Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್-19 ಲಸಿಕೆಗೆ 1 ವರ್ಷ ಕಾಯಬೇಕು:...

ಕೋವಿಡ್-19 ಲಸಿಕೆಗೆ 1 ವರ್ಷ ಕಾಯಬೇಕು: ವಿಜ್ಞಾನಿಗಳ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ17 Jun 2020 12:01 AM IST
share
ಕೋವಿಡ್-19 ಲಸಿಕೆಗೆ 1 ವರ್ಷ ಕಾಯಬೇಕು: ವಿಜ್ಞಾನಿಗಳ ಹೇಳಿಕೆ

ಹೊಸದಿಲ್ಲಿ, ಜೂ.16: ಲಸಿಕೆ ವಿನ್ಯಾಸ ಇನ್ನೂ ಪ್ರಾಯೋಗಿಕ , ಪ್ರಯೋಗ ಮತ್ತು ದೋಷ ಕಂಡುಹುಡುಕುವ ಹಂತದಲ್ಲಿದ್ದು ಕೋವಿಡ್ 19ರ ವಿರುದ್ಧದ ಲಸಿಕೆಗೆ ಇನ್ನೂ 1 ವರ್ಷ ಕಾಯಬೇಕಾಗಬಹುದು. ಸೋಂಕನ್ನು ಎದುರಿಸಲು ಚಿಕಿತ್ಸಾಶಾಸ್ತ್ರದಲ್ಲಿನ ಉಪಕ್ರಮಗಳು ಪ್ರಪಂಚದಾದ್ಯಂತ ವಿಶ್ವಸನೀಯ ರೀತಿಯಲ್ಲಿ ಮುಂದುವರಿದಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಪರೀಕ್ಷಾ ಅನುಮೋದನೆ ಹಾಗೂ ಲಸಿಕೆ ಉತ್ಪಾದನೆ ಹೆಚ್ಚಳ ಏಕಕಾಲದಲ್ಲೇ ನಡೆದರೆ ಕೆಲವು ತಿಂಗಳು ಮೊದಲೇ ಲಸಿಕೆ ಕಂಡುಹಿಡಿಯಬಹುದಾಗಿದೆ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಕೋವಿಡ್ 19ರ ವಿರುದ್ಧ 10 ಲಸಿಕೆಗಳು ಚಿಕಿತ್ಸಕ ಮೌಲ್ಯಾಂಕನ ಹಂತದಲ್ಲಿದ್ದರೆ 126 ಲಸಿಕೆಗಳು ಪೂರ್ವಭಾವಿ ಹಂತದಲ್ಲಿದೆ.

ಸಾರ್ಸ್-ಸಿಒವಿ-2 (ಕೋವಿಡ್ 19) ರೋಗಕ್ಕೆ ಲಸಿಕೆ ಅಭಿವೃದ್ಧಿಪಡಿಸಲು ವಿಶ್ವದಾದ್ಯಂತ ಎರಡು ವಿಭಿನ್ನ ಸ್ಥೂಲ ಕಾರ್ಯನೀತಿಯನ್ನು ಅನುಸರಿಸಲಾಗುತ್ತಿದೆ ಎಂದು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇಮ್ಯುನಾಲಜಿಯ ವಿಜ್ಞಾನಿ ಸತ್ಯಜಿತ್ ರಥ್ ಹೇಳಿದ್ದಾರೆ. ಒಂದನೆಯದ್ದು ಸುಮಾರು 2 ಶತಮಾನ ಹಳೆಯ ಕಾರ್ಯನೀತಿ, ಇನ್ನೊಂದು ಸುಮಾರು 2 ದಶಕ ಹಳೆಯ ಕಾರ್ಯನೀತಿ. ಎರಡು ವಿಧಾನದಲ್ಲೂ ಬಳಕೆಗೆ ಯೋಗ್ಯವಾದ ಲಸಿಕೆ ಸಿದ್ಧಗೊಳ್ಳುವ ಖಾತರಿ ಇಲ್ಲ . ಲಸಿಕೆಯ ವಿನ್ಯಾಸ ಇನ್ನೂ ಪ್ರಾಯೋಗಿಕ ಹಂತದಲ್ಲಿದೆ. ಆದ್ದರಿಂದಲೇ , ಯಾವುದೇ ಕಾರ್ಯನೀತಿಯ ಫಲಿತಾಂಶವನ್ನು ಲಸಿಕೆ ಎಂದು ಪರಿಗಣಿಸದೆ ಪರೀಕ್ಷಾರ್ಥಿ ಎಂದೇ ಪರಿಗಣಿಸಲಾಗುತ್ತದೆ ಎಂದವರು ಹೇಳಿದ್ದಾರೆ.

