Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಗಡಿ ಗ್ರಾಮ ಕರಿಕೆಯ ಜನರ ಗೋಳು...

ಮಡಿಕೇರಿ: ಗಡಿ ಗ್ರಾಮ ಕರಿಕೆಯ ಜನರ ಗೋಳು ಕೇಳುವವರಿಲ್ಲ; ರಸ್ತೆ ನಿರ್ಬಂಧವೇ ದೊಡ್ಡ ಸಮಸ್ಯೆ

ರಸ್ತೆ ತೆರವಿಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ19 Jun 2020 11:31 PM IST
share
ಮಡಿಕೇರಿ: ಗಡಿ ಗ್ರಾಮ ಕರಿಕೆಯ ಜನರ ಗೋಳು ಕೇಳುವವರಿಲ್ಲ; ರಸ್ತೆ ನಿರ್ಬಂಧವೇ ದೊಡ್ಡ ಸಮಸ್ಯೆ

ಮಡಿಕೇರಿ, ಜೂ.19: ಕೊಡಗಿನ ಗಡಿಭಾಗದ ಮಡಿಕೇರಿ ತಾಲೂಕಿನ ಕರಿಕೆ ಗ್ರಾಮದಲ್ಲಿ ಕೊರೋನ ಹಿನ್ನೆಲೆ ಮಣ್ಣಿನಿಂದ ಮುಚ್ಚಲಾಗಿರುವ ಕೇರಳದ ಗಡಿ ರಸ್ತೆಯನ್ನು, ಗ್ರಾಮಸ್ಥರ ಹಿತದೃಷ್ಟಿಯಿಂದ ಮತ್ತು ಅನಾರೋಗ್ಯ ಪೀಡಿತರ ತುರ್ತು ಚಿಕಿತ್ಸೆಗಾಗಿ ಬಂಧ ಮುಕ್ತಗೊಳಿಸಬೇಕೆಂದು ಸ್ಥಳೀಯ ಗ್ರೀನ್ ಸ್ಟಾರ್ ಯೂತ್ ಕ್ಲಬ್ ಅಧ್ಯಕ್ಷ ಕೆ.ಎ.ಸಿರಾಜ್ ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೋನ ಸೋಂಕು ವ್ಯಾಪಿಸದಂತೆ ಸರ್ಕಾರ ವಿಧಿಸಿರುವ ಎಲ್ಲಾ ನಿರ್ಬಂಧಗಳನ್ನು ನಾವು ಸ್ವಾಗತಿಸುತ್ತೇವೆ ಮತ್ತು ಗಡಿ ರಸ್ತೆಯನ್ನು ಮುಚ್ಚಿರುವುದಕ್ಕೂ ನಮ್ಮ ವಿರೋಧವಿಲ್ಲ. ಆದರೆ ಗ್ರಾಮದ ಜನರ ಆರೋಗ್ಯದ ಹಿತ ದೃಷ್ಟಿಯಿಂದ ತುರ್ತು ಸಂದರ್ಭಗಳಲ್ಲಿ ಕೇರಳದ ಪಾಣತ್ತೂರಿನ ಮೂಲಕ ಸುಳ್ಯ, ಮಂಗಳೂರು ಆಸ್ಪತ್ರೆಗಳಿಗೆ ತೆರಳಲು ಅನುಕೂಲವಾಗುವಂತೆ, ಮುಚ್ಚಲ್ಪಟ್ಟಿರುವ ಕೇರಳ ರಸ್ತೆಯನ್ನು ಒಂದಷ್ಟು ತೆರವುಗೊಳಿಸಬೇಕು. ಬ್ಯಾರಿಕೇಡ್ ಅಳವಡಿಸಿ ಅನಾರೋಗ್ಯ ಪೀಡಿತರನ್ನು ಕರೆದೊಯ್ಯಲು ಅವಕಾಶ ಒದಗಿಸಿಕೊಡಬೇಕು ಎಂದು ಮನವಿ ಮಾಡಿದರು.

ಸುಮಾರು ಐದು ಸಾವಿರ ಜನಸಂಖ್ಯೆ ಹೊಂದಿರುವ ಕರಿಕೆಗೆ ಸಮೀಪದ ಮತ್ತೊಂದು ಜಿಲ್ಲೆಯ ಗ್ರಾಮವೆಂದರೆ ಅದು ಭಾಗಮಂಡಲವಾಗಿದೆ. ಅದು ಕರಿಕೆಯಿಂದ 30 ಕಿ. ಮೀ. ದೂರದಲ್ಲಿದೆ, ಇದೇ ಕಾರಣಕ್ಕೆ ಗ್ರಾಮಸ್ಥರು ದೈನಂದಿನ ಚಟುವಟಿಕೆಗಳಿಗೆ ಹಾಗೂ ತುರ್ತು ಚಿಕಿತ್ಸೆಗೆ ನೆರೆಯ ಕೇರಳದ ಪಾನತ್ತಡಿ ಪಂಚಾಯತ್‍ಗೆ ಒಳಪಟ್ಟ, 6 ಕಿ.ಮೀ. ದೂರದಲ್ಲಿರುವ ಪಾಣತ್ತೂರು ಗ್ರಾಮವನ್ನು ಅವಲಂಭಿಸಿದ್ದಾರೆ. ಗಂಭೀರ ಆರೋಗ್ಯ ಸಮಸ್ಯೆ ಎದುರಾದಾಗ ಪಾಣತ್ತೂರು ಮೂಲಕ ಕರ್ನಾಟಕದ ಸುಳ್ಯ ಮತ್ತು ಮಂಗಳೂರು ಆಸ್ಪತ್ರೆಗೆ ತೆರಳುತ್ತಾರೆ ಎಂದರು.

