Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ : ಕೋವಿಡ್ ಜವಾಬ್ದಾರಿ ಹೊತ್ತ...

ದಿಲ್ಲಿ : ಕೋವಿಡ್ ಜವಾಬ್ದಾರಿ ಹೊತ್ತ ಎಸಿಪಿ ಪತಿ ಕೋವಿಡ್‌ಗೆ ಬಲಿ

ವಾರ್ತಾಭಾರತಿವಾರ್ತಾಭಾರತಿ17 Jun 2020 9:22 AM IST
share
ದಿಲ್ಲಿ : ಕೋವಿಡ್ ಜವಾಬ್ದಾರಿ ಹೊತ್ತ ಎಸಿಪಿ ಪತಿ ಕೋವಿಡ್‌ಗೆ ಬಲಿ

ಹೊಸದಿಲ್ಲಿ : ಲಾಕ್‌ಡೌನ್ ಆರಂಭವಾದಾಗಿನಿಂದ ಪತಿ ಹೊರಗೆ ಬಂದಿರಲೇ ಇಲ್ಲ. ಆಧರೆ ನಾನು ದಿನ ಉದ್ಯೋಗಕ್ಕೆ ಹೋಗುತ್ತಿದ್ದೆ... ನನ್ನನ್ನು ಕ್ಷಮಿಸಿಕೊಳ್ಳಲು ಸಾಧ್ಯವೇ ಇಲ್ಲ- ಇದು ದೆಹಲಿ ಎಸಿಪಿ ಸುರೇಂದ್ರ ಜೀತ್ ಕೌರ್ ಅವರ ಆಕ್ರಂದನ. ದೆಹಲಿ ಆಸ್ಪತ್ರೆಯಲ್ಲಿ ಪತಿ ಚರಣ್‌ಜೀತ್ ಸಿಂಗ್ (54) ಕೋವಿಡ್‌ಗೆ ಬಲಿಯಾದ ಬಳಿಕ ಮಂಗಳವಾರ ಎಸಿಪಿ ದುಃಖಿಸಿದ್ದು ಹೀಗೆ..

ಲಜಪತ್‌ನಗರ ನಿವಾಸಿಯಾಗಿದ್ದ ಸಿಂಗ್ ಉದ್ಯಮಿ. ಪತ್ನಿ ಹಾಗೂ ಕೆನಡಾ ವಾಸಿ 26 ವರ್ಷದ ಮಗನನ್ನು ಅವರು ಅಗಲಿದ್ದಾರೆ.

ಕೌರ್ (57) ಅವರು ದೆಹಲಿಯ ಆಗ್ನೇಯ ಜಿಲ್ಲೆ ಎಎಸ್ಪಿ (ಮಹಿಳೆಯರ ವಿರುದ್ಧದ ದೌರ್ಜನ್ಯ). ಜಿಲ್ಲೆಯ ಕೋವಿಡ್ ಘಟಕದ ಎಸಿಪಿ ಹೊಣೆಗಾರಿಕೆಯನ್ನೂ ಹೊಂದಿದ್ದರು. ಮೇ 20ರಂದು ಕೌರ್ ಅವರಿಗೆ ವೈರಸ್ ಪಾಸಿಟಿವ್ ಬಂದಾಗ ಪತಿಯನ್ನೂ ಪರೀಕ್ಷೆಗೆ ಗುರಿಪಡಿಸಲಾಯಿತು. ಫಲಿತಾಂಶ ಪಾಸಿಟಿವ್ ಬಂತು. ಎಸಿಪಿಯವರ 80 ವರ್ಷ ವಯಸ್ಸಿನ ತಂದೆಗೆ ಮೇ 24ರಂದು ಸೋಂಕು ದೃಢಪಟ್ಟಿತು. ಕೌರ್ ಹಾಗೂ ಸಿಂಗ್ ಅವರನ್ನು ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಯಿತು ಹಾಗೂ ಅವರ ತಂದೆಯನ್ನು ಸಾಕೇತದಲ್ಲಿರುವ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಮೇ 26ರಂದು ಕೌರ್ ಗುಣಮುಖರಾಗಿ ಮನೆಗೆ ಬಂದರು.

ಆದರೆ ಸಿಂಗ್ ಅವರ ದೇಹಸ್ಥಿತಿ ವಿಷಮಿಸುತ್ತಾ ಹೋಯಿತು. ವೆಂಟಿಲೇಟರ್ ವ್ಯವಸ್ಥೆ ಅಳವಡಿಸಿದರೂ, ಆಮ್ಲಜನಕ ಮಟ್ಟ ಕುಸಿಯುತ್ತಾ ಹೋಯಿತು. ಮಾತನಾಡಲೂ ಅಸಮರ್ಥರಾಗಿ ವಾಟ್ಸ್ಆ್ಯಪ್ ಸಂದೇಶ ಕಳುಹಿಸುತ್ತಿದ್ದರು ಎಂದು ಕೌರ್ ವಿವರಿಸಿದರು. ಸಿಂಗ್ ಅವರಿಗೆ ಪ್ಲಾಸ್ಮಾ ಚಿಕಿತ್ಸೆಯ ಪ್ರಯತ್ನವನ್ನೂ ಮಾಡಲಾಯಿತು. ಆದರೆ ಅವರು ಸ್ಪಂದಿಸಲಿಲ್ಲ ಎಂದು ಕೌರ್ ಸಹೋದರ ಮಣೀಂದರ್ ಅಹ್ಲುವಾಲಿಯಾ ಹೇಳಿದರು.

ಕೆನಡಾದಲ್ಲಿರುವ ಪುತ್ರ ವೀಡಿಯೊ ಕಾಲ್ ಮೂಲಕವೇ ತಂದೆಯ ಅಂತ್ಯಸಂಸ್ಕಾರ ನೋಡುವಂತಾಯಿತು. ವಿಮಾನಗಳಿಲ್ಲದ್ದರಿಂದ ಆತ ಕೆನಡಾದಿಂದ ಬರಲಾಗಲಿಲ್ಲ ಎಂದು ಕೌರ್ ದುಃಖಿಸಿದರು. ಸಿಂಗ್ ಮೋಜಿನ, ಶಿಸ್ತಿನ ಹಾಗೂ ಸಾಹಸಿ ವ್ಯಕ್ತಿ ಎಂದು ಸ್ನೇಹಿತರು ನೆನಪಿಸಿಕೊಂಡರು. ಮಂಗಳವಾರ ಮಧ್ಯಾಹ್ನ ಸಿಂಗ್ ಅವರ ಅಂತ್ಯಸಂಸ್ಕಾರವನ್ನು ಕುಟುಂಬ ಸದಸ್ಯರು ಮತ್ತು ಪೊಲೀಸರ ಉಪಸ್ಥಿತಿಯಲ್ಲಿ ನಡೆಸಲಾಯಿತು. ಸಂಕಷ್ಟದ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸಹೋದ್ಯೋಗಿಗಳು ನೀಡಿದ ನೆರವನ್ನು ಎಸಿಪಿ ನೆನೆಸಿಕೊಳ್ಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X