Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಆಸ್ಟ್ರೇಲಿಯ ಪ್ರಜೆಗೆ ಚೀನಾದಲ್ಲಿ...

ಆಸ್ಟ್ರೇಲಿಯ ಪ್ರಜೆಗೆ ಚೀನಾದಲ್ಲಿ ಮರಣದಂಡನೆ: ಪ್ರಧಾನಿ ಸ್ಕಾಟ್ ಮೊರಿಸನ್ ಕಳವಳ

ವಾರ್ತಾಭಾರತಿವಾರ್ತಾಭಾರತಿ15 Jun 2020 9:45 PM IST
share
ಆಸ್ಟ್ರೇಲಿಯ ಪ್ರಜೆಗೆ ಚೀನಾದಲ್ಲಿ ಮರಣದಂಡನೆ: ಪ್ರಧಾನಿ ಸ್ಕಾಟ್ ಮೊರಿಸನ್ ಕಳವಳ

ಸಿಡ್ನಿ (ಆಸ್ಟ್ರೇಲಿಯ), ಜೂ. 15: ಪ್ರಕರಣವೊಂದಕ್ಕೆ ಸಂಬಂಧಿಸಿ ಆಸ್ಟ್ರೇಲಿಯದ ವ್ಯಕ್ತಿಯೊಬ್ಬನಿಗೆ ಚೀನಾದಲ್ಲಿ ಮರಣದಂಡನೆ ವಿಧಿಸಿರುವುದಕ್ಕೆ ಆಸ್ಟ್ರೇಲಿಯ ಪ್ರಧಾನಿ ಸ್ಕಾಟ್ ಮೊರಿಸನ್ ಸೋಮವಾರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣವು ಈಗಾಗಲೇ ಹದಗೆಟ್ಟಿರುವ ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಉದ್ವಿಗ್ನಗೊಳಿಸುವ ಸಾಧ್ಯತೆಗಳಿವೆ.

ಸಿಡ್ನಿಯ ನಟ ಹಾಗೂ ಬಳಿಕ ಹೂಡಿಕೆ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮ್ ಗಿಲೆಸ್ಪಿಗೆ ಮಾದಕದ್ರವ್ಯ ಕಳ್ಳಸಾಗಣೆ ಆರೋಪದಲ್ಲಿ ಮರಣದಂಡನೆ ವಿಧಿಸಲಾಗಿದೆ ಎಂಬುದಾಗಿ ಚೀನಾದ ನ್ಯಾಯಾಲಯವೊಂದು ಶನಿವಾರ ಘೋಷಿಸಿದೆ. ಅವರನ್ನು ಏಳು ವರ್ಷಗಳ ಕಾಲ ರಹಸ್ಯವಾಗಿ ಬಂಧನದಲ್ಲಿಡಲಾಗಿತ್ತು.

ಈಗಾಗಲೇ ಹದಗೆಡುತ್ತಿರುವ ಆಸ್ಟ್ರೇಲಿಯ ಮತ್ತು ಚೀನಾಗಳ ನಡುವಿನ ರಾಜತಾಂತ್ರಿಕ ಮತ್ತು ವ್ಯಾಪಾರ ಸಂಬಂಧಗಳನ್ನು ಈ ಪ್ರಕರಣವು ಇನ್ನಷ್ಟು ಕದಡಬಹುದು ಎನ್ನಲಾಗಿದೆ. ಚೀನಾವು ಆಸ್ಟ್ರೇಲಿಯದ ಅತಿ ದೊಡ್ಡ ವ್ಯಾಪಾರ ಭಾಗೀದಾರ ದೇಶವಾಗಿದೆ.

ಗಿಲೆಸ್ಪಿಯ ಬಂಧನದ ಬಗ್ಗೆ ಪ್ರಧಾನಿ ಸ್ಕಾಟ್ ಮೊರಿಸನ್ ಮತ್ತು ಆಸ್ಟ್ರೇಲಿಯದ ಇತರ ಅಧಿಕಾರಿಗಳಿಗೆ ತಿಳಿದಿತ್ತು. ಈ ವಿಷಯದಲ್ಲಿ ಅವರು ಚೀನಾದ ಅಧಿಕಾರಿಗಳೊಂದಿಗೆ ಹಲವು ಬಾರಿ ಮಾತುಕತೆ ನಡೆಸಿದ್ದರು.

‘‘ಆಸ್ಟ್ರೇಲಿಯದ ಪ್ರಜೆ ಕಾರ್ಮ್ ಗಿಲೆಸ್ಪಿಗೆ ಚೀನಾದಲ್ಲಿ ಮರಣ ದಂಡನೆ ನೀಡಿರುವುದನ್ನು ತಿಳಿದು ನನಗೆ ಮತ್ತು ಸರಕಾರಕ್ಕೆ ತುಂಬಾ ಬೇಸರ ಹಾಗೂ ಕಳವಳವಾಗಿದೆ’’ ಎಂದು ಸ್ಕಾಟ್ ಮೊರಿಸನ್ ಹೇಳಿದ್ದಾರೆ.

2013ರಲ್ಲಿ ವಾಯುವ್ಯ ಹಾಂಕಾಂಗ್‌ನ ಬೈಯೂನ್ ವಿಮಾನ ನಿಲ್ದಾಣದಲ್ಲಿ ಗಿಲೆಸ್ಪಿಯ ಚೀಲದಲ್ಲಿ 7.5 ಕೆಜಿಗೂ ಅಧಿಕ ಮೆಥಾಮ್‌ಫೆಟಮೈನ್ ಪತ್ತೆಯಾದ ಬಳಿಕ ಅವರನ್ನು ಬಂಧಿಸಲಾಗಿತ್ತು ಎಂದು ಚೀನಾದ ಸರಕಾರಿ ಮಾಧ್ಯಮಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X