Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನ ಸೋಂಕು ಏರಿಕೆ ಹಿನ್ನೆಲೆ: ನೂತನ...

ಕೊರೋನ ಸೋಂಕು ಏರಿಕೆ ಹಿನ್ನೆಲೆ: ನೂತನ ಮಾರ್ಗಸೂಚಿ ಪ್ರಕಟಿಸಿದ ಕೊಡಗು ಜಿಲ್ಲಾಡಳಿತ

ವಾರ್ತಾಭಾರತಿವಾರ್ತಾಭಾರತಿ15 Jun 2020 10:44 PM IST
share
ಕೊರೋನ ಸೋಂಕು ಏರಿಕೆ ಹಿನ್ನೆಲೆ: ನೂತನ ಮಾರ್ಗಸೂಚಿ ಪ್ರಕಟಿಸಿದ ಕೊಡಗು ಜಿಲ್ಲಾಡಳಿತ

ಮಡಿಕೇರಿ, ಜೂ.15: ಕೊರೋನ ಲಾಕ್‍ಡೌನ್ ಸಡಿಲಗೊಂಡ ಬಳಿಕ ದೇಶ ಹಾಗೂ ರಾಜ್ಯಾದ್ಯಂತ ಸೋಂಕಿನ ಪ್ರಮಾಣ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲೂ ಸಂತೆ-ಮಾರುಕಟ್ಟೆ ನಡೆಸಲು ನೂತನ ಮಾರ್ಗಸೂಚಿಗಳನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹೊರಡಿಸಿದ್ದಾರೆ. ಅದರಂತೆ ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. 

ಇತ್ತೀಚಿನ ದಿನಗಳಲ್ಲಿ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಸಂತೆ, ಮಾರುಕಟ್ಟೆಗಳು ಎಂದಿನಂತೆ ಕಾರ್ಯಾರಂಭ ಮಾಡಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗಳು ಮತ್ತೊಮ್ಮೆ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಇದನ್ನು ಉಲ್ಲಂಘಿಸುವವರ ವಿರುದ್ಧ ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆಕ್ಟ್ ಮತ್ತು ಸಂಬಂಧಿತ ಕಾಯ್ದೆಗಳಡಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಕಂಟೈನ್ಮೆಂಟ್ ವಲಯಗಳಲ್ಲಿ ಸಂತೆ ಮಾರುಕಟ್ಟೆ ತೆರೆಯಲು ಮತ್ತು ಸಂತೆಗೆ ಹೋಗಲು ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಸರ್ಕಾರದ ಇತ್ತೀಚಿನ ಆದೇಶದಂತೆ ವಿದೇಶದಿಂದ ಆಗಮಿಸಿದವರಿಗೆ 28 ದಿನಗಳ ಮತ್ತು ಹೊರ ರಾಜ್ಯದಿಂದ ಆಗಮಿಸಿದವರಿಗೆ 14 ದಿನಗಳ ಸಾಂಸ್ಥಿಕ - ಗೃಹ ಸಂಪರ್ಕ ತಡೆ ಕಡ್ಡಾಯವಾಗಿದೆ. ಆದ್ದರಿಂದ ಕ್ವಾರಂಟೈನ್ ಅವಧಿ ಪೂರ್ಣಗೊಳ್ಳುವವರೆಗೆ ವ್ಯಾಪಾರಿಗಳಿಗೆ ಮತ್ತು ಗ್ರಾಹಕರಿಗೆ ವ್ಯಾಪಾರ ವಹಿವಾಟಿಗೆ ಅವಕಾಶ ಇರುವುದಿಲ್ಲ ಮತ್ತು ಈ ಬಗ್ಗೆ ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು ಎಂದೂ ಸಲಹೆ ಮಾಡಿದ್ದಾರೆ. 

20 ಅಡಿ ಅಂತರ: ಕೈಗೆ ಕ್ವಾರೆಂಟೈನ್ ಮೊಹರು ಹಚ್ಚಿದ್ದಲ್ಲಿ ಕ್ವಾರೆಂಟೈನ್ ಅವಧಿ ಪೂರ್ಣಗೊಳ್ಳುವವರೆಗೆ ಅವಕಾಶ ಇರುವುದಿಲ್ಲ. ಈ ಬಗ್ಗೆಯೂ ನಿಗಾ ವಹಿಸಬೇಕು. ವ್ಯಾಪಾರಸ್ಥರು, ಒಂದು ಅಂಗಡಿಯಿಂದ ಮತ್ತೊಂದು ಅಂಗಡಿಗೆ  20 ಅಡಿ ಅಂತರವನ್ನು ಕಾಯ್ದುಕೊಳ್ಳಬೇಕು. ಒಂದು ಅಂಗಡಿಯಲ್ಲಿ ಒಬ್ಬ ಗ್ರಾಹಕರು ಖರೀದಿ ಮಾಡಿದ ನಂತರ ಮತ್ತೊಬ್ಬ ಗ್ರಾಹಕರಿಗೆ ಅನುವು ಮಾಡಿಕೊಡಬೇಕು ಮತ್ತು ಪ್ರತಿಯೊಬ್ಬ ಗ್ರಾಹಕರು 6 ಅಡಿ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.