ಕರಿಕೆಯಿಂದ ಮಂಗಳೂರಿಗೆ 103 ಕಿ.ಮೀ. ನಷ್ಟು ದೂರವಿದೆ. ಪ್ರಸ್ತುತ ಗಡಿ ರಸ್ತೆಯನ್ನು ಮುಚ್ಚಿರುವುದರಿಂದ ಮಡಿಕೇರಿ ಮೂಲಕ ಮಂಗಳೂರಿಗೆ ತೆರಳಲು 230 ಕಿ.ಮೀ.ಗಳಷ್ಟು ದೂರ ಕ್ರಮಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕೇರಳ ಗಡಿ ರಸ್ತೆಯನ್ನು ತುರ್ತು ಚಿಕಿತ್ಸೆಗಾಗಿ ಸಂಚಾರಕ್ಕೆ ಮುಕ್ತಗೊಳಿಸಬೇಕೆಂದು ಸಿರಾಜ್ ಒತ್ತಾಯಿಸಿದರು.

ಹದಗೆಟ್ಟ ರಸ್ತೆ
ಕರಿಕೆ ಭಾಗಮಂಡಲ ರಸ್ತೆಯು ಅರಣ್ಯ ಪ್ರದೇಶದಿಂದ ಕೂಡಿದ್ದು, ರಸ್ತೆಗಳು ಸಂಪೂರ್ಣ ಹದಗೆಟ್ಟಿದೆ. ಇದರಿಂದ ತುರ್ತು ಆರೋಗ್ಯ ಸಮಸ್ಯೆಗಳು ಉಂಟಾದಾಗ ರೋಗಿಯನ್ನು ಮಡಿಕೇರಿ ಮೂಲಕ ಮಂಗಳೂರಿಗೆ ಕರೆದೊಯ್ಯಲು ಸುಮಾರು 6 ಗಂಟೆ ಪ್ರಯಾಣಿಸಬೇಕಾದ ಪರಿಸ್ಥಿತಿ ಇದೆ. ಪಾಣತ್ತೂರು ಮೂಲಕವಾದರೆ ಮಂಗಳೂರಿಗೆ ಕೇವಲ 3 ಗಂಟೆಗಳ ಅವಧಿಯಲ್ಲಿ ತಲುಪಲು ಸಾಧ್ಯವಿದೆ ಎಂದು ತಿಳಿಸಿದರು.

ಹೃದ್ರೋಗಿಗಳ ಸಾವು
ಗಡಿ ರಸ್ತೆ ಮುಚ್ಚಲ್ಪಟ್ಟ ಹಿನ್ನೆಲೆ ಸೂಕ್ತ ಸಮಯದಲ್ಲಿ ಚಿಕತ್ಸೆ ಕೊಡಿಸಲು ಸಾಧ್ಯವಾಗದೆ ಕರಿಕೆ ವ್ಯಾಪ್ತಿಯಲ್ಲಿ ಮೂವರು ಹೃದ್ರೋಗಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ ಎಂದು ತಿಳಿಸಿದ ಸಿರಾಜ್, ಇಂತಹ ಘಟನೆಗಳು ಮರುಕಳಿಸದಂತೆ ಜಿಲ್ಲಾಡಳಿತ ರಸ್ತೆ ಸಂಪರ್ಕ ಕಲ್ಪಿಸಬೇಕೆಂದರು.

ಸೌಲಭ್ಯಗಳ ಕೊರತೆ
ಕರಿಕೆ ಗ್ರಾಮದಲ್ಲಿ ಒಂದು ಸಣ್ಣ ಆಸ್ಪತ್ರೆ ಇದ್ದು, ಅಗತ್ಯ ವ್ಯವಸ್ಥೆಗಳಿಲ್ಲದೆ ಪರದಾಡುವಂತಾಗಿದೆ. ಇಲ್ಲಿ ಸೀಮಿತ ಔಷಧಿಗಳು ಮಾತ್ರ ಲಾಭ್ಯವಾಗುತ್ತದೆ. ಅಲ್ಲದೆ, ಯಾವುದೇ ರೀತಿಯ ಲ್ಯಾಬ್ ಸೌಲಭ್ಯಗಳಿಲ್ಲ. ಈಗಾಗಲೇ ಮಳೆಗಾಲ ಪ್ರಾರಂಭವಾಗಿದ್ದು, ಈ ಭಾಗದಲ್ಲಿ ಡೆಂಗ್ ಪ್ರಕರಣಗಳು ಹೆಚ್ಚಾಗಿದೆ.  ರೋಗಿಗಳ ರಕ್ತ ಪರೀಕ್ಷೆ ಇಲ್ಲಿ ನಡೆಸುವುದು ಅಸಾಧ್ಯವಾಗಿರುವುದು ಸಮಸ್ಯೆಗೆ ಕಾರಣವಾಗಿದೆ ಎಂದರು.

