Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲಾಕ್‍ಡೌನ್ ಸಡಿಲಿಕೆಯಾದರೂ ಬೀದಿ ಬದಿ...

ಲಾಕ್‍ಡೌನ್ ಸಡಿಲಿಕೆಯಾದರೂ ಬೀದಿ ಬದಿ ವ್ಯಾಪಾರಿಗಳ ಬದುಕು ದುಸ್ತರ

ವಾರ್ತಾಭಾರತಿವಾರ್ತಾಭಾರತಿ17 Jun 2020 12:08 AM IST
share

ಬೆಂಗಳೂರು, ಜೂ.16: ನಗರದಲ್ಲಿ ಲಾಕ್‍ಡೌನ್ ಬಳಿಕ ಸರಕಾರದ ಅನುಮತಿಯ ಹಿನ್ನೆಲೆಯಲ್ಲಿ ಪ್ರಾರಂಭವಾಗಿರುವ ಬೀದಿ ಬದಿ ವ್ಯಾಪಾರಿಗಳಿಗೆ ನಿರೀಕ್ಷೆ ಹುಸಿಯಾಗಿದ್ದು, ವ್ಯಾಪಾರವಿಲ್ಲದೇ ಪರಿತಪಿಸುವಂತಾಗಿದೆ. ದಿನವಿಡೀ ಅಂಗಡಿ ತೆರೆದರೂ ಗ್ರಾಹಕರು ಖರೀದಿಗೆ ಬರುತ್ತಿಲ್ಲ ಎಂದು ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ.

ನಗರದಲ್ಲಿ ಬೀದಿಬದಿಯಲ್ಲಿ ಮಾರಾಟ ಮಾಡಲಾಗುತ್ತಿರುವ ಬಟ್ಟೆ, ಚಪ್ಪಲಿ, ಬ್ಯಾಗ್, ಗೃಹೋಪಯೋಗಿ ವಸ್ತುಗಳ ಖರೀದಿಗೆ ಜನ ಹಿಂದೇಟು ಹಾಕುತ್ತಿದ್ದಾರೆ. ಒಂದು ಹೊತ್ತಿನ ಊಟಕ್ಕೆ ಆಗುವಷ್ಟೂ ವ್ಯಾಪಾರ ನಡೆಯುತ್ತಿಲ್ಲ ಎಂದು ವ್ಯಾಪಾರಿಗಳು ಹೇಳಿದ್ದಾರೆ.

ಸಿಲಿಕಾನ್ ಸಿಟಿಯ ಪ್ರಮುಖ ಬೀದಿಗಳಾದ ಅವೆನ್ಯೂರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಮಲ್ಲೇಶ್ವರಂ, ಮೆಜೆಸ್ಟಿಕ್, ಜಯನಗರ ಸೇರಿದಂತೆ ಹಲವು ಕಡೆಗಳಲ್ಲಿ ನಿತ್ಯ ಬಿಕರಿ ವಸ್ತುಗಳನ್ನು ಹರಡಿಕೊಂಡು ಮಾರಾಟಕ್ಕೆ ಅಣಿಯಾಗುತ್ತಾರೆ. ಸಂಜೆವರೆಗೂ ಬಿಸಿಲಿನಲ್ಲೇ ಅಂಗಡಿ ತೆರೆದು ನಿಂತಿರುತ್ತಾರೆ. ಆದರೆ, ಆ ಕಡೆ ಯಾರೂ ತಲೆ ಹಾಕುತ್ತಿಲ್ಲ.

ದಿನಪೂರ್ತಿ ಮಳೆ, ಗಾಳಿ, ಬಿಸಿಲು ಎನ್ನದೇ ದಿನಪೂರ್ತಿ ಗ್ರಾಹಕರಿಗಾಗಿ ಕಾಯುತ್ತೇವೆ. ಆದರೆ, ಗ್ರಾಹಕರು ಬೀದಿಯಲ್ಲಿ ಸಂಚರಿಸುತ್ತಿದ್ದಾರೆ ಹೊರತು ಯಾರೂ ಕೊಳ್ಳಲು ಮುಂದಾಗುತ್ತಿಲ್ಲ. ಮೊದಲು ವಸ್ತುಗಳ ಬಗ್ಗೆ, ಬೆಲೆ ಬಗ್ಗೆ ವಿಚಾರಿಸುತ್ತಿದ್ದರು. ಈಗ ಅಂಗಡಿಗಳ ಬಳಿ ಸುಳಿಯುತ್ತಿಲ್ಲ. 15 ದಿನಗಳಿಂದ ಕಾಯುವುದೇ ಕೆಲಸವಾಗಿದೆ ಎಂದು ಮೆಜೆಸ್ಟಿಕ್ ಬಳಿ ಬಟ್ಟೆ ಮಾರಾಟ ಮಾಡುವ ನಿರಂಜನ್ ನೊಂದು ನುಡಿದರು.

