Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿಗೆ ಪತ್ರ ಬರೆದ 9 ಗ್ರಾಮಗಳ...

ಪ್ರಧಾನಿಗೆ ಪತ್ರ ಬರೆದ 9 ಗ್ರಾಮಗಳ ಸರಪಂಚರು: ಕಾರಣವೇನು ಗೊತ್ತಾ ?

ವಾರ್ತಾಭಾರತಿವಾರ್ತಾಭಾರತಿ16 Jun 2020 11:49 PM IST
share
ಪ್ರಧಾನಿಗೆ ಪತ್ರ ಬರೆದ 9 ಗ್ರಾಮಗಳ ಸರಪಂಚರು: ಕಾರಣವೇನು ಗೊತ್ತಾ ?

ರಾಯ್‌ಪುರ, ಜೂ.16: ಛತ್ತೀಸ್‌ಗಢದಲ್ಲಿ ನಡೆಸಲು ಉದ್ದೇಶಿಸಿರುವ ಕಲ್ಲಿದ್ದಲು ಗಣಿ ಹರಾಜು ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ಹಸ್‌ದಿಯೊ ಅರಂದ್ ಪ್ರದೇಶದ ಹಲವು ಚುನಾಯಿತ ಗ್ರಾಮಪಂಚಾಯತ್ ಅಧ್ಯಕ್ಷರು ಪ್ರಧಾನಿ ಮೋದಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಹಸ್‌ದಿಯೊ ಅರಂದ್ ಪ್ರದೇಶ ಉತ್ತರ ಛತ್ತೀಸ್‌ ಗಢದ ಸರ್ಗುಜ, ಸೂರಜ್‌ಪುರ ಮತ್ತು ಕೋಬ್ರಾ ಜಿಲ್ಲೆಗಳನ್ನು ಹೊಂದಿದೆ. ಜೂನ್ 18ರಂದು ಗಣಿ ಹರಾಜು ಪ್ರಕ್ರಿಯೆ ನಡೆಯಲಿದೆ ಎಂದು ಕಲ್ಲಿದ್ದಲು ಸಚಿವಾಲಯದ ಹೇಳಿಕೆ ತಿಳಿಸಿದೆ.

ಪ್ರಧಾನಿ ಮೋದಿ ಒಂದೆಡೆ ಆತ್ಮನಿರ್ಭರ ಅಥವಾ ಸ್ವಾವಲಂಬನೆ ಎಂಬ ಮಂತ್ರ ಜಪಿಸುತ್ತಿದ್ದರೆ, ಇನ್ನೊಂದೆಡೆ ಆದಿವಾಸಿಗಳು ಹಾಗೂ ಅರಣ್ಯವಾಸಿ ಸಮುದಾಯದ ಬದುಕು, ಸಂಸ್ಕೃತಿ ಮತ್ತು ಜೀವನಶೈಲಿಯ ಮೇಲೆ ಗಣಿ ಹರಾಜು ಪ್ರಕ್ರಿಯೆಯ ಮೂಲಕ ದಾಳಿ ನಡೆಸಲು ಸುಲಭ ದಾರಿ ಮಾಡಿಕೊಡುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಲಾಗಿದೆ.

ಗಣಿಗಾರಿಕೆ ವಿರೋಧಿಸಿ ಗ್ರಾಮಸಭೆಯಲ್ಲಿ ನಿರ್ಣಯ ಕೈಗೊಂಡಿದ್ದರೂ ಅದನ್ನು ಪರಿಗಣಿಸದೆ ಕೇಂದ್ರ ಸರಕಾರ ಕೈಗೊಂಡಿರುವ ನಿರ್ಧಾರ ದುರದೃಷ್ಟಕರ. ಅಲ್ಲದೆ ಕೊರೋನ ಸೋಂಕಿನ ಭೀತಿಯ ಮಧ್ಯೆ, ಸ್ಥಳೀಯರಿಗೆ ನೆಲೆ ಕಳೆದುಕೊಳ್ಳುವ ಸಂಕಷ್ಟವೂ ಎದುರಾಗಿದೆ ಎಂದು ‘ದಿ ವೈರ್’ನ ಜೊತೆ ಮಾತನಾಡಿದ ಘಾಟ್‌ಬರ್ರ ಗ್ರಾಮದ ಅಧ್ಯಕ್ಷ ಜೈನಂದನ್ ಸಿಂಗ್ ಪೋರ್ತೆ ಆತಂಕ ವ್ಯಕ್ತಪಡಿಸಿದ್ದಾರೆ.

ನಮ್ಮ ಸಂಸ್ಕೃತಿ ಮತ್ತು ಜೀವನಶೈಲಿಯನ್ನು ನಾಶಗೊಳಿಸುವ ಯಾವುದೇ ರೀತಿಯ ಗಣಿಗಾರಿಕೆ ನಮಗೆ ಬೇಡ. ಈ ಪ್ರದೇಶದಲ್ಲಿರುವ ಪ್ರಾಕೃತಿಕ ಸಂಪನ್ಮೂಲದ ಕಾರಣ ನಾವು ಈಗಾಗಲೇ ಆತ್ಮನಿರ್ಭರರಾಗಿದ್ದೇವೆ. ಗಣಿಗಾರಿಕೆ ಈ ಪ್ರಾಕೃತಿಕ ಸಂಪನ್ಮೂಲವನ್ನು ನಾಶಗೊಳಿಸಲಿದೆ. ಆದ್ದರಿಂದ ಹಲವು ಗ್ರಾಮಗಳು ಗಣಿ ಹರಾಜನ್ನು ವಿರೋಧಿಸಿ ನಿರ್ಣಯ ಕೈಗೊಂಡಿದೆ ಎಂದವರು ಹೇಳಿದ್ದಾರೆ.

ಸ್ಥಳೀಯರು ನೀರು, ಅರಣ್ಯ ಮತ್ತು ಭೂಮಿಯ ಮೇಲೆ ಸಂಪೂರ್ಣ ಅವಲಂಬಿತರಾಗಿದ್ದಾರೆ. ಗಣಿಗಾರಿಕೆ ಇದನ್ನೆಲ್ಲಾ ಮುಗಿಸಿಬಿಡಲಿದೆ ಎಂದು ಕೋರ್ಬಾ ಜಿಲ್ಲೆಯ ಮದನ್‌ಪುರ ಗ್ರಾಮದ ಅಧ್ಯಕ್ಷ ದೇವ್‌ಸೆ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X