Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನಲ್ಲಿ ಕಂಟೈನ್ಮೆಂಟ್ ಝೋನ್ ಗಳ...

ಬೆಂಗಳೂರಿನಲ್ಲಿ ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆ 142ಕ್ಕೆ ಏರಿಕೆ

ವಾರ್ತಾಭಾರತಿವಾರ್ತಾಭಾರತಿ15 Jun 2020 9:03 PM IST
share
ಬೆಂಗಳೂರಿನಲ್ಲಿ ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆ 142ಕ್ಕೆ ಏರಿಕೆ

ಬೆಂಗಳೂರು, ಜೂ.15: ಕೊರೋನ ಸೋಂಕು ಬೆಂಗಳೂರಿನ ಮೂಲೆ ಮೂಲೆಗಳಿಗೂ ವ್ಯಾಪಿಸುತ್ತಿದ್ದು 198 ವಾರ್ಡ್‍ಗಳಲ್ಲಿ ಈಗಾಗಲೇ 122 ವಾರ್ಡ್‍ಗಳಿಗೆ ಕೊರೋನ ಕಾಲಿಟ್ಟಿರುವುದರಿಂದ 142 ವಲಯಗಳನ್ನು ಕಂಟೈನ್ಮೆಂಟ್ ಝೋನ್ ಗಳನ್ನಾಗಿ ಗುರುತಿಸಲಾಗಿದೆ.

ನಗರಕ್ಕೆ ಮಹಾರಾಷ್ಟ್ರ, ತಮಿಳುನಾಡು ಕಡೆಯಿಂದ ಬಂದಿರುವವರು ಹಾಗೂ ಬೇರೆ ಜಿಲ್ಲೆಗಳಿಂದ ಬಂದಿರುವವರಿಂದ ಸ್ಥಳೀಯರಿಗೆ ಸೋಂಕು ತಗಲುತ್ತಿರುವ ವರದಿಗಳಾಗುತ್ತಿದ್ದು, ಇದರಿಂದಾಗಿ ರವಿವಾರದಿಂದ ಇಲ್ಲಿಯವರೆಗೆ 32 ಹೊಸ ಕಂಟೈನ್ಮೆಂಟ್ ವಲಯಗಳನ್ನು ಗುರುತಿಸಲಾಗಿದ್ದು, ಇದರಿಂದ ಪ್ರತಿ ರಸ್ತೆಯನ್ನೂ ಸೀಲ್‍ಡೌನ್ ಮಾಡಲಾಗುತ್ತಿದೆ.

ಆರಂಭದಲ್ಲಿ ಕೆಲವೇ ವಲಯಗಳಲ್ಲಿ ಮಾತ್ರ ಕಾಣಿಸಿಕೊಂಡಿದ್ದ ಸೋಂಕು ಈಗ ಎಲ್ಲ ಎಂಟು ವಲಯಗಳಲ್ಲೂ ಸೋಂಕು ಕಾಣಿಸತೊಡಗಿದೆ. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಕೊರೋನ ಸೋಂಕಿತರ ಸಂಖ್ಯೆ ಮಿತಿ ಮೀರುವ ಸಾಧ್ಯತೆ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರು ಹೇಳಿದ್ದಾರೆ. ಇದರಿಂದ ಸೋಂಕು ಹರಡುವುದನ್ನು ತಡೆಗಟ್ಟಲು ಬಿಬಿಎಂಪಿ ಅಧಿಕಾರಿಗಳು ಎಷ್ಟೇ ಕ್ರಮ ಕೈಗೊಂಡರೂ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ.