ಬೀದಿಬದಿ ವ್ಯಾಪಾರಿಗಳಿಗೆ ದಿನದ ಆದಾಯವೇ ಆಧಾರ. ವ್ಯಾಪಾರ ಮಾಡಿದರಷ್ಟೇ ಮೂರು ಹೊತ್ತಿನ ಊಟ. ಈಗಿನ ಪರಿಸ್ಥಿತಿಯಲ್ಲಿ ಅಂಗಡಿಗೆ ಒಬ್ಬರು ಗ್ರಾಹಕರು ಬಂದರೂ ಸಾಕು ಎನ್ನುವಂತಾಗಿದೆ. ಕೊರೋನ ಸೋಂಕು ಭೀತಿಯಿಂದ ಜನರು ಖರೀದಿಯಿಂದ ದೂರವೇ ಉಳಿದಿದ್ದಾರೆ. ವ್ಯಾಪಾರವಿಲ್ಲದೆ ಕುಟುಂಬ ನಿರ್ವಹಣೆ ಕಷ್ಟವಾಗಿದೆ ಎಂದು ಮತ್ತೊಬ್ಬ ವ್ಯಾಪಾರಿ ಸುರೇಶ್ ನಿಡಕಲ್ ಅಳಲು ತೋಡಿಕೊಂಡರು.

ಕೊರೋನ ಸೋಂಕು ಹರಡುವುದಕ್ಕಿಂತ ಮೊದಲು ದಿನಕ್ಕೆ ಕನಿಷ್ಟ ಎಂದರೂ ಎಲ್ಲ ಖರ್ಚು ಕಳೆದು 600-700 ಸಂಪಾದನೆ ಮಾಡುತ್ತಿದ್ದೆವು. ಆದರೆ, ಇವಾಗ ದಿನಪೂರ್ತಿ ವ್ಯಾಪಾರ ಮಾಡಿದರೂ 100 ರೂ. ಉಳಿಯುವುದು ಗ್ಯಾರಂಟಿ ಇಲ್ಲದಂತಾಗಿದೆ ಎಂದು ಬಟ್ಟೆ, ಪಾನಿಪುರಿ, ಚಪ್ಪಲಿ ವ್ಯಾಪಾರಿ ಹೀಗೆ ಅನೇಕರು ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ 24,650 ಅಧಿಕೃತ ಬೀದಿಬದಿ ಅಂಗಡಿಗಳಿದ್ದು, ಅಂದಾಜು 80 ಸಾವಿರ ವ್ಯಾಪಾರದಲ್ಲಿ ತೊಡಗಿರುವ ಕೆಲಸಗಾರರು ಹಾಗೂ ವ್ಯಾಪಾರಿಗಳಿದ್ದಾರೆ ಎಂದು ಅಂದಾಜಿಸಲಾಗಿದೆ.

ಬಿಬಿಎಂಪಿ ಹಾಗೂ ಸರಕಾರದ ಮಾರ್ಗಸೂಚಿಯಲ್ಲಿ ಬೀದಿಬದಿ ಆಹಾರ ಮಾರಾಟ ಮಾಡುವವರು ಕೇವಲ ಪಾರ್ಸೆಲ್‍ಗೆ ಅವಕಾಶ ನೀಡಲಾಗಿದೆ. ಆದರೆ, ಬೆರಳೆಣಿಕೆಯಷ್ಟು ಗ್ರಾಹಕರು ಆಹಾರ ಕೊಂಡೊಯ್ಯಲು ಬರುತ್ತಾರೆ. ಇವರ ಜತೆಗೆ ಆರೋಗ್ಯಾಧಿಕಾರಿಗಳು ಬೀದಿ ಬದಿ ವ್ಯಾಪಾರಕ್ಕೆ ಕೆಲವೆಡೆ ಅವಕಾಶ ನೀಡುತ್ತಿಲ್ಲ ಎಂದು ಬೀದಿಬದಿ ವ್ಯಾಪಾರಿಗಳ ಸಂಘಟನೆಗಳ ಸಂಘದ ಅಧ್ಯಕ್ಷ ಸಿ.ರಂಗಸ್ವಾಮಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X