ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೈದ ವ್ಯಕ್ತಿಯ ಮೃತದೇಹ ಪತ್ತೆ
ಉಳ್ಳಾಲ: ರಾ.ಹೆ. 66 ಉಳ್ಳಾಲ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೈದ ತಲಪಾಡಿ ದೇವಿಪುರ ನಿವಾಸಿ ಸುರೇಂದ್ರ ರೈ (45) ಅವರ ಮೃತದೇಹ ಉಳ್ಳಾಲ ಹೊಯ್ಗೆಯಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿದೆ.
ಮೃತರು ನಗರದ ಆಸ್ಪತ್ರೆಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಅವರು ಶುಕ್ರವಾರ ಸೇತುವೆಯಲ್ಲಿ ನಡೆದುಕೊಂಡು ಹೋಗಿ ಇದ್ದಕ್ಕಿದ್ದಂತೆ ನದಿಗೆ ಹಾರಿದ್ದರು. ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
Next Story