Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 15 ದಿನಗಳೊಳಗೆ ವಲಸೆ ಕಾರ್ಮಿಕರಿಗೆ ಮನೆಗೆ...

15 ದಿನಗಳೊಳಗೆ ವಲಸೆ ಕಾರ್ಮಿಕರಿಗೆ ಮನೆಗೆ ಮರಳಲು ವ್ಯವಸ್ಥೆ ಮಾಡಿ

ಕೇಂದ್ರಕ್ಕೆ ತನ್ನ ಆದೇಶವನ್ನು ಮತ್ತೆ ನೆನಪಿಸಿದ ಸು.ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ19 Jun 2020 9:14 PM IST
share
15 ದಿನಗಳೊಳಗೆ ವಲಸೆ ಕಾರ್ಮಿಕರಿಗೆ ಮನೆಗೆ ಮರಳಲು ವ್ಯವಸ್ಥೆ ಮಾಡಿ

ಹೊಸದಿಲ್ಲಿ,ಜೂ.19: ಕೋವಿಡ್19 ಲಾಕ್‌ಡೌನ್ ಹಿನ್ನೆಲೆಯಲ್ಲಿ ದುಡಿಮೆ ಕಳೆದುಕೊಂಡು ಊರಿಗೆ ವಾಪಸಾಗುತ್ತಿರುವ ವಲಸೆ ಕಾರ್ಮಿಕರನ್ನು ಗುರುತಿಸಿ, ಮುಂದಿನ 15 ದಿನಗಳೊಳಗೆ ಅವರ ಸಾಗಾಟಕ್ಕೆ ಸೂಕ್ತ ಏರ್ಪಾಡುಗಳನ್ನು ಮಾಡಬೇಕೆಂದು ಸುಪ್ರೀಂಕೋರ್ಟ್ ಶುಕ್ರವಾರ ಪುನರುಚ್ಚರಿಸಿದೆ. ವಲಸೆ ಕಾರ್ಮಿಕರ ಮಹಾನಿರ್ಗಮನದ ಸಮಸ್ಯೆಯನ್ನು ಸ್ವಯಂಪ್ರೇರಿತವಾಗಿ ಗಮನಕ್ಕೆ ತೆಗೆದುಕೊಂಡಿರುವ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಎಸ್.ಕೆ. ಕೌಲ್ ಹಾಗೂ ಎಂ.ಆರ್.ಶಾ ನೇತೃತ್ವದ ನ್ಯಾಯಪೀಠ ಈ ಆದೇಶ ನೀಡಿದೆಯೆಂದು ಬಾರ್‌ಆ್ಯಂಡ್‌ಬೆಂಚ್ ಸುದ್ದಿಜಾಲತಾಣ ಶುಕ್ರವಾರ ವರದಿ ಮಾಡಿದೆ.

     ವಲಸೆ ಕಾರ್ಮಿಕರನ್ನು ಅವರ ಊರಿಗೆ ತಲುಪಿಸುವ ವ್ಯವಸ್ಥೆ ಮಾಡಬೇಕೆಂದು ಸುಪ್ರೀಂಕೋರ್ಟ್ ನೀಡಿದ ಆದೇಶವನ್ನು ಕೇಂದ್ರ ಸರಕಾರವು ‘ಮಾತು ಮತ್ತು ಕೃತಿಯಲ್ಲಿ ಪಾಲಿಸುತ್ತಿಲ್ಲ’ ಎಂದು ನ್ಯಾಯವಾದಿ ಇಂದಿರಾ ಜೈಸಿಂಗ್ ಆಪಾದಿಸಿದರು. ವಲಸೆ ಕಾರ್ಮಿಕರು ಒದಗಿಸಬೇಕಾದ ಮಾಹಿತಿಗಳ ದೇಶೀಯ ಭಾಷೆಗಳಲ್ಲಿ ಈ ಬಗ್ಗೆ ಯಾವುದೇ ಜಾಹೀರಾತುಗಳನ್ನು ನೀಡಲಾಗುತ್ತಿಲ್ಲ. ವಲಸೆ ಕಾರ್ಮಿಕರ ಪ್ರಯೋಜನಕ್ಕಾಗಿ ಸುಪ್ರೀಂಕೋರ್ಟ್‌ನ ಆದೇಶಗಳನ್ನು ರಾಜ್ಯ ಸರಕಾರಗಳು ಪಾಲಿಸುತ್ತಿಲ್ಲ’’ ಎಂದವರು ಹೇಳಿದ್ದಾರೆ.