ಮಾಸ್ಕ್ ಕಡ್ಡಾಯ: ವ್ಯಾಪಾರಿಗಳು ಮತ್ತು ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. 65 ವರ್ಷಕ್ಕಿಂತ ಹೆಚ್ಚಿನ ವಯೋವೃದ್ಧರು, ಸಹ ಅಸ್ವಸ್ಥತೆ ಉಳ್ಳವರು, ಗರ್ಭಿಣಿ ಮಹಿಳೆಯರು ಹಾಗೂ 10 ವರ್ಷಕ್ಕಿಂತ ಕಡಿಮೆ  ವಯಸ್ಸಿನ ಮಕ್ಕಳು ಆಗಮಿಸುವಂತಿಲ್ಲ. ಆಗಮನ ದ್ವಾರದಲ್ಲಿ ಥರ್ಮಲ್ ಸ್ಕ್ಯಾನರ್ ಬಳಸಿ ಆಗಮಿಸುವ ಯಾವುದೇ ವ್ಯಕ್ತಿ (37.5ಲಿ ಅ ಅಥವಾ  99.5 ಲಿ ಈ ಕ್ಕಿಂತ ಹೆಚ್ಚು) ಜ್ವರ, ನೆಗಡಿ, ಕೆಮ್ಮು, ಉಸಿರಾಟದ ತೊಂದರೆಯಿಂದ ಬಳಲುತ್ತಿರುವುದು ಕಂಡು ಬಂದಲ್ಲಿ ತಕ್ಷಣವೇ ವೈದ್ಯಕೀಯ ಸಲಹೆಗಾಗಿ ಸಮೀಪದ ಸರ್ಕಾರಿ ಆಸ್ಪತ್ರೆಗೆ ತೆರಳಲು ಸಲಹೆ ನೀಡಬೇಕು ಅಥವಾ ಸಮೀಪದ ಸರ್ಕಾರಿ ಆಸ್ಪತ್ರೆಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ವಾಹನಗಳಿಗೆ ಅವಕಾಶವಿಲ್ಲ: ಮಾರುಕಟ್ಟೆಯಲ್ಲಿ ಆರೋಗ್ಯವಂತ ವ್ಯಾಪಾರಿಗಳಿಗೆ ಮತ್ತು ಗ್ರಾಹಕರಿಗೆ ಮಾತ್ರ ಅವಕಾಶವಿದ್ದು, ಗ್ರಾಹಕರು 6 ಅಡಿಗಳ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ನೆಲದಲ್ಲಿ ಗುರುತು ಮಾಡಬೇಕು. ಸಾಧ್ಯವಾದಷ್ಟು ಆಗಮನ ಮತ್ತು ನಿರ್ಗಮನಕ್ಕೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಬೇಕು. ಸಂತೆ ಮಾರುಕಟ್ಟೆ ಒಳಭಾಗದಲ್ಲಿ ವಾಹನಗಳಿಗೆ ಪ್ರವೇಶವಿರುವುದಿಲ್ಲ.

ಸ್ಯಾನಿಟೈಸರ್ ಕಡ್ಡಾಯ: ವ್ಯಾಪಾರಸ್ಥರು ತಮ್ಮ ತಮ್ಮ ಅಂಗಡಿಗಳಲ್ಲಿ ಸಾನಿಟೈಜರ್ ಅನ್ನು ಕಡ್ಡಾಯವಾಗಿ ಒದಗಿಸಬೇಕು. ಮತ್ತು ವ್ಯಾಪಾರದ ಸ್ಥಳವನ್ನು ಸ್ಯಾನಿಟೈಸೇಝನ್ ಮಾಡಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಸಂತೆ, ಮಾರುಕಟ್ಟೆಯಲ್ಲಿ ಅಲ್ಲಲ್ಲಿ ಸೂಕ್ತ ಸ್ಥಳಗಳಲ್ಲಿ, ಕೈ ತೊಳೆಯಲು ಸಾಬೂನು ಮತ್ತು ನೀರನ್ನು ಇಡತಕ್ಕದ್ದು ಎಂದು ಹೇಳಿದ್ದಾರೆ.

ಉಗುಳುವುದು ನಿಷಿದ್ಧ: ವ್ಯಾಪಾರಿಗಳು ವ್ಯಾಪಾರ ಮಾಡುವ ಸ್ಥಳವನ್ನು ಸ್ವಚ್ಛ ಮತ್ತು ನೈರ್ಮಲ್ಯದಿಂದ ಇಡಬೇಕು. ಪ್ರತಿ ಸಂತೆ ಪೂರ್ವಭಾವಿಯಾಗಿ ಹಿಂದಿನ ದಿನ ಹಾಗೂ ತರುವಾಯ ಸಂತೆ ಮಾರುಕಟ್ಟೆ ಆವರಣವನ್ನು 1% ಸೋಡಿಯಂ ಹೈಪೋಕ್ಲೋರೈಡ್ ದ್ರಾವಣದಿಂದ ಸೋಂಕು ನಿವಾರಣೆಗೊಳಿಸಬೇಕು. ಸಂತೆ-ಮಾರುಕಟ್ಟೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ, ಪಾನ್,  ಗುಟ್ಕ, ತಂಬಾಕು ಇತ್ಯಾದಿಗಳ ಸೇವನೆಯನ್ನೂ ಕಡ್ಡಾಯವಾಗಿ ನಿಷೇಧಿಸಿದೆ. 

