪೂರ್ಣಾವಸ್ಥೆಯ ಪತಂಗ ಆದ ನಂತರ ಯಾವುದನ್ನೂ ತಿನ್ನುವುದಿಲ್ಲ. ಇದಕ್ಕೆ ಬೇಕಾದ ಎಲ್ಲ ಎನರ್ಜಿ ಯನ್ನು ಹುಳ ಆಗಿರುವಾಗಲೇ ಎಲೆಗಳನ್ನು ತಿಂದು ಇಟ್ಟುಕೊಳ್ಳುತ್ತದೆ. ಹಾಗಾಗಿ ಇದು ಒಂದು ಅಥವಾ ಎರಡು ವಾರಗಳ ಕಾಲ ಮಾತ್ರ ಬದುಕಿರುತ್ತದೆ. ತನ್ನ ಎನರ್ಜಿಯನ್ನು ಉಳಿಸಿಕೊಳ್ಳಲು ಅದು ತುಂಬಾ ಕಡಿಮೆ ಹಾರಾಟ ಮಾಡುತ್ತದೆ. ಹೆಚ್ಚು ಸಮಯ ಎಲೆಯ ಮೇಲೆ ವಿಶ್ರಾಂತಿಯಲ್ಲಿರುತ್ತದೆ. ದಿನ ಕಳೆದಂತೆ ತುಂಬಾ ಬಲಹೀನವಾಗುವ ಈ ಪತಂಗ ಹಕ್ಕಿ, ಓತಿ, ಇರುವೆಗಳಿಗೆ ಆಹಾರವಾಗುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X