Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಗರ ಹಸಿರೀಕರಣ ಪ್ರತಿಯೊಬ್ಬರ ಕರ್ತವ್ಯ:...

ನಗರ ಹಸಿರೀಕರಣ ಪ್ರತಿಯೊಬ್ಬರ ಕರ್ತವ್ಯ: ಶಾಸಕ ವೇದವ್ಯಾಸ ಕಾಮತ್

ವಾರ್ತಾಭಾರತಿವಾರ್ತಾಭಾರತಿ20 Jun 2020 4:57 PM IST
share
ನಗರ ಹಸಿರೀಕರಣ ಪ್ರತಿಯೊಬ್ಬರ ಕರ್ತವ್ಯ: ಶಾಸಕ ವೇದವ್ಯಾಸ ಕಾಮತ್

ಮಂಗಳೂರು, ಜೂ.20: ನಗರ, ಪರಿಸರ ಹಸೀರೀಕರಣಗೊಳಿಸುವುದು ಪ್ರತಿಯೊಬ್ಬರ ಕರ್ತವ್ಯವೆಂದು ಎಂದು ಅರಿತಾಗ ಪರಿಸರ ಸಂರಕ್ಷಣೆ ಕಷ್ಟ ಸಾಧ್ಯವೇನಲ್ಲ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.

ನಗರದ ಲೇಡಿಹಿಲ್‌ನ ಪತ್ರಿಕಾಭವನ ಎದುರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಅರಣ್ಯ ಇಲಾಖೆ ವತಿಯಿಂದ ನಡೆದ ವನಮಹೋತ್ಸವ ಕಾಯಕ್ರಮ ನೆರವೇರಿಸಿ ಅವರು ಮಾತನಾಡಿದರು.

ನಗರ ಪ್ರದೇಶದಲ್ಲೂ ನಿಯಮ ಪ್ರಕಾರ ಶೇ.22 ಹಸಿರೀಕರಣ ಬೇಕು. ಆದರೆ ಮಂಗಳೂರು ಮಹಾನಗರದಲ್ಲಿ ಕೆಲವೊಂದು ಪ್ರದೇಶದಲ್ಲಿ ಶೇ.14 ಇದ್ದರೆ, ಇನ್ನು ಕೆಲವು ವಾರ್ಡ್ ಶೇ.2,3ಕೂಡಾ ಇಲ್ಲ ಎಂದವರು ಕಳವಳ ವ್ಯಕ್ತಪಡಿಸಿದರು.

ಪ್ರಕೃತಿ ನಮಗೆ ನಮ್ಮ ಹಿರಿಯರು ಬಳುವಳಿಯಾಗಿ ನೀಡಿದ ಕೊಡುಗೆಯಾಗಿದ್ದು, ಅದನ್ನು ಮುಂದಿನ ಪೀಳಿಗೆಗೆ ಉಳಿಸುವ ಜವಾಬ್ದಾರಿ ನಮಗಿದೆ. ಮಂಗಳೂರು ನಗರ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಹಕಾರದೊಂದಿಗೆ 10ಸಾವಿರ ಗಿಡಗಳನ್ನು ನೆಡಲಾಗಿದೆ. ಇದೇ ರೀತಿ ನಗರದ ಅಭಿವೃದ್ಧಿಯೊಂದಿಗೆ ಹಸೀರೀಕರಣದ ಕೆಲಸವನ್ನು ಪ್ರತಿಯೊಬ್ಬರು ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪ್ರತಿ ವರ್ಷ ವನಮಹೋತ್ಸವ ಆಚರಿಸುವ ಮೂಲಕ ಮಾದರಿಯಾಗಿದೆ ಎಂದರು.

ನಗರದ ಲೇಡಿಹಿಲ್, ಆಗ್ನೇಸ್ ಸೇರಿದಂತೆ ಮೂರು ವೃತ್ತಗಳನ್ನು ಗುರುತಿಸಿ ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗಿದೆ. ಈ ಮೂರು ವೃತ್ತಗಳನ್ನು ಸ್ಕೂಲ್ ಝೋನ್‌ಗಳಾಗಿ ಮಾರ್ಪಾಡು ಮಾಡಿ ಅಂತರಾಷ್ಟ್ರೀಯ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.

ತೋಟಗಾರಿಕಾ ಇಲಾಖಾ ಉಪನಿರ್ದೇಶಕ ಎಚ್.ಆರ್. ನಾಯ್ಕ ಮಾತನಾಡಿ, ನೈಟ್ರೋಜನ್, ಆಕ್ಸಿಜನ್ ಹೆಚ್ಚಳದಿಂದ ಸಮಸ್ಯೆಯಿಲ್ಲ. ಕಾರ್ಬನ್ ಡೈ ಆಕ್ಸೈಡ್ ಸೂರ್ಯನ ಕಿರಣಗಳ ಶಕ್ತಿ ಹಿಡಿದಿಟ್ಟು ಉಷ್ಣತೆ ಹೆಚ್ಚಳ ಮಾಡುತ್ತಿದ್ದು, ಆಗ ಪ್ರಕೃತಿಯಲ್ಲಿ ಏರು-ಪೇರಾಗುತ್ತದೆ. ಪ್ರಕೃತಿಯಲ್ಲಿ ಗಿಡಗಳ ಸಂಖ್ಯೆ ಹೆಚ್ಚಾಗಿದ್ದರೆ ಕಾರ್ಬನ್ ಡೈಆಕ್ಸೈಡ್‌ನ್ನು ಹೀರಿಕೊಳ್ಳುತ್ತವೆ. ಹಾಗಾಗಿ ಹೆಚ್ಚಾಗಿ ಮರಗಳನ್ನು ಬೆಳೆಯಬೇಕು ಎಂದರು.

ಸಹಾಯಕ ಮುಖ್ಯ ಅರಣ್ಯಾಧಿಕಾರಿ ಶಂಕರೇಗೌಡ, ವಲಯ ಅರಣ್ಯಾಧಿಕಾರಿ ಶ್ರೀಧರ್ ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಕಾರ್ಯಕಾರಿ ಸಮಿತಿ ಸದಸ್ಯರಾದ ವಿಜಯ್ ಕೋಟ್ಯಾನ್ ಪಡು ಕಾರ್ಯಕ್ರಮ ನಿರೂಪಿಸಿದರು. ಆರ್.ಸಿ. ಭಟ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X