ಕಾಪು: ರಾಜೀವ್ ಭವನದಲ್ಲಿ ಯೋಧರಿಗೆ ಶ್ರದ್ಧಾಂಜಲಿ

ಕಾಪು : ಗಡಿ ರಕ್ಷಣೆಯಲ್ಲಿ ಕಾರ್ಯನಿರತರಾಗಿದ್ದ ಭಾರತೀಯ ಸೈನಿಕರು ಇತ್ತೀಚೆಗೆ ಕುತಂತ್ರಿ ಚೀನೀ ಸೈನಿಕರಿಂದ ಹತರಾಗಿರುವುದು ಅತ್ಯಂತ ಖೇದಕರ ಮತ್ತು ಖಂಡನೀಯ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.
ಅವರು ಶನಿವಾರ ಕಾಪು ರಾಜೀವ್ ಭವನದಲ್ಲಿ, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿ ಮಾತನಾಡಿದರು.
ದೇಶಕ್ಕಾಗಿ ಪ್ರಾಣಾರ್ಪಣೆಗೈದ ವೀರ ಯೋಧರಿಗೆ ನಮ್ಮ ಭಾವಪೂರ್ಣ ನಮನಗಳು, ಹುತಾತ್ಮರಾದ ವೀರ ಯೋಧರ ಬಲಿದಾನ ವ್ಯರ್ಥವಾಗಬಾರದು, ಹಾಗೂ ಅವರ ಕುಟುಂಬವರ್ಗಕ್ಕೆ ಆತ್ಮಸ್ಥೈರ್ಯ ವನ್ನು, ಶಕ್ತಿಯನ್ನು ನೀಡಬೇಕು ಎಂದು ಹೇಳಿದರು.
ಅಧ್ಯಕ್ಷತೆಯನ್ನು ಬ್ಲಾಕ್ ಅಧ್ಯಕ್ಷ ನವೀನಚಂದ್ರ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ಕಾಪು ದಿವಾಕರ್ ಶೆಟ್ಟಿ, ಕೆ. ಇಬ್ರಾಹಿಂ ಮನ್ಹರ್, ಪ್ರಧಾನ ಕಾರ್ಯದರ್ಶಿ ವೈ. ಸುಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ವಿ.ಅಮೀನ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೇ, ಯುವ ಕಾಂಗ್ರೆಸ್ ಅಧ್ಯಕ್ಷರುಗಳಾದ ಮೆಲ್ವಿನ್ ಡಿಸೋಜ, ಚರಣ್ ವಿಠ್ಠಲ್ ಕುದಿ, ತಾಲ್ಲೂಕು ಪಂ. ಸದಸ್ಯರಾದ ಯು. ಸಿ.ಶೇಕಬ್ಬ, ದಿನೇಶ್ ಕೋಟ್ಯಾನ್, ಅಮೀರ್ ಮೊಹಮ್ಮದ್, ಅಬ್ದುಲ್ ಹಮೀದ್, ನಾಗೇಶ್ ಸುವರ್ಣ, ಕೆ. ಎಚ್. ಉಸ್ಮಾನ್, ಮಹಮ್ಮದ್ ಇಮ್ರಾನ್, ಶಾಂತಲತಾ ಶೆಟ್ಟಿ, ಸೌಮ್ಯಾ ಎಸ್., ಅಶ್ವಿನಿ.ಎನ್., ಸುನಿಲ್ ಬಂಗೇರ, ಪ್ರಶಾಂತ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.







