ಎಸ್.ಡಿ.ಪಿ.ಐ. ತಲಪಾಡಿ ಘಟಕದ ವತಿಯಿಂದ ಸಂಸ್ಥಾಪನಾ ದಿನಾಚರಣೆ
ಹುತಾತ್ಮ ಯೋಧರಿಗೆ ಗೌರವ ಸಮರ್ಪಣೆ
ಬಂಟ್ವಾಳ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ತಲಪಾಡಿ ಘಟಕದ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.
ತಲಪಾಡಿ ಘಟಕದ ಅಧ್ಯಕ್ಷ ಶಾಹುಲ್ ತಲಪಾಡಿ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಎಸ್.ಡಿ.ಪಿ.ಐ ಬಂಟ್ವಾಳ ಪುರಸಭಾ ಅಧ್ಯಕ್ಷ ಮೂನಿಶ್ ಅಲಿ ಪಕ್ಷ ಸಾಗಿ ಬಂದ ಹೋರಾಟದ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಪಾಪ್ಯುಲರ್ ಫ್ರಂಟ್ ಬಿ.ಸಿ.ರೋಡ್ ವಲಯ ಅಧ್ಯಕ್ಷ ಅಕ್ಬರ್ ಅಲಿ ಮಾತನಾಡಿದರು. ಇದೇ ಸಂದರ್ಭ ಭಾರತ ಚೀನಾ ಗಡಿಯಲ್ಲಿ ಹುತಾತ್ಮರಾದ ಯೋಧರ ಆತ್ಮಕ್ಕೆ ಶಾಂತಿ ಕೋರಿ ಮೌನ ಪ್ರಾರ್ಥನೆ ಮತ್ತು ಸಸಿ ವಿತರಣೆ ನಡೆಯಿತು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಹಮೀದ್ ಎಸ್.ಎಚ್, ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಉಪಾಧ್ಯಕ್ಷ ಉಬೈದುಲ್ಲಾ, , ಲತೀಫ್ ಬಿ.ಸಿ, ಇದಿನಬ್ಬ, ಮುಸ್ತಾಕ್, ಹಫೀಝ್, ಅಶ್ರಫ್ ಮತ್ತಿತರರು ಉಪಸ್ಥಿತರಿದ್ದರು. ಅಶ್ಪಾಕ್ ಪೊನ್ನೋಡಿ ನಿರೂಪಿಸಿ, ಸಾದಿಕ್ ವಂದಿಸಿದರು