ಆಂಬ್ಯುಲೆನ್ಸ್ ಕೊರತೆ
ಕರಿಕೆ ಗ್ರಾಮದ ಜನರಿಗೆ ತುರ್ತಾಗಿ ಚಿಕಿತ್ಸೆ ನೀಡಲು ಆಂಬ್ಯುಲೆನ್ಸ್ ವ್ಯವಸ್ಥೆ ಇಲ್ಲದೆ ಗ್ರಾಮಸ್ಥರು ಪರದಾಡುವಂತಾಗಿದೆ. ಈ ಸೌಲಭ್ಯ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ ಅವರು, ಇಲ್ಲಿನ ಸಮಸ್ಯೆಗಳ ಬಗ್ಗೆ ಶಾಸಕರಿಗೆ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳಿಗೆ ತೊಂದರೆ
ಶಿಕ್ಷಣದ ಸಂಕಷ್ಟ-ಕರಿಕೆ ಗ್ರಾಮಕ್ಕೆ ಒಂದು ಕೆಎಸ್‍ಆರ್‍ಟಿಸಿ ಸಂಚರಿಸುತ್ತಿದ್ದು, ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳಬೇಕಾದರೆ ಬೆಳಗ್ಗೆ 6 ಗಂಟೆಗೆ ತೆರಳಬೇಕಾಗಿದೆ. ಇದೀಗ ಕೊರೊನ ಲಾಕ್‍ಡೌನ್‍ನಿಂದ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಆನ್‍ಲೈನ್ ಶಿಕ್ಷಣ ಮಾಡುವುದಾಗಿ ತಿಳಿಸಿದ್ದು, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅಡಚಣೆಯಾಗಿದೆ. ಗ್ರಾಮದಲ್ಲಿ ಬಿಎಸ್‍ಎನ್‍ಎಲ್ ಕಂಪೆನಿಯ ಟವರ್ ಮಾತ್ರ ಇದ್ದು, ಇಲ್ಲಿ ಕೇವಲ 2ಜಿ ನೆಟ್‍ವರ್ಕ್ ಮಾತ್ರ ಲಭ್ಯವಿದೆ. ವಿದ್ಯುತ್ ಇಲ್ಲದಿದ್ದರೆ ಈ ನೆಟ್‍ವರ್ಕ್ ಕೂಡ ದೊರಕುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಆನ್ ಲೈನ್ ಶಿಕ್ಷಣ ಪಡೆಯುವುದಾದರು ಹೇಗೆಂದು ಪ್ರಶ್ನಿಸಿದ ಸಿರಾಜ್, ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಿ ಗ್ರಾಮಕ್ಕೆ ಕನಿಷ್ಠ 3ಜಿ ನೆಟ್‍ವರ್ಕ್ ಕಲ್ಪಿಸಲು ಮುಂದಾಗಬೇಕೆಂದು ಮನವಿ ಮಾಡಿದರು.

ಗ್ರಾಮದಲ್ಲಿ 1 ರಿಂದ 10 ನೇ ತರಗತಿಯವರೆಗೆ ಮಾತ್ರ ಶಿಕ್ಷಣಕ್ಕೆ ಅವಕಾಶವಿದ್ದು, ಪದವಿ ಪೂರ್ವ ಶಿಕ್ಷಣಕ್ಕೆ ಭಾಗಮಂಡಲ ಇಲ್ಲವೆ ಸುಳ್ಯವನ್ನು ಅವಲಂಬಿಸುವ ಪರಿಸ್ಥಿತಿ ಇದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರಿಕೆ ವಿಭಾಗಕ್ಕೆ ಪದವಿ ಪೂರ್ವ ಕಾಲೇಜನ್ನು ಮಂಜೂರು ಮಾಡಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಕ್ಲಬ್ ಕಾರ್ಯದರ್ಶಿ ಎಂ.ಎ.ಜಾಬಿರ್, ಸದಸ್ಯರುಗಳಾದ ಸಿ.ಹೆಚ್.ಅಶ್ರಫ್, ಪಿ.ಕೆ.ಮುನೀರ್ ಹಾಗೂ ಟಿ.ಕೆ.ಶೌಕತ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X