Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಒಂದೇ ದಿನ 196 ಮಂದಿಗೆ ಕೊರೋನ...

ಬೆಂಗಳೂರು: ಒಂದೇ ದಿನ 196 ಮಂದಿಗೆ ಕೊರೋನ ದೃಢ; ಸೋಂಕಿತರ ಸಂಖ್ಯೆ 1,272ಕ್ಕೆ ಏರಿಕೆ

ವಾರ್ತಾಭಾರತಿವಾರ್ತಾಭಾರತಿ21 Jun 2020 10:00 PM IST
share
ಬೆಂಗಳೂರು: ಒಂದೇ ದಿನ 196 ಮಂದಿಗೆ ಕೊರೋನ ದೃಢ; ಸೋಂಕಿತರ ಸಂಖ್ಯೆ 1,272ಕ್ಕೆ ಏರಿಕೆ

ಬೆಂಗಳೂರು, ಜೂ.21: ನಗರದಲ್ಲಿ ರವಿವಾರವೂ ಕೊರೋನ ಅಟ್ಟಹಾಸ ಮುಂದುವರಿದಿದ್ದು, 42 ಪೊಲೀಸರು ಸೇರಿದಂತೆ ಒಂದೇ ದಿನ 196 ಹೊಸ ಕೊರೋನ ಪ್ರಕರಣ ದೃಢಪಟ್ಟಿವೆ. ಅಲ್ಲದೇ ಮೂರು ಮಂದಿ ಮೃತಪಟ್ಟಿದ್ದಾರೆ.

ಇಲ್ಲಿಯವರೆಗೆ ನಗರದಲ್ಲಿ 1,272 ಕೊರೋನ ಸೋಂಕಿತರು ಪತ್ತೆಯಾಗಿದ್ದಾರೆ. 796 ಜನರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 64 ಜನರು ಸೋಂಕಿಗೆ ಬಲಿಯಾಗಿದ್ದು, ಓರ್ವ ವ್ಯಕ್ತಿ ಅನ್ಯಕಾರಣದಿಂದ ಮೃತರಾಗಿದ್ದಾನೆ.

ಅಲ್ಲದೇ ರವಿವಾರ 17 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 36 ಜನರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 31 ಜ್ವರ ಚಿಕಿತ್ಸಾಲಯದಲ್ಲಿ ಒಟ್ಟು 15,131 ವ್ಯಕ್ತಿಗಳಿಗೆ ಕೊರೋನ ತಪಾಸಣೆ ಮಾಡಲಾಗಿದೆ. ರವಿವಾರ ಒಂದೇ ದಿನ 196 ಪ್ರಕರಣ ದಾಖಲಾಗಿದ್ದು, ಇದರಲ್ಲಿ 42 ಪೊಲೀಸರೂ ಸೇರಿದ್ದಾರೆ.

ಮೂವರು ಮೃತ

ರೋಗಿ ನಂ. 6,553 ಬೆಂಗಳೂರು ಮೂಲದ 53 ವರ್ಷದ ಮಹಿಳೆ. ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜೂ.10ರಂದು ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಜೂ.20ರಂದು ನಿಧನರಾಗಿದ್ದಾರೆ.

ರೋಗಿ ನಂ.8,872, ಬೆಂಗಳೂರು ಮೂಲದ 62 ವರ್ಷದ ಪುರುಷ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜೂ.16ರಂದು ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಅಂದೇ ನಿಧನರಾಗಿದ್ದಾರೆ.

ರೋಗಿ ನಂ. 8,880 ಬೆಂಗಳೂರು ಮೂಲದ ವ್ಯಕ್ತಿ ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಜೂನ್ 18ರಂದು ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಜೂ.20ರಂದು ನಿಧನರಾಗಿದ್ದಾರೆ.

ಹಜ್ ಭವನ ತಾತ್ಕಾಲಿಕ ಕೊರೋನ ಆಸ್ಪತ್ರೆ

ನಗರದಲ್ಲಿ ಕೊರೋನ ಸಂಖ್ಯೆ ದಿನದಿಂದ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಜ್ ಭವನವನ್ನು ಕೊರೋನ ಸೋಂಕು ಚಿಕಿತ್ಸಾ ಕೇಂದ್ರವಾಗಿ ಬದಲಾಯಿಸಲಾಗಿದೆ. ಹಜ್ ಭವನದಲ್ಲಿ 500 ಜನರಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಇಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡವರಿಗೆ ಚಿಕಿತ್ಸೆ ನೀಡಲು ಪಾಲಿಕೆ ಮುಂದಾಗಿದೆ.