  ಆದರೆ ಪರೀಕ್ಷಾರ್ಥಿ ಮತ್ತು ಲಸಿಕೆ ಪದಗಳ ನಡುವಿನ ವ್ಯತ್ಯಾಸದ ಬಗ್ಗೆ ಗೊಂದಲವಿದೆ ಎಂದು ಅಮೆರಿಕದ ಮೇರಿಲ್ಯಾಂಡ್ ವಿವಿಯ ಇನ್‌ಸ್ಟಿಟ್ಯೂಟ್ ಆಫ್ ಹ್ಯೂಮನ್ ವೈರಾಲಜಿಯ ನಿರ್ದೇಶಕ ರಾಬರ್ಟ್ ಗ್ಯಾಲ್ಲೊ ಅಭಿಪ್ರಾಯಪಟ್ಟಿದ್ದಾರೆ. ಈ ತಿಂಗಳ ಆರಂಭದಲ್ಲಿ ವೀಡಿಯೊ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕ್ಯಾಲಿಫೋರ್ನಿಯಾ ವಿವಿಯ ವಿಜ್ಞಾನಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಲಸಿಕೆ ಕಂಡು ಹಿಡಿದರೆ ಮಾತ್ರ ಕೊರೋನ ಸೋಂಕಿನಿಂದ ಚೇತರಿಸಿಕೊಂಡು ಜನಜೀವನ ಸಹಜತೆಗೆ ಮರಳಬಹುದು. ಆದರೆ ಇದಕ್ಕೆ ಎಷ್ಟು ಸಮಯ ಬೇಕಾಗಬಹುದು ಎಂಬ ಪ್ರಶ್ನೆಗೆ, ಒಂದು ವರ್ಷ ಅಥವಾ ಅದಕ್ಕೂ ಹೆಚ್ಚು ಎಂದು ವಿಜ್ಞಾನಿಗಳು ಉತ್ತರಿಸಿದ್ದರು. ಭಾರತದಲ್ಲಿ ಕನಿಷ್ಟ 6 ಸಂಸ್ಥೆಗಳು ಕೋವಿಡ್-19ರ ಲಸಿಕೆ ಕಂಡುಹಿಡಿಯಲು ಕಾರ್ಯನಿರತವಾಗಿದ್ದು, ಕೊರೋನ ವೈರಸ್ ವಿರುದ್ಧ ಹೋರಾಡಲು ಬಡ ಮತ್ತು ಕಡಿಮೆ ವರಮಾನದ ದೇಶಗಳಿಗೆ 1 ಬಿಲಿಯನ್ ಲಸಿಕೆ ಸರಬರಾಜು ಮಾಡಲು ಝೆನೆಕಾ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿರುವುದಾಗಿ ಕಳೆದ ವಾರ ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಹೇಳಿದೆ. ಅಸ್ತ್ರ ಝೆನೆಕಾ ಸಂಸ್ಥೆಯ ಉತ್ಪನ್ನಗಳನ್ನು ಭಾರತ ಮತ್ತು ಇತರ ಜಿಎವಿಐ (ಗ್ಲೋಬಲ್ ಅಲಯನ್ಸ್ ಫಾರ್ ವ್ಯಾಸಿನ್ ಆ್ಯಂಡ್ ಇಮ್ಯುನೈಸೇಷನ್) ರಾಷ್ಟ್ರಗಳ ಬಳಕೆಗೆ ಉತ್ಪಾದಿಸುವ ಬಗ್ಗೆ ನಾವು ಆ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ ಎಂದು ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್ ಪೂನಾವಾಲಾ ಟ್ವೀಟ್ ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X