Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಾಕ್‌ಡೌನ್: ಚೆನ್ನೈನಲ್ಲಿ ಮಾಂಸ, ಮೀನು...

ಲಾಕ್‌ಡೌನ್: ಚೆನ್ನೈನಲ್ಲಿ ಮಾಂಸ, ಮೀನು ಮಾರಾಟ ನಿಷೇಧ

ವಾರ್ತಾಭಾರತಿವಾರ್ತಾಭಾರತಿ20 Jun 2020 9:58 PM IST
share
ಲಾಕ್‌ಡೌನ್: ಚೆನ್ನೈನಲ್ಲಿ ಮಾಂಸ, ಮೀನು ಮಾರಾಟ ನಿಷೇಧ

 ಚೆನ್ನೈ, ಜೂ.21: ಕೋವಿಡ್-19 ಹರಡುವಿಕೆಯನ್ನು ನಿಯಂತ್ರಿಸುವುದಕ್ಕಾಗಿ ಚೆನ್ನೈ ಮಹಾನಗರದಲ್ಲಿ ಜೂನ್ 30ರವರೆಗೆ ಲಾಕ್‌ಡೌನ್ ಹೇರಲಾಗಿರುವ ಅವಧಿಯಲ್ಲಿ ಎಲ್ಲಾ ಕಸಾಯಿಖಾನೆಗಳು, ಮೀನು,ಮಾಂಸ ಹಾಗೂ ಕೋಳಿ ಮಾರಾಟದ ಅಂಗಡಿಗಳನ್ನು ಮುಚ್ಚುಗಡೆಗೊಳಿಸಿದೆ. ಈ ಸ್ಥಳಗಳಲ್ಲಿ ವಿಶೇಷವಾಗಿ ವಾರಾಂತ್ಯದಲ್ಲಿ ವಿಪರೀತ ಜನದಟ್ಟಣೆ ಇರುವುದರಿಂದ ಸೋಂಕು ಹರಡುವ ಅಪಾಯದ ಸಾಧ್ಯತೆಯ ಹಿನ್ನೆಲೆಯಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆಯೆಂದು ಮೂಲಗಳು ತಿಳಿಸಿವೆ.

   ಈ ಮಧ್ಯೆ ಮೀನು, ಮಾಂಸ ಅಲಭ್ಯತೆಯ ಹಿನ್ನೆಲೆಯಲ್ಲಿ ನಗರದ ಬಹುತೇಕ ಮಾಂಸಾಹಾರಿ ರೆಸ್ಟಾರೆಂಟ್‌ಗಳು ಕೂಡಾ ಮಾಂಸಹಾರ ಖಾದ್ಯಗಳನ್ನು ತಮ್ಮ ಮೆನುವಿನಿಂದ ತೆಗೆದುಹಾಕಿವೆ.

 ಆದಾಗ್ಯೂ ಕೋಳಿಸಾಕಣಾ ಕೇಂದ್ರಗಳಿಂದ ಕೋಳಿಗಳನ್ನೇ ನೇರವಾಗಿ ತರಿಸಿಕೊಳ್ಳುವ ಮಾಂಸಹಾರಿ ರೆಸ್ಟೊರೆಂಟ್‌ಗಳಿಗೆ ಮಾತ್ರ ತಮ್ಮ ಗ್ರಾಹಕರಿಗೆ ಕೋಳಿಮಾಂಸದ ಖಾದ್ಯಗಳನ್ನು ಪೂರೈಕೆ ಮಾಡಲು ಸಾಧ್ಯವಾಗಲಿದೆ. ಆದರೆ ಲಾಕ್‌ಡೌನ್ ಕಾರಣದಿಂದಾಗಿ ಗ್ರಾಮಾಂತರಪ್ರದೇಶಗಳಲ್ಲಿರುವ ಪೌಲ್ಟ್ರಿಗಳಿಂದ ಚೆನ್ನೈಗೆ ಶೀತಲೀಕರಣದ ವ್ಯವಸ್ಥೆಯಿರುವ ಟ್ರಕ್‌ಗಳಿಂದ ಕೋಳಿಮಾಂಸವನ್ನು ತರಲು ಇ-ಪಾಸ್‌ಗಳನ್ನು ರೆಸ್ಟಾರೆಂಟ್‌ಗಳು ಪಡೆದುಕೊಳ್ಳಬೇಕಿದೆ.

ಕಸಾಯಿಖಾನೆಗಳು ಹಾಗೂ ಮಟನ್ ಆಂಗಡಿಗಳ ಮುಚ್ಚುಗಡೆಯಿಂದಾಗಿ ಈ ಮಧ್ಯೆ ವಾರಾಂತ್ಯದಲ್ಲಿ ಭರ್ಜರಿ ವಹಿವಾಟು ನಡೆಸುತ್ತಿದ್ದ ನಗರದ ಡಜನ್‌ಗಟ್ಟಳೆ ಬಿರಿಯಾನಿ ಹೊಟೇಲ್‌ಗಳು ಕೂಡಾ ಬಾಧಿತವಾಗಲಿವೆ.

 ‘‘ನಗರದ ಶೇ.90ರಷ್ಟು ಜನರು ಮಾಂಸಹಾರಿಗಳಾಗಿದ್ದು, ಪ್ರೊಟೀನ್ ಆಹಾರದಿಂದ ಅವರನ್ನು ಯಾಕೆ ವಂಚಿತರನ್ನಾಗಿಸಬೇಕು? ಒಂದು ವೇಳೆ ಮಾಂಸದ ಅಂಗಡಿಗಳಲ್ಲಿ ಜನಸಂದಣಿಯು ಸಮಸ್ಯೆಯಾಗಿದ್ದರೆ ಅದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಅದರ ಹೊರತು ಮಾಂಸದಂಗಡಿಗಳನ್ನು ನಿಷೇಧಿಸುವುದು ಸಮಸ್ಯೆಗೆ ಪರಿಹಾರವಲ್ಲ ಎದಂದು ನಗರದ ಜಿಮ್ ಶಿಕ್ಷಕ ಜಯಪ್ರಕಾಶ್ ಹೇಳುತ್ತಾರೆ.

ಮೀನುಮಾರಾಟದ ಮೇಲಿನ ನಿಷೇಧವೂ ಮೀನುಗಾರರು ಮತ್ತು ಮೀನುವ್ಯಾಪಾರಿಗಳನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಹಲವಾರು ಮಂದಿ ಮೀನುಗಾರರು ಮಾರಾಟವಾಗದೆ ಕೊಳೆತ ಮೀನುಗಳನ್ನು ಕಸದಗುಂಡಿಗೆ ಚೆಲ್ಲುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X