Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೇನೆಯ ರಕ್ಷಣಾ ಉಪಕರಣಗಳಿಗೆ ‘ಮೇಡ್ ಇನ್...

ಸೇನೆಯ ರಕ್ಷಣಾ ಉಪಕರಣಗಳಿಗೆ ‘ಮೇಡ್ ಇನ್ ಚೈನಾ’ ನಂಟು!

ಆಮದುಗಳ ಪುನರ್ ಪರಿಶೀಲನೆಗೆ ನೀತಿ ಆಯೋಗದ ಸದಸ್ಯರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ21 Jun 2020 10:14 PM IST
share
ಸೇನೆಯ ರಕ್ಷಣಾ ಉಪಕರಣಗಳಿಗೆ ‘ಮೇಡ್ ಇನ್ ಚೈನಾ’ ನಂಟು!

ಹೊಸದಿಲ್ಲಿ,ಜೂ.21: ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಹಿಂಸಾತ್ಮಕ ಘರ್ಷಣೆಗಳು ನಡೆದ ಎರಡು ದಿನಗಳ ಬಳಿಕ, ಅಂದರೆ ಜೂ.18ರಂದು ರಕ್ಷಣಾ ಸಚಿವಾಲಯವು ಲೇಹ್ ಸೇರಿದಂತೆ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿತ ಸೇನಾ ಸಿಬ್ಬಂದಿಗಳಿಗಾಗಿ ಅಂದಾಜು ಎರಡು ಲಕ್ಷ ರಕ್ಷಣಾ ಉಪಕರಣಗಳು ಮತ್ತು ಗುಂಡು ನಿರೋಧಕ ಜಾಕೆಟ್‌ಗಳ ಪೂರೈಕೆಗಾಗಿ ಅವುಗಳ ತಯಾರಕರನ್ನು ಸಂಪರ್ಕಿಸಿದೆ.

ಇದರಲ್ಲಿ ತಪ್ಪೇನೂ ಇಲ್ಲ. ಆದರೆ ಸದ್ಯದ ಮೂಲ ಉಪಕರಣ ತಯಾರಕರ (ಒಇಎಂ) ಪೈಕಿ ಹೆಚ್ಚಿನವರು ತಮ್ಮ ಉತ್ಪನ್ನಗಳ ತಯಾರಿಕೆಗೆ ಚೀನಿ ಕಚ್ಚಾ ಸಾಮಗ್ರಿಗಳನ್ನು ಬಳಸುತ್ತಿದ್ದಾರೆ ಎನ್ನುವುದು ಇದಕ್ಕೆ ಹೊಸ ತಿರುವನ್ನು ನೀಡಿದೆ.

ಇದರಲ್ಲಿ 2017ರಲ್ಲಿ ಗುತ್ತಿಗೆಯನ್ನು ಪಡೆದಿದ್ದ ಕಂಪನಿಯೂ ಸೇರಿದ್ದು ಅದೀಗ 1.86 ಲ.ಗುಂಡು ನಿರೋಧಕ ಜಾಕೆಟ್‌ಗಳನ್ನು ಪೂರೈಸುವ ಹಂತದಲ್ಲಿದೆ. ಅಂದು ಎಸ್‌ಎಂಪಿಪಿ ಲಿ.ಗೆ 639 ಕೋ.ರೂ.ಗಳ ಗುತ್ತಿಗೆಯನ್ನು ಪ್ರಕಟಿಸಿದ್ದ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಸೇನೆಗಾಗಿ ರಕ್ಷಣಾ ಜಾಕೆಟ್‌ಗಳನ್ನು ತಯಾರಿಸಲು ಚೀನಾದಿಂದ ಕಚ್ಚಾ ಸಾಮಗ್ರಿಗಳನ್ನು ಆಮದು ಮಾಡಿಕೊಳ್ಳಲು ಯಾವುದೇ ನಿರ್ಬಂಧವನ್ನು ವಿಧಿಸಲಾಗಿಲ್ಲ ಎಂದು ಸಂಸತ್ತಿನಲ್ಲಿ ಹೇಳಿದ್ದರು. ಆದರೆ ಈಗ ಬದಲಾಗಿರುವ ಪರಿಸ್ಥಿತಿಗಳಲ್ಲಿ ಈ ಬಗ್ಗೆ ಪುನರ್‌ಪರಿಶೀಲಿಸಬೇಕೆಂಬ ಕರೆಗಳು ಕೇಳಿಬರುತ್ತಿವೆ.

ನೀತಿ ಆಯೋಗದ ಸದಸ್ಯ ಹಾಗೂ ಡಿಆರ್‌ಡಿಒದ ಮಾಜಿ ಮುಖ್ಯಸ್ಥ ವಿ.ಕೆ.ಸಾರಸ್ವತ ಅವರು, ಈ ಆಮದುಗಳ ಬಗ್ಗೆ ಪುನರ್‌ಪರಿಶೀಲನೆಗೆ ಆಗ್ರಹಿಸಿದ್ದಾರೆ. ‘ದೂರಸಂಪರ್ಕ ಮತ್ತು ನಮ್ಮ ಯೋಧರು ಧರಿಸುವ ಗುಂಡು ನಿರೋಧಕ ಜಾಕೆಟ್‌ಗಳು ಸೇರಿದಂತೆ ರಕ್ಷಣಾ ಉಪಕರಣಗಳಂತಹ ವ್ಯೂಹಾತ್ಮಕ ಕ್ಷೇತ್ರಗಳಲ್ಲಿ ಚೀನಿ ಕಚ್ಚಾ ಸಾಮಗ್ರಿಗಳ ಆಮದಿಗೆ ನಾವು ಉತ್ತೇಜನವನ್ನು ನೀಡಬಾರದು ’ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X