  ಕೇಂದ್ರ ಸರಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ರಾಜ್ಯ ಸರಕಾರಗಳು ಮನವಿ ಸಲ್ಲಿಸಿದ 24 ತಾಸುಗಳ ಒಳಗೆ ವಲಸೆ ಕಾರ್ಮಿಕರ ಸಾಗಣೆಗಾಗಿ ವಿಶೇಷ ರೈಲುಗಳನ್ನು ಕಳುಹಿಸಲಾಗಿದೆ ಎಂದವರು ತಿಳಿಸಿದರು.

  ಸುಪ್ರೀಂಕೋರ್ಟ್‌ನ ಆದೇಶಕ್ಕೆ ವ್ಯತಿರಿಕ್ತವಾಗಿ ವಲಸೆ ಕಾರ್ಮಿಕರಿಗೆ ಅವರ ಪ್ರಯಾಣಕ್ಕೆ ಹಣಪಾವತಿಸುವಂತೆ ಕೇಳಲಾಗುತ್ತಿದೆ ಎಂದು ನ್ಯಾಯವಾದಿ ಗೋಪಾಲ್ ಶಂಕರನಾರಾಯಣನ್ ನ್ಯಾಯಪೀಠದ ಗಮನಕ್ಕೆ ತಂದರು. ಇದಕ್ಕೆ ಉತ್ತರಿಸಿದ ನ್ಯಾಯಪೀಠವು ವಲಸೆಕಾರ್ಮಿಕರ ಸಾಗಾಟದ ಹಣವನ್ನು ಕೇಂದ್ರ ಪಾವತಿಸಲಿ ಅಥವಾ ರಾಜ್ಯಗಳು ಪಾವತಿಸಲಿ ಅದು ವಿಷಯವಲ್ಲ. ಒಟ್ಟಿನಲ್ಲಿ ವಲಸೆ ಕಾರ್ಮಿಕರು ಹಣಪಾವತಿಸಬಾರದು ಎಂಬುದೇ ನಮ್ಮ ಆದೇಶವಾಗಿದೆ ಎಂದರು.

  ವಲಸೆ ಕಾರ್ಮಿಕರ ಸಾಗಾಣಿಕೆಗೆ ಸುಪ್ರೀಂಕೋರ್ಟ್ ನಿಗದಿಪಡಿಸಿದ 15 ದಿನಗಳ ಅವಧಿಯು ಕಡ್ಡಾಯವೇನಲ್ಲ ಎಂಬ ಕರ್ನಾಟಕ ಹೈಕೋರ್ಟ್ ಆದೇಶವನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಶಾ ಅವರು, ಸುಪ್ರೀಂಕೋರ್ಟ್‌ನ ಆದೇಶವು ಕಡ್ಡಾಯವಾಗಿ ಪಾಲಿಸತಕ್ಕದ್ದೆಂದು ಕರ್ನಾಟಕ ಹೈಕೋರ್ಟ್‌ಗೆ ಮಾಹಿತಿ ನೀಡಬೇಕಾಗಿದೆ ಎಂದರು. ಜುಲೈ 8ರಂದು ನ್ಯಾಯಾಲಯ ಈ ವಿಷಯವನ್ನು ಮತ್ತೆ ಕೈಗೆತ್ತಿಕೊಳ್ಳಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X