Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹುತಾತ್ಮರನ್ನು ಗೌರವಿಸುವಂತೆ ಪ್ರಧಾನಿ,...

ಹುತಾತ್ಮರನ್ನು ಗೌರವಿಸುವಂತೆ ಪ್ರಧಾನಿ, ರಾಷ್ಟ್ರಪತಿಗೆ ಮೇಜರ್ ಅನುಜ್ ಸೂದ್ ತಂದೆಯ ಅಹವಾಲು

ವಾರ್ತಾಭಾರತಿವಾರ್ತಾಭಾರತಿ19 Jun 2020 11:38 PM IST
share
ಹುತಾತ್ಮರನ್ನು ಗೌರವಿಸುವಂತೆ ಪ್ರಧಾನಿ, ರಾಷ್ಟ್ರಪತಿಗೆ ಮೇಜರ್ ಅನುಜ್ ಸೂದ್ ತಂದೆಯ ಅಹವಾಲು

ಹೊಸದಿಲ್ಲಿ,ಜೂ.19: ಜಮ್ಮು-ಕಾಶ್ಮೀರದ ಹಂದ್ವಾರಾದಲ್ಲಿ ಮೇ 3ರಂದು ಭಯೋತ್ಪಾದಕರೊಂದಿಗೆ ಗುಂಡಿನ ಕಾಳಗದಲ್ಲಿ ಹುತಾತ್ಮರಾಗಿರುವ ಐವರು ಯೋಧರಲ್ಲೋರ್ವರಾದ ಮೇಜರ್ ಅನುಜ್ ಸೂದ್ ಅವರ ತಂದೆ ನಿವೃತ್ತ ಬ್ರಿಗೇಡಿಯರ್ ಸಿ.ಕೆ.ಸೂದ್ ಅವರು,ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿರುವ ವೀರರಿಗೆ ಸೂಕ್ತ ಗೌರವಗಳನ್ನು ದೊರಕಿಸಲು ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಉದ್ದೇಶಿಸಿ ‘ಚೇಂಜ್ ಡಾಟ್ ಆರ್ಗ್ ’ ಅಹವಾಲನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ‘

ಭಾರತಕ್ಕಾಗಿ ತಮ್ಮ ಪ್ರಾಣಗಳನ್ನು ತ್ಯಾಗ ಮಾಡುವ ಕೆಚ್ಚೆದೆಯ ವೀರರನ್ನು ಒಮ್ಮೆ ಟ್ವೀಟ್‌ನಲ್ಲಿ ಪ್ರಸ್ತಾಪಿಸಲಾಗುತ್ತದೆ,ನಂತರ ಅವರನ್ನು ಶಾಶ್ವತವಾಗಿ ಮರೆಯಲಾಗುತ್ತದೆ ’ಎಂಬ ಸಾಲಿನೊಂದಿಗೆ ಆರಂಭಗೊಂಡಿರುವ ಈ ಅಹವಾಲನ್ನು ಮೂರು ದಿನಗಳ ಹಿಂದಷ್ಟೇ ಪೋಸ್ಟ್ ಮಾಡಲಾಗಿದ್ದು,ಈಗಾಗಲೇ ಸುಮಾರು 20,000 ಅಂಕಿತಗಳು ದೊರಕಿವೆ.

ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸುವ ಯೋಧರ ತ್ಯಾಗವನ್ನು ಗುರುತಿಸುವಂತೆ ಸರಕಾರ ಮತ್ತು ಅಧಿಕಾರಿಗಳನ್ನು ಈ ಅಹವಾಲು ಆಗ್ರಹಿಸಿದೆ.

 “ಕೇವಲ ಟ್ವೀಟ್ ಮಾಡಿದರಷ್ಟೇ ಸಾಲದು. ಅವರ ಹೆಸರುಗಳನ್ನು ಹೇಳಿ. ಅವರ ತ್ಯಾಗಗಳನ್ನು ಅಂಗೀಕರಿಸಿ. ನಿಂತು ವೌನವನ್ನು ಆಚರಿಸಿ ಮತ್ತು ಅವರ ಕುಟುಂಬಗಳನ್ನು ಬೆಂಬಲಿಸಿ. ನಮ್ಮ ‘ಹೀರೊ’ಗಳು ಇನ್ನೂ ಹೆಚ್ಚಿನದಕ್ಕೆ ಅರ್ಹರಾಗಿದ್ದಾರೆ. ಅದಕ್ಕೆ ಆರಂಭವೊಂದನ್ನು ಮಾಡೋಣ. ವೀರಯೋಧರ ಕುಟುಂಬಗಳು ತಮ್ಮ ಧೀರ ಪುತ್ರರು ಮತ್ತು ಗಂಡಂದಿರ ತ್ಯಾಗಗಳನ್ನು ಪುರಸ್ಕರಿಸಿ ಪ್ರಧಾನಿ ಕಚೇರಿ/ರಾಷ್ಟ್ರಪತಿಗಳ ಕಚೇರಿಯಿಂದ ಪತ್ರವೊಂದನ್ನು ಸ್ವೀಕರಿಸುವಂತಾಗಲು ದಯವಿಟ್ಟು ನನ್ನ ಈ ಅಹವಾಲಿಗೆ ಸಹಿ ಮಾಡಿ” ಎಂದು ಸೂದ್ ಕೋರಿದ್ದಾರೆ.

 ಕೋವಿಡ್-19 ಸಮಯದಲ್ಲಿ ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯರಿಗೆ ಭಾರತೀಯ ವಾಯುಪಡೆಯು ‘ಫ್ಲೈ-ಪಾಸ್ಟ್’ನೊಂದಿಗೆ ಗೌರವ ಸಲ್ಲಿಸಿದ್ದನ್ನು ಬೆಟ್ಟು ಮಾಡಿರುವ ಅಹವಾಲು,ಹುತಾತ್ಮರಿಗಾಗಿ ಇಂತಹ ಫ್ಲೈ-ಪಾಸ್ಟ್‌ಗಳೆಂದೂ ನಡೆದಿಲ್ಲ, ಅವರ ಗೌರವಾರ್ಥ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಲಾಗಿಲ್ಲ,ರಾಷ್ಟ್ರೀಯ ಶೋಕಾಚರಣೆಯಿಲ್ಲ,ನಮ್ಮ ಕೆಚ್ಚೆದೆಯ ಯೋಧರನ್ನು ವಂದಿಸಿ ಟೆಲಿಕಾಸ್ಟ್ ಕೂಡ ಇಲ್ಲ ಎಂದಿದೆ.

‘ದೇಶಕ್ಕಾಗಿ ಜೀವ ತೆತ್ತ ಯೋಧರನ್ನು ಗೌರವಿಸಲು ಪ್ರಮಾಣಿತ ರಾಷ್ಟ್ರೀಯ ಶಿಷ್ಟಾಚಾರವೊಂದನ್ನು ನಾವು ಸ್ಥಾಪಿಸಬೇಕಿದೆ. ಈ ನಿಟ್ಟಿನಲ್ಲಿ ಪೂರ್ವ ಲಡಾಖ್‌ನ ಭಾರತ-ಚೀನಾ ಗಡಿಯಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾಗಿರುವ ಯೋಧರ ಕುಟುಂಬಗಳಿಗೆ ದೇಶದ ಅತ್ಯುನ್ನತ ನಾಯಕರಿಂದ ಪತ್ರವು ಉತ್ತಮ ಆರಂಭವಾಗಲಿದೆ ಎಂದು ಅಹವಾಲಿನಲ್ಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X