Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಒಬ್ಬ ರೈತ ಆತ್ಮಹತ್ಯೆ ಮಾಡಿಕೊಂಡರೂ ನೀವೇ...

ಒಬ್ಬ ರೈತ ಆತ್ಮಹತ್ಯೆ ಮಾಡಿಕೊಂಡರೂ ನೀವೇ ಹೊಣೆ: ಜೆಡಿಎಸ್ ಶಾಸಕರ ವಿರುದ್ಧ ಸಂಸದೆ ಸುಮಲತಾ ಗುಡುಗು

ವಾರ್ತಾಭಾರತಿವಾರ್ತಾಭಾರತಿ18 Jun 2020 8:16 PM IST
share
ಒಬ್ಬ ರೈತ ಆತ್ಮಹತ್ಯೆ ಮಾಡಿಕೊಂಡರೂ ನೀವೇ ಹೊಣೆ: ಜೆಡಿಎಸ್ ಶಾಸಕರ ವಿರುದ್ಧ ಸಂಸದೆ ಸುಮಲತಾ ಗುಡುಗು

ಮಂಡ್ಯ, ಜೂ.18: ಮೈಷುಗರ್ ಕಾರ್ಖಾನೆ ಸರಕಾರಿ ಸ್ವಾಮ್ಯದಲ್ಲೇ ಆರಂಭವಾಗಬೇಂಬ ಜಿಲ್ಲೆಯ ಜೆಡಿಎಸ್ ಶಾಸಕರ ನಿಲುವಿಗೆ ಸಂಸದೆ ಸುಮಲತಾ ಅಂಬರೀಷ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಒಬ್ಬನೇ ಒಬ್ಬ ರೈತ ಆತ್ಮಹತ್ಯೆ ಮಾಡಿಕೊಂಡರೂ ಅದಕ್ಕೆ ನೀವೇ ಹೊಣೆ ಎಂದು ಗುಡುಗಿದ್ದಾರೆ.

ಒ ಅಂಡ್ ಎಂ ಸೂತ್ರದಲ್ಲಿ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಗುರುವಾರ ನಡೆದ ಧರಣಿಗೆ ಬೆಂಬಲ ನೀಡಿ ಮಾತನಾಡಿದ ಅವರು, ನಿಮ್ಮ ಕಾಳಜಿ ರೈತರ ಪರ ಇಲ್ಲ, ನಿಮ್ಮದು ಉಗ್ರ ಹೋರಾಟ ಅಲ್ಲ. ನಿಮ್ಮದು ಸ್ವಾರ್ಥದ ಹೋರಾಟ. ಇದು ಎಲ್ಲರಿಗೂ ಸ್ಪಷ್ಟವಾಗಿದೆ. ಮೈಷುಗರ್ ಪ್ರಾರಂಭವಾದರೆ ಖಾಸಗೀ ಕಾರ್ಖಾನೆಗಳಿಗೆ ನಷ್ಟವಾಗಬಹುದು ಎಂಬ ಉದ್ದೇಶ ನಿಮಗೆ ಇರಬಹುದು. ಆದರೆ, ಜಿಲ್ಲೆಯ ಜನರು ಮೂರ್ಖರಲ್ಲ. ಅವರೆಂದೂ ಇಂತಹ ವಿಚಾರದಲ್ಲಿ ಮೋಸ ಹೋಗುವುದಿಲ್ಲ ಎಂದು ಅವರು ಹೇಳಿದರು.

ನಿಮ್ಮ ಸರಕಾರದ ಸಿಎಂ ಕಳೆದ ಜುಲೈನಲ್ಲಿ 69 ಕೋಟಿ ರೂ. ಮೀಸಲಿಟ್ಟು ಒ ಅಂಡ್ ಎಂ ಸೂತ್ರದಡಿ ಕಾರ್ಖಾನೆ ನಡೆಸಲು ತೀರ್ಮಾನಿಸಿದಾಗ ಹೋರಾಟ ಮಾಡದ ನೀವು ಇಂದಿನ ಸರಕಾರದ ವಿರುದ್ಧ ಹೋರಾಟ ಮಾಡುತ್ತಿರುವುದೇಕೆ? ಎಂದೂ ಅವರು ತರಾಟೆಗೆ ತೆಗೆದುಕೊಂಡರು.

ಸರಕಾರಗಳು ಕೊಟ್ಟ ಹಣದಿಂದ ಕಾರ್ಖಾನೆ ಆರಂಭವಾಗಲಿಲ್ಲ. ಊಹೆ ಮಾಡದಷ್ಟು ಭ್ರಷ್ಟಾಚಾರ ನಡೆದಿದೆ. ಈಗಲೂ ರೈತರಿಗೆ ಅನುಕೂಲವಾಗುವುದಿಲ್ಲ. ಈ ರೀತಿಯಾದರೂ ಮತ್ತೆ ಸರಕಾರವೇ ನಡೆಸಬೇಕೆನ್ನುವುದರಲ್ಲಿ ಅರ್ಥವಿಲ್ಲ ಎಂದು ಅವರು ಪ್ರತಿಪಾದಿಸಿದರು.

ಇಷ್ಟು ವರ್ಷ ಕಾರ್ಖಾನೆ ಬೀಗ ಹಾಕಿದ್ದರೂ ಒಂದೂ ಪ್ರತಿಭಟನೆ ಮಾಡದವರು ಈಗ ಕಾರ್ಖಾನೆ ಪ್ರಾರಂಭವಾಗುವಾಗ ಹೋರಾಟಕ್ಕೆ ನಿಂತಿರುವುದೇಕೆ? ಎಷ್ಟು ವರ್ಷ ಹೀಗೆ ಮಾಡುತ್ತಾರೆ? ಯಾವ ಸ್ವಾರ್ಥದಿಂದ ಮಾಡುತ್ತಿದ್ದಾರೆ? ಉತ್ತರ ಕೊಡಬೇಕು ಎಂದು ಅವರು ಹೇಳಿದರು.

ಕಾರ್ಖಾನೆಯನ್ನು ಸರಕಾರವೇ ನಡೆಸಬೇಕೆಂದು ಪಟ್ಟುಹಿಡಿದಿರುವವರು ಸರಕಾರಕ್ಕೆ ಬೆದರಿಕೆ ಹಾಕುವುದಕ್ಕೆ ಮತ್ತು ಜನರನ್ನು ದಾರಿ ತಪ್ಪಿಸುವುದಕ್ಕೆ ಹೋಗಬೇಡಿ ಎಂದು ಅವರು ಸಲಹೆ ನೀಡಿದರು.

ಸಿನಿಮಾ ರಂಗದ ನನ್ನ ಹಿತೈಷಿಗಳಿಗೆ ಕಾರ್ಖಾನೆ ಮೇಲೆ ಕಣ್ಣಿದೆ ಎಂಬುದಾಗಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ. ರೈತರಿಗಾಗಿ ಸಚಿವ ಸ್ಥಾನ ತ್ಯಾಗ ಮಾಡಿದವರ ಕುಟುಂಬದಿಂದ ಬಂದವಳು ನಾನು. ಈ ರೀತಿಯ ಅಪಾದನೆಗಳಿಂದ ಅವರೇ ಗೌರವ ಕಳೆದುಕೊಳ್ಳುತ್ತಾರೆ.
-ಸುಮಲತಾ ಅಂಬರೀಷ್, ಸಂಸದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X