Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆದಿಉಡುಪಿ: ಎಪಿಎಂಸಿ ದಿನವಹಿ ಮಾರುಕಟ್ಟೆ...

ಆದಿಉಡುಪಿ: ಎಪಿಎಂಸಿ ದಿನವಹಿ ಮಾರುಕಟ್ಟೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ16 Jun 2020 9:28 PM IST
share
ಆದಿಉಡುಪಿ: ಎಪಿಎಂಸಿ ದಿನವಹಿ ಮಾರುಕಟ್ಟೆ ಉದ್ಘಾಟನೆ

ಉಡುಪಿ, ಜೂ. 16: ಗ್ರಾಮೀಣ ಭಾಗದ ರೈತರು ಬೆಳೆದ ವಿವಿಧ ತರಕಾರಿ ಗಳು ಮಧ್ಯವರ್ತಿಗಳ ಹಾವಳಿಯಿಂದ ನಷ್ಟಕ್ಕೊಳಗಾಗುವಂತಾಗಿದೆ. ಆದರೆ ಆದಿ ಉಡುಪಿಯ ಈ ಎಪಿಎಂಸಿ ದಿನವಹಿ ಮಾರುಕಟ್ಟೆ ರೈತರ ಸಮಸ್ಯೆಗೆ ಪರಿಹಾರ ನೀಡಲಿದೆ ಎಂದು ಶಾಸಕ ಕೆ.ರಘುಪತಿ ಭಟ್ ಹೇಳಿದ್ದಾರೆ.

ಮಂಗಳವಾರ ಆದಿಉಡುಪಿ ಎಂಪಿಎಂಸಿ ಮಾರುಕಟ್ಟೆಯಲ್ಲಿ ನಿರ್ಮಾಣ ಗೊಂಡ ನೂತನ ದಿನವಹಿ ಮಾರುಕಟ್ಟೆಯನ್ನು ಉದ್ಘಾಟಿಸಿ ಅವರು ಮಾತನಾಡು ತಿದ್ದರು. ಈವರೆಗೆ ನಗರದಲ್ಲಿದ್ದ ದಿನವಹಿ ಮಾರುಕಟ್ಟೆಯಲ್ಲಿ ಸ್ಥಳಾವಕಾಶದ ಕೊರತೆ ಇತ್ತು. ಇದರಿಂದಾಗಿ ನಿತ್ಯ ಟ್ರಾಫಿಕ್ ಸಮಸ್ಯೆ ಎದುರಾಗುತ್ತಿತ್ತು. ಈ ಎಲ್ಲಾ ಸಮಸ್ಯೆಗಳಿಗೆ ಆದಿ ಉಡುಪಿ ಎಪಿಎಂಸಿ ಮಾರುಕಟ್ಟೆ ಪರಿಹಾರ ನೀಡಲಿದೆ ಎಂದವರು ಹೇಳಿದರು.

ಹಿಂದೆ ಈ ಮಾರುಕಟ್ಟೆಯಲ್ಲಿ ವಾರದ ಬುಧವಾರ ಮಾತ್ರ ವ್ಯಾಪಾರಕ್ಕೆ ಅನುಮತಿ ಇತ್ತು. ಈಗ ರೈತರು ನೇರವಾಗಿ ಬಂದು ಮಾರಾಟ ಮಾಡುವು ದರಿಂದ ಉಡುಪಿ ಹಾಗೂ ಮಣಿಪಾಲ ಸೇರಿದಂತೆ ಇತರೆ ಜನರಿಗೆ ಒಂದೆ ಕಡೆಯಲ್ಲಿ ವಿವಿಧ ಬಗೆಯ ತಾಜಾ ತರಕಾರಿಗಳು ಸಿಗಲಿದೆ ಎಂದು ಹೇಳಿದರು.

ಇಂದಿನಿಂದ ಅಂಬಾಗಿಲು, ಬೀಡಿನಗುಡ್ಡೆ ಭಾಗದ ಬೀದಿಗಳಲ್ಲಿ ತರಕಾರಿ ವ್ಯಾಪಾರ ಮಾಡುವವರನ್ನು ಹಾಗೂ ಹೋಲ್‌ಸೆಲ್ ವ್ಯಾಪಾರಿಗಳನ್ನು ಇಲ್ಲಿಗೆ ಸ್ಥಳಾಂತರಿಸಿ ಅವರಿಗೆ ಇಲ್ಲಿ ದಿನನಿತ್ಯದ ವ್ಯಾಪಾರಕ್ಕೆ ಅನುಕೂಲ ಮಾಡಿಕೊಡ ಲಾಗುವುದು. ಉಡುಪಿಯ ಜನತೆ ಇದರ ಪ್ರಯೋಜನ ಪಡೆಯುವಂತೆ ರಘುಪತಿ ಭಟ್ ತಿಳಿಸಿದರು.

ನಗರಸಭೆ ಪೌರಾಯುಕ್ತ ಆನಂದ ಸಿ. ಕಲ್ಲೋಳಿಕರ್ ಮಾತನಾಡಿ, ನಗರಸಭೆ ಯಲ್ಲಿ 25ಕ್ಕೂ ಅಧಿಕ ಬೀದಿ ಬದಿ ಮಾರಾಟ ಮಾಡುವವರು ಇದ್ದಾರೆ. ಅವರೆಲ್ಲ ಇನ್ನು ಆದಿಉಡುಪಿಯ ಈ ಎಪಿಎಂಸಿ ಮಾರುಕಟ್ಟೆಯಲ್ಲಿ ತಮ್ಮ ತರಕಾರಿ ಮಾರಾಟ ಮಾಡಲಿದ್ದಾರೆ. ಇನ್ನು ಮುಂದೆ ನಗರಸಭೆ 35 ವಾರ್ಡ್ ವ್ಯಾಪ್ತಿ ಯಲ್ಲಿ ಬೀದಿ ಬದಿ ವ್ಯಾಪಾರವನ್ನು ನಿಷೇಧಿಸಿದೆ ಎಂದರು.

ನಗರಸಭಾ ಸದಸ್ಯರಾದ ಶ್ರೀಶ ಕೊಡವೂರು, ಸವಿತಾ ಹರೀಶ್ ರಾಮ್, ಎಪಿಎಂಸಿ ಅಧ್ಯಕ್ಷ ಕೆ. ಶಾಮ್‌ಪ್ರಸಾದ್ ಭಟ್, ಉಪಾಧ್ಯಕ್ಷೆ ಲತಾ ಎಸ್., ಕಾರ್ಯದರ್ಶಿ ಗಾಯತ್ರಿ ಎಂ. ಉಪಸ್ಥಿತರಿದ್ದರು. ಎಪಿಎಂಸಿಯ ಶಿವಾನಂದ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X