Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶದಲ್ಲಿ ಕೋವಿಡ್-19 ಪರೀಕ್ಷಾ ಸಾಮರ್ಥ್ಯ...

ದೇಶದಲ್ಲಿ ಕೋವಿಡ್-19 ಪರೀಕ್ಷಾ ಸಾಮರ್ಥ್ಯ ಹೆಚ್ಚಳ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ವಾರ್ತಾಭಾರತಿವಾರ್ತಾಭಾರತಿ16 Jun 2020 9:22 PM IST
share
ದೇಶದಲ್ಲಿ ಕೋವಿಡ್-19 ಪರೀಕ್ಷಾ ಸಾಮರ್ಥ್ಯ ಹೆಚ್ಚಳ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಹೊಸದಿಲ್ಲಿ, ಜೂ.16: ಹಾಸಿಗೆಗಳ ಲಭ್ಯತೆ ಹೆಚ್ಚಳ ಹಾಗು ನಿರ್ಣಾಯಕ ಆರೋಗ್ಯ ಆರೈಕೆ ಮತ್ತು ಸೇವೆ ಸೌಲಭ್ಯಗಳ ನ್ಯಾಯಯುತ ಮತ್ತು ಪಾರದರ್ಶಕ ಶುಲ್ಕ ವಿಧಿಸುವಿಕೆ ಖಚಿತಪಡಿಸಿಕೊಳ್ಳಲು ಖಾಸಗಿ ಆರೋಗ್ಯ ಸೇವೆ ಪೂರೈಕೆದಾರರೊಂದಿಗೆ ಪೂರ್ವಭಾವಿ ಮಾತುಕತೆಗೆ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೂಚಿಸಿದೆ.

ಈ ನಿಟ್ಟಿನಲ್ಲಿ ಕರ್ನಾಟಕ, ತಮಿಳುನಾಡು, ಒಡಿಶಾ, ಮಹಾರಾಷ್ಟ್ರ, ಗುಜರಾತ್, ಉತ್ತರ ಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಈಗಾಗಲೆ ಕ್ರಮ ಕೈಗೊಂಡಿವೆ.  ಕೋವಿಡ್-19 ರೋಗಿಗಳನ್ನು ದಾಖಲಿಸಿಕೊಂಡು, ನಿರ್ಣಾಯಕ ಚಿಕಿತ್ಸೆ ನೀಡಲು ಸಮಂಜಸವಾದ ದರ ಮತ್ತು ವ್ಯವಸ್ಥೆಗಳನ್ನು ಒದಗಿಸುವ ಕುರಿತಂತೆ ಆ ರಾಜ್ಯಗಳು ಖಾಸಗಿ ವಲಯದೊಂದಿಗೆ ಮಾತುಕತೆ ನಡೆಸಿ ಒಪ್ಪಂದಕ್ಕೆ ಬಂದಿವೆ.

ಖಾಸಗಿ ವಲಯದ ಆರೋಗ್ಯ ಆರೈಕೆ ಒದಗಿಸುವವರೊಂದಿಗೆ ಪೂರ್ವಭಾವಿ ಮಾತುಕತೆ ನಡೆಸಲು ಮತ್ತು ಸಾರ್ವಜನಿಕ ಹಾಗೂ ಖಾಸಗಿ ಆರೋಗ್ಯ ಸೌಲಭ್ಯಗಳನ್ನು ಕ್ರೋಡೀಕರಿಸುವ ನಿಟ್ಟಿನಲ್ಲಿ ಪರಿಗಣಿಸಲು ರಾಜ್ಯಗಳಿಗೆ ತಿಳಿಸಲಾಗಿದೆ. ಇದು ಕೋವಿಡ್-19 ರೋಗಿಗಳ ಅಪೇಕ್ಷಿತ, ಉತ್ತಮ ಗುಣಮಟ್ಟದ ಮತ್ತು ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆಗೆ ಸಹಕಾರಿಯಾಗುತ್ತದೆ.