ಪಾರ್ಸೆಲ್ ಮಾತ್ರ: ಸಂತೆ-ಮಾರುಕಟ್ಟೆಯಲ್ಲಿ ಐಸ್ ಕ್ರೀಮ್, ಪಾನಿ ಪೂರಿ ಮುಂತಾದ ಆಹಾರ ಪದಾರ್ಥಗಳನ್ನು ಸ್ಥಳದಲ್ಲೇ ಸೇವಿಸುವಂತಿಲ್ಲ (ಪಾರ್ಸೆಲ್ ತೆಗೆದುಕೊಂಡು ಹೋಗಬಹುದು). ಮಕ್ಕಳ ಆಟದ ಸ್ಥಳ, ಮನೋರಂಜನೆ ಕಾರ್ಯಕ್ರಮಗಳನ್ನು ನಡೆಸಲು ಅವಕಾಶವಿರುವುದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ವೈದ್ಯರ ಫಲಕ ಕಡ್ಡಾಯ: ತುರ್ತು ಸಂದರ್ಭಗಳಲ್ಲಿ ಲಭ್ಯವಿರುವ ವೈದ್ಯರ ಬಗ್ಗೆ ಮಾಹಿತಿಯನ್ನು ನಾಮಫಲಕದಲ್ಲಿ ಕಡ್ಡಾಯವಾಗಿ ಒದಗಿಸಬೇಕು. ಸಂತೆ - ಮಾರುಕಟ್ಟೆಯ ಮುಖ್ಯ ದ್ವಾರದಲ್ಲಿ ಮತ್ತು ಅಲ್ಲಲ್ಲಿ ಸೂಕ್ತ ಸ್ಥಳಗಳಲ್ಲಿ ಕೋವಿಡ್ -19 ಕುರಿತಂತೆ ಮಾರ್ಗಸೂಚಿಗಳಿರುವ ಎಚ್ಚರಿಕೆ ಫಲಕ ಅಳವಡಿಸಬೇಕು. ಸಂತೆ ನಡೆಯುವ ಸ್ಥಳದಲ್ಲಿ ಅಲ್ಲಲ್ಲಿ ವ್ಯವಸ್ಥೆಗಳ ಮೇಲುಸ್ತುವಾರಿಗಾಗಿ ಸ್ವಯಂ ಸೇವಕರು ಹಾಗೂ ಮಾರುಕಟ್ಟೆ ಸಮನ್ವಯತೆಗೆ ಸಂಬಂಧಪಟ್ಟ ಪಂಚಾಯತ್‍ಗಳು ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು ಎಂದೂ ಸಲಹೆ ಮಾಡಿದ್ದಾರೆ. 

ವಿಳಾಸ ಕಡ್ಡಾಯ: ಸಂತೆಗೆ ಹಾಜರಾಗುವ ವ್ಯಾಪಾರಿಗಳ ಹೆಸರು, ವಿಳಾಸ, ಮೊಬೈಲ್ ನಂಬರ್ ಹಾಗೂ ಸಂಪರ್ಕ ವಿವರವನ್ನು ಕಡ್ಡಾಯವಾಗಿ ಪಡೆಯಬೇಕು ಮತ್ತು ಕಾಪಾಡಿಕೊಳ್ಳಬೇಕು. ಮೊಬೈಲ್‍ನಲ್ಲಿ 'ಆರೋಗ್ಯ ಸೇತು ಆಪ್'ನ್ನು ಡೌನ್  ಲೋಡ್ ಮಾಡಿಕೊಂಡು  ಅಳವಡಿಸಿಕೊಳ್ಳಬೇಕು. ಯಾವುದೇ ವಿಚಾರಗಳಿಗೆ ಸ್ಥಳೀಯ ಪಂಚಾಯತ್ ಅಥವಾ ಜಿಲ್ಲಾಡಳಿತ ಕಂಟ್ರೋಲ್ ರೂಂ. 1077 ಅಥವಾ ವಾಟ್ಸಪ್ 8550001077ನ್ನು ಸಂಪರ್ಕಿಸಬಹುದು. 

ಈ ನಿಯಮಗಳ ಉಲ್ಲಂಘನೆಯಾದಲ್ಲಿ ಡಿಸಾಸ್ಟರ್ ಮ್ಯಾನೇಜ್ ಮೆಂಟ್ ಆಕ್ಟ್ ಮತ್ತು ಸಂಬಂಧಿತ ಕಾಯ್ದೆಗಳಡಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X