ಚಿಕ್ಕಪೇಟೆ ಒಂದು ವಾರ ಕಾಲ ಸ್ವಯಂ ಬಂದ್

ನಗರದ ಚಿಕ್ಕಪೇಟೆ ವ್ಯಾಪ್ತಿಯಲ್ಲಿ ಕೊರೋನ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿರುವ ಹಿನ್ನೆಲೆ ಅಲ್ಲಿನ ವ್ಯಾಪಾರಿ ಸಂಘಟನೆಗಳು ಒಂದು ವಾರ ಸ್ವಯಂ ಬಂದ್ ಮಾಡಲು ನಿರ್ಧರಿಸಿವೆ. ಈಗಾಗಲೇ ಚಿಕ್ಕಪೇಟೆಯ ವ್ಯಾಪ್ತಿಯಲ್ಲಿ 25 ಮಂದಿಗೆ ಕೊರೋನ ಸೋಂಕು ತಗುಲಿದೆ. ಅಲ್ಲದೇ ಇನ್ನೂ ಸೋಂಕಿತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿರುವ ಹಿನ್ನೆಲೆ ಚಿಕ್ಕಪೇಟೆಯಲ್ಲಿನ ಸುಮಾರು 8 ರಿಂದ 10 ವ್ಯಾಪಾರಿ ಸಂಘಗಳು ಅಂಗಡಿಗಳನ್ನು ಬಂದ್ ಮಾಡಲು ನಿರ್ಧರಿಸಿದ್ದು, ಚಿಕ್ಕಪೇಟೆ ಮಾರುಕಟ್ಟೆ ಜೂ.22ರಿಂದ ಜೂ.28ರವರೆಗೆ ಬಂದ್ ಮಾಡಲಾಗಿದೆ.

ಕಲಾಸಿಪಾಳ್ಯ ಠಾಣೆಯ 23 ಪೊಲೀಸರಿಗೆ ಕೊರೋನ

ನಗರದ ಕಲಾಸಿಪಾಳ್ಯ ಪೊಲೀಸ್ ಠಾಣೆಯ ಒಟ್ಟು 23 ಸಿಬ್ಬಂದಿಗೆ ಕೊರೋನ ಸೋಂಕು ಕಂಡುಬಂದಿದೆ. ಮೊದಲು ಎಂಟು ಮಂದಿ ಪೊಲೀಸರಿಗೆ ಕೊರೋನ ಸೋಂಕು ಕಾಣಿಸಿಕೊಂಡಿತ್ತು. ಆನಂತರ ಠಾಣೆಯ ಇತರೆ ಸಿಬ್ಬಂದಿಗೆ ಗಂಟಲು ದ್ರವ ಪರೀಕ್ಷೆ ಮಾಡಿಸಿದಾಗ ಇನ್ನೂ 15 ಮಂದಿಗೆ ಸೋಂಕು ಇರುವುದು ಕಂಡುಬಂದಿದೆ ಎಂದು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ತಿಳಿಸಿದ್ದಾರೆ.

ಸಂಚಾರಿ ವಿಭಾಗದ 18 ಪೊಲೀಸರಿಗೆ ಕೊರೋನ

ಬೆಂಗಳೂರು ನಗರ ಸಂಚಾರಿ ವಿಭಾಗದಲ್ಲಿ ಕೆಲಸ ಮಾಡುವ 18 ಮಂದಿ ಪೊಲೀಸರಿಗೆ ಕೊರೋನ ತಗುಲಿದೆ. ನಗರ ಸಂಚಾರಿ ಪೊಲೀಸ್ ವಿಭಾಗದಲ್ಲಿ ಈವರೆಗೂ ಇಬ್ಬರು ಎಎಸೈ ಗಳು ಸಾವನ್ನಪ್ಪಿದ್ದಾರೆ. ಒಬ್ಬರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಉಳಿದ 15 ಮಂದಿ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಂಟಿ ಪೊಲೀಸ್ ಆಯುಕ್ತ(ಸಂಚಾರಿ) ರವಿಕಾಂತೇಗೌಡ ತಿಳಿಸಿದ್ದಾರೆ.

ಮೂರು ಕೊರೋನ ಸೆಂಟರ್ ಸ್ಥಾಪನೆ

ನಗರದಲ್ಲಿ ಕೊರೋನ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿರುವ ಹಿನ್ನೆಲೆ ನಗರದಲ್ಲಿರುವ ಒಳಾಂಗಣ ಕ್ರೀಡಾಂಗಣಗಳನ್ನು ಕೊರೋನ ಸೆಂಟರ್ ಗಳನ್ನಾಗಿ ಮಾಡಲು ಸರಕಾರ ನಿರ್ಧರಿಸಿದೆ. ನಗರದ ರವಿಶಂಕರ್ ಆಶ್ರಮ, ಕಂಠೀರವ ಒಳಾಂಗಣ ಕ್ರೀಡಾಂಗಣ ಹಾಗೂ ಕೋರಮಂಗಲ ಒಳಾಂಗಣ ಕ್ರೀಡಾಂಗಣಗಳನ್ನು ರೋಗ ಲಕ್ಷಣವಿಲ್ಲದ ಕೊರೋನ ಸೋಂಕಿತರ ಚಿಕಿತ್ಸಾ ಕೇಂದ್ರಗಳಾಗಿ ಕಾರ್ಯ ನಿರ್ವಹಿಸಲಿವೆ.

ಕಂಟೈನ್ಮೆಂಟ್ ಝೋನ್ ಏರಿಕೆ

ಬೊಮ್ಮನಹಳ್ಳಿ ವಲಯ- 8, ದಾಸರಹಳ್ಳಿ ವಲಯ- 9, ಬೆಂಗಳೂರು ಪೂರ್ವ ವಲಯ- 45, ಮಹದೇವಪುರ ವಲಯ- 31, ರಾಜರಾಜೇಶ್ವರಿ ನಗರ- 12, ಬೆಂಗಳೂರು ದಕ್ಷಿಣ ವಲಯ- 81, ಬೆಂಗಳೂರು ಪಶ್ಚಿಮ ವಲಯ- 38 ಯಲಹಂಕ ವಲಯ- 17 ಕಂಟೈನ್ಮೆಂಟ್ ಝೋನ್ ಗಳನ್ನಾಗಿ ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X