ಮಾರಕ ಕೊರೋನ ವೈರಾಣು ಸೋಂಕಿತ ವ್ಯಕ್ತಿಗಳ ಪತ್ತೆಗೆ ದೇಶದಲ್ಲಿ ಪರೀಕ್ಷಾ ಸಾಮರ್ಥ್ಯ ನಿರಂತರವಾಗಿ ಹೆಚ್ಚುತ್ತಿದೆ. ದೇಶ ಪ್ರಸ್ತುತ ಪ್ರತಿ ನಿತ್ಯ 3 ಲಕ್ಷ ಮಾದರಿ ಪರೀಕ್ಷೆ ಸಾಮರ್ಥ್ಯ ರೂಢಿಸಿಕೊಂಡಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1,54,935 ಮಾದರಿ ಪರೀಕ್ಷೆ ನಡೆಸಲಾಗಿದ್ದು, ಈವರೆಗೆ 59,21,069 ಮಾದರಿಗಳ ಪರೀಕ್ಷೆ ನಡೆಸಿದಂತಾಗಿದೆ. ಇಂದಿನವರೆಗೆ ದೇಶದಲ್ಲಿ 907 ಪ್ರಯೋಗಾಲಯಗಳ ಜಾಲವನ್ನು ರೂಪಿಸಲಾಗಿದೆ. ಇದರಲ್ಲಿ 659 ಸರಕಾರಿ ಮತ್ತು 248 ಖಾಸಗಿ ವಲಯದ ಪ್ರಯೋಗಾಲಯಗಳು ಸೇರಿವೆ.

ದಿಲ್ಲಿಯಲ್ಲಿ ಪರೀಕ್ಷಾ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ, ಎಲ್ಲ 11 ಜಿಲ್ಲೆಗಳಲ್ಲೂ ಆಯಾ ಜಿಲ್ಲೆಗೆ ಸಂಬಂಧಿಸಿದ ಮಾದರಿಗಳ ಪರೀಕ್ಷೆಗೆ ಪ್ರತ್ಯೇಕ ಪ್ರಯೋಗಾಲಯ ನಿಯೋಜಿಸಲಾಗಿದೆ. ಪ್ರತಿ ಜಿಲ್ಲೆಯ ಮಾದರಿಗಳನ್ನು ಈ ಪ್ರಯೋಗಾಲಯಗಳಿಗೆ ಸಕಾಲಿಕ ಪರೀಕ್ಷೆ ಮತ್ತು ವಿಳಂಬವಿಲ್ಲದೆ ವರದಿ ಪಡೆಯಲು ಕಳುಹಿಸಲಾಗುತ್ತಿದೆ. ಪ್ರಸ್ತುತ ದಿಲ್ಲಿಯಲ್ಲಿ 42 ಪ್ರಯೋಗಾಲಯಗಳಿದ್ದು, ಪ್ರತಿನಿತ್ಯ ಸುಮಾರು 17 ಸಾವಿರ ಪರೀಕ್ಷೆ ನಡೆಸುವ ಸಾಮರ್ಥ್ಯ ಹೊಂದಿವೆ.

ಸಕಾಲಿಕ ಪಿಸಿಆರ್ (ಆರ್.ಟಿ.-ಪಿಸಿಆರ್) ಕೋವಿಡ್-19 ಪತ್ತೆಯಲ್ಲಿ ಗೋಲ್ಡ್ ಸ್ಟಾಂಡರ್ಡ್ ಮುಂಚೂಣಿಯ ಪರೀಕ್ಷಾ ವಿಧಾನವಾಗಿದ್ದು, ದೇಶದಾದ್ಯಂತ ಇರುವ 907 ಪ್ರಯೋಗಾಲಯಗಳನ್ನು ಹೆಚ್ಚಿನ ಪರೀಕ್ಷಾ ಸಾಮರ್ಥ್ಯ ವರ್ಧಿಸಲು ಬಳಸಬಹುದಾಗಿದೆ. ಆದಾಗ್ಯೂ, ಈ ಪರೀಕ್ಷೆಗಳಿಗೆ ನೈಪುಣ್ಯತೆಯ ಪ್ರಯೋಗಾಲಯಗಳ ಸೌಲಭ್ಯದ ಅಗತ್ಯವಿದೆ. ಈ ಉನ್ನತ ಗುಣಮಟ್ಟದ ಪ್ರಯೋಗಾಲಯಗಳಿಗೆ ಮಾದರಿಗಳನ್ನು ಸಾಗಿಸುವ ಸಮಯವೂ ಸೇರಿದಂತೆ ಕನಿಷ್ಠ 2-5 ಗಂಟೆಗಳ ಸಮಯ ತೆಗೆದುಕೊಳ್ಳುತ್ತದೆ. ಟ್ರೂನಾಟ್ ಮತ್ತು ಸಿಬಿ ನಾಟ್ ಸಂಚಾರಿ ಸ್ವರೂಪದ್ದಾಗಿದ್ದು, ಇದನ್ನು ದೂರದ ಪ್ರದೇಶಗಳಲ್ಲಿ ಬಳಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X