Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ತಂಡ ಸೇರಲು ಮಲಿಕ್‌ಗೆ ವಿಶೇಷ ರಿಯಾಯಿತಿ

ತಂಡ ಸೇರಲು ಮಲಿಕ್‌ಗೆ ವಿಶೇಷ ರಿಯಾಯಿತಿ

ಕುಟುಂಬದಿಂದ ದೂರವಿರುವ ಪಾಕ್‌ನ ಆಲ್‌ರೌಂಡರ್

ವಾರ್ತಾಭಾರತಿವಾರ್ತಾಭಾರತಿ21 Jun 2020 11:17 AM IST
share
ತಂಡ ಸೇರಲು ಮಲಿಕ್‌ಗೆ ವಿಶೇಷ ರಿಯಾಯಿತಿ

ಮುಂಬೈ: ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ)ಆಲ್‌ರೌಂಡರ್ ಶುಐಬ್ ಮಲಿಕ್‌ಗೆ ತಂಡ ಸೇರ್ಪಡೆಯ ವಿಚಾರದಲ್ಲಿ ವಿಶೇಷ ರಿಯಾಯಿತಿ ನೀಡಿದೆ. ಸುಮಾರು 5 ತಿಂಗಳುಗಳಿಂದ ಪತ್ನಿ ಹಾಗೂ ಮಗನಿಂದ ದೂರ ಉಳಿದಿದ್ದ ಮಲಿಕ್‌ಗೆ ತನ್ನ ಕುಟುಂಬದೊಂದಿಗೆ ಸಮಯ ಕಳೆಯಲು ಅನುವು ಮಾಡಿಕೊಡಲಾಗಿದ್ದು, ಜುಲೈ 24ರಂದು ಇಂಗ್ಲೆಂಡ್‌ನಲ್ಲಿ ಪಾಕ್ ಕ್ರಿಕೆಟ್ ತಂಡವನ್ನು ಸೇರಿಕೊಳ್ಳಲು ಅವಕಾಶ ನೀಡಲಾಗಿದೆ.

 ಜಾಗತಿಕ ಮಟ್ಟದಲ್ಲಿ ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಹಾವಳಿ ಹೆಚ್ಚಾಗಿರುವ ಕಾರಣ ಅಂತರ್‌ರಾಷ್ಟ್ರೀಯ ವಿಮಾನ ಪ್ರಯಾಣಕ್ಕೆ ನಿಷೇಧ ಹೇರಿದ ಬಳಿಕ ಮಲಿಕ್ ಅವರ ಪತ್ನಿ, ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಝಾ ಹಾಗೂ ಒಂದು ವರ್ಷದ ಪುತ್ರ ಹೈದರಾಬಾದ್‌ನಲ್ಲಿದ್ದರೆ, ಮಲಿಕ್ ಪಾಕಿಸ್ತಾನದ ಸಿಯಾಲ್‌ಕೋಟ್‌ನಲ್ಲಿದ್ದಾರೆ.

‘‘ಕೋವಿಡ್-19ರಿಂದಾಗಿ ಅಂತರ್‌ರಾಷ್ಟ್ರೀಯ ಪ್ರಯಾಣಕ್ಕೆ ನಿರ್ಬಂಧ ಹೇರಿರುವುದು ಹಾಗೂ ಕೆಲವು ಬದ್ಧತೆಯ ಕಾರಣಕ್ಕೆ ಶುಐಬ್ ಮಲಿಕ್ ಸುಮಾರು ಐದು ತಿಂಗಳುಗಳಿಂದ ತನ್ನ ಕುಟುಂಬದಿಂದ ದೂರ ಉಳಿದಿದ್ದಾರೆ. ಇದೀಗ ಪ್ರಯಾಣದ ಮೇಲಿನ ನಿರ್ಬಂಧ ನಿಧಾನವಾಗಿ ಸಡಿಲಿಸಲಾಗುತ್ತಿದೆ. ಕುಟುಂಬ ಸದಸ್ಯರು ಮತ್ತೆ ಒಂದಾಗುವ ಅವಕಾಶ ಲಭಿಸುತ್ತಿದೆ. ನಮ್ಮ ಕಾಳಜಿಯ ಕರ್ತವ್ಯದ ಭಾಗವಾಗಿ ಮಾನವೀಯ ನೆಲೆಯಲ್ಲಿ ಸಹಾನುಭೂತಿ ತೋರಿಸುವುದು ಸೂಕ್ತವಾಗಿದೆ. ಹೀಗಾಗಿ ನಾವು ಮಲಿಕ್ ಅವರ ಮನವಿಯನ್ನು ಗೌರವಿಸುತ್ತೇವೆ’’ಎಂದು ಪಿಸಿಬಿ ಮುಖ್ಯ ಕಾರ್ಯ ನಿರ್ವಾಹಕ ವಸೀಂ ಖಾನ್ ಹೇಳಿದ್ದಾರೆ.

‘‘ನಾವು ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿಯೊಂದಿಗೆ ಮಾತನಾಡಿದ್ದು, ಅವರು ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡಿದ್ದಾರೆ. ಶುಐಬ್ ಮಲಿಕ್ ಜುಲೈ 24ರಂದು ಇಂಗ್ಲೆಂಡ್ ಪ್ರವೇಶಿಸಲು ನೆರವಾಗುವ ಮೂಲಕ ರಿಯಾಯತಿ ನೀಡಿದ್ದಾರೆ. ಶುಐಬ್ ಪಾಕ್ ತಂಡವನ್ನು ಸೇರಿಕೊಳ್ಳುವ ಮೊದಲು ದೇಶವನ್ನು ಪ್ರವೇಶಿಸುವ ಪ್ರವಾಸಿಗರಿಗೆ ಇಂಗ್ಲೆಂಡ್ ಸರಕಾರ ರೂಪಿಸಿರುವ ನೀತಿಗಳನ್ನು ಮಲಿಕ್ ಪಾಲಿಸಲಿದ್ದಾರೆ’’ಎಂದು ವಸೀಂ ಖಾನ್ ಹೇಳಿದ್ದಾರೆ.

ಪಾಕ್ ತಂಡ ಜೂನ್ 28 ರಂದು ಮ್ಯಾಂಚೆಸ್ಟರ್‌ಗೆ ಪ್ರಯಾಣ ಬೆಳೆಸಲಿದ್ದು, ಡರ್ಬಿಶೈರ್‌ನಲ್ಲಿ 14 ದಿನಗಳ ಕ್ವಾರಂಟೈನ್‌ನಲ್ಲಿ ಇರಲಿದೆ. ಈ ವೇಳೆ ಆಟಗಾರರಿಗೆ ತರಬೇತಿ ಹಾಗೂ ಅಭ್ಯಾಸವನ್ನು ನಡೆಸಲು ಅವಕಾಶ ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X