ಪಶ್ಚಿಮ ವಲಯ ಒಂದರಲ್ಲೇ 35 ಕಂಟೈನ್ಮೆಂಟ್ ಪ್ರದೇಶಗಳಿದ್ದು ಅತಿ ಹೆಚ್ಚು ಸೋಂಕಿತರು ಇದೇ ವ್ಯಾಪ್ತಿಯಲ್ಲಿದ್ದಾರೆ. ಇದುವರೆಗೂ ಪಶ್ಚಿಮ ವಲಯದಲ್ಲಿ 142 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 8 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ನಂತರದ ಸ್ಥಾನ ಪೂರ್ವ ವಲಯದ್ದಾಗಿದ್ದು, ಇಲ್ಲಿ 24 ಕಂಟೈನ್ಮೆಂಟ್ ಪ್ರದೇಶಗಳಿದ್ದು, 136 ಮಂದಿಗೆ ಸೋಂಕು ತಗುಲಿದ್ದು, 8 ಮಂದಿ ಮೃತಪಟ್ಟಿದ್ದಾರೆ. ದಕ್ಷಿಣ ವಲಯದಲ್ಲಿ 23 ಕಂಟೈನ್ಮೆಂಟ್ ಪ್ರದೇಶಗಳಿದ್ದು 76 ಜನರಿಗೆ ಸೋಂಕು ಕಾಣಿಸಿಕೊಂಡಿದ್ದು, 6 ಮಂದಿ ಬಲಿಯಾಗಿದ್ದಾರೆ. ಬೊಮ್ಮನಹಳ್ಳಿ ವಲಯದಲ್ಲಿ 17 ಕಂಟೈನ್ಮೆಂಟ್ ಪ್ರದೇಶಗಳಿದ್ದು 98 ಜನರಿಗೆ ಸೋಂಕು ತಗುಲಿದೆ. ಮಹದೇವಪುರ ವಲಯದಲ್ಲಿ 15 ಕಂಟೈನ್ಮೆಂಟ್ ಪ್ರದೇಶಗಳಿದ್ದು 36 ಮಂದಿ ಸೋಂಕಿತರಿದ್ದಾರೆ.

ಯಲಹಂಕ ವಲಯದಲ್ಲಿ 6 ವಾರ್ಡ್‍ಗಳನ್ನು ಕಂಟೈನ್ಮೆಂಟ್ ಪ್ರದೇಶ ಎಂದು ಗುರುತಿಸಲಾಗಿದ್ದು ಇದುವರೆಗೂ 11 ಜನರಿಗೆ ಕೊರೋನ ಸೋಂಕು ತಗುಲಿದೆ. ದಾಸರಹಳ್ಳಿ ವಲಯದಲ್ಲಿ 5 ವಾರ್ಡ್‍ಗಳು ಕಂಟೈನ್ಮೆಂಟ್ ಪ್ರದೇಶಗಳಾಗಿದ್ದು 6 ಮಂದಿಗೆ ಸೋಂಕು ತಗುಲಿದರೆ, ಆರ್.ಆರ್.ನಗರದ 2 ವಾರ್ಡ್‍ಗಳು ಕಂಟೈನ್ಮೆಂಟ್ ಪ್ರದೇಶಗಳಾಗಿದ್ದು ಐವರಿಗೆ ಸೋಂಕು ಕಾಣಿಸಿಕೊಂಡಿದ್ದು, ಇವರಲ್ಲಿ ಒಬ್ಬ ಕೊರೋನ ವೈರಸ್‍ಗೆ ಬಲಿಯಾಗಿದ್ದಾನೆ.

ಒಟ್ಟಾರೆ 122 ವಾರ್ಡ್‍ಗಳಿಗೂ ಮಹಾಮಾರಿ ವಕ್ಕರಿಸಿದ್ದು, ಮುಂದಿನ ಎರಡು ತಿಂಗಳೊಳಗೆ ಇಡೀ ನಗರಕ್ಕೇ ಸೋಂಕು ಹರಡುವ ಭೀತಿ ಎದುರಾಗಿದೆ. ಲಾಕ್‍ಡೌನ್ ತೆರವು ನಂತರ ನಾಗರಿಕರು ಸೋಂಕಿನ ಕುರಿತು ಗಂಭೀರವಾಗಿ ಪರಿಗಣಿಸದೇ ಇರುವುದರಿಂದ ಸೋಂಕು ಹರಡುತ್ತಲೇ ಇದೆ. ಇದು ಬಿಬಿಎಂಪಿ ಅಧಿಕಾರಿಗಳಿಗೆ ತಲೆಬಿಸಿಯಾಗುವಂತೆ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X