Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು: ಸೂರ್ಯಗ್ರಹಣ ವೇಳೆ ಉಪಹಾರ...

ಮೈಸೂರು: ಸೂರ್ಯಗ್ರಹಣ ವೇಳೆ ಉಪಹಾರ ಸೇವಿಸಿದ ಸಾಹಿತಿಗಳು, ಪ್ರಗತಿಪರರು

ವಾರ್ತಾಭಾರತಿವಾರ್ತಾಭಾರತಿ21 Jun 2020 11:06 PM IST
share
ಮೈಸೂರು: ಸೂರ್ಯಗ್ರಹಣ ವೇಳೆ ಉಪಹಾರ ಸೇವಿಸಿದ ಸಾಹಿತಿಗಳು, ಪ್ರಗತಿಪರರು

ಮೈಸೂರು,ಜೂ.21: ಪ್ರತಿಯೊಂದಕ್ಕೂ ಒಂದು ಮಿತಿಯುಂಟು. ಹಾಗೆಯೇ ನಂಬಿಕೆಗೂ ಒಂದು ಇತಿಮಿತಿ ಇದೆ. ನಂಬಿಕೆ ಇರಬೇಕು ನಿಜ ಆದರೆ ಮೂಢನಂಬಿಕೆ ಖಂಡಿತ ಬೇಡ ಎಂದು ಸಾಹಿತಿ ಬನ್ನೂರು ಕೆ. ರಾಜು ಹೇಳಿದರು.

ಸಾರ್ವಜನಿಕರಲ್ಲಿ ವೈಚಾರಿಕ ಮತ್ತು ವೈಜ್ಞಾನಿಕ ಪ್ರಜ್ಞೆ ಮೂಡಿಸಲು ಸೂರ್ಯಗ್ರಹಣ ದಂದು ನಗರದ ಕೃಷ್ಣಮೂರ್ತಿಪುರಂನ ಅಂಬೇಡ್ಕರ್ ಮುಖ್ಯರಸ್ತೆಯಲ್ಲಿರುವ ಚೈತ್ರ ಮಿಲ್ಕ್ ಸೆಂಟರ್ ನಲ್ಲಿ ರವಿವಾರ ಗ್ರಹಣ ಪ್ರಕೃತಿ ವಿಸ್ಮಯ, ಭಯ ಬೇಡ ಎಂಬ ಹೆಸರಿನಲ್ಲಿ ಏರ್ಪಡಿಸಿದ್ದ ಮೌಡ್ಯ ವಿರೋಧಿ ಕಾರ್ಯಕ್ರಮವನ್ನು ಬುದ್ಧ, ಬಸವ, ಅಂಬೇಡ್ಕರ್, ಪೆರಿಯಾರ್, ಮುಂತಾದವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ನಮಿಸುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಹಣ ಕಾಲದಲ್ಲಿ ಮನೆಯಿಂದ ಹೊರ ಬರಬಾರದು, ತಿಂಡಿ ತಿನಿಸು ಊಟ ಏನನ್ನೂ ಸೇವಿಸಬಾರದು ಎಂಬಂತಹ ಮೂಢನಂಬಿಕೆಗಳನ್ನು ಬಿತ್ತಿ ಬೆಳೆಯುತ್ತಿರುವ ನಮ್ಮ ಸಮಾಜದಲ್ಲಿ ಇಂತಹ ಮೌಢ್ಯತೆಯ ಮಾರಿಯನ್ನು ಹೋಗಲಾಡಿಸಬೇಕೆಂದರೆ ಪ್ರತಿಯೊಬ್ಬರೂ ವೈಚಾರಿಕ ಮತ್ತು ವೈಜ್ಞಾನಿಕ ಪ್ರಜ್ಞೆಯನ್ನು ಬೆಳಸಿಕೊಂಡು ವಿಚಾರವಂತ ರಾಗಬೇಕು. ಸೂರ್ಯಗ್ರಹಣವೇ ಆಗಲಿ ಚಂದ್ರಗ್ರಹಣವೇ ಆಗಲಿ ಅದು ಪ್ರಕೃತಿ ನಿಯಮಾನುಸಾರ ಸಂಭವಿಸುವ ಒಂದು ಸಹಜ ಪ್ರಕ್ರಿಯೆ. ಕೆಲವು ಡೋಂಗಿ ಜ್ಯೋತಿಷಿಗಳು ಹೇಳುವಂತೆ ಇದರಿಂದ ನಾಗರೀಕ ಸಮಾಜದ ಮೇಲೆ ಯಾವುದೇ ದುಷ್ಪರಿಣಾಮವಾಗದೆಂದ ಅವರು, ವಿದ್ಯಾವಂತರು, ಅವಿದ್ಯಾವಂತರೆನ್ನದೆ ಪ್ರತಿಯೊಬ್ಬರೂ ಇದರ ಅರಿವನ್ನು ಮೂಡಿಸುವ ಕೆಲಸ ಮಾಡಬೇಕು ಎಂದರು.

ಖ್ಯಾತ ಸಾಹಿತಿ ಇತಿಹಾಸ ತಜ್ಞ ಪ್ರೊ.ಪಿ. ವಿ. ನಂಜರಾಜ ಅರಸ್ ಅವರು ಮಾತನಾಡಿ ಇವತ್ತು ದಿನದ 24 ಗಂಟೆಯೂ ಟಿವಿ ಚಾನಲ್ ಗಳು ಜ್ಯೋತಿಷಿಗಳನ್ನು ಕೂರಿಸಿಕೊಂಡು ಮೌಡ್ಯದ ಮೂಲಕ ಜನರನ್ನು ಎದರಿಸುವ, ಬೆದರಿಸುವ ಕೆಲಸ ಮಾಡುತ್ತಿವೆ. ಇಂತಹದನ್ನು ನಂಬದೆ ಜನರು ಪ್ರಜ್ಞಾವಂತರಾಗಬೇಕೆಂದು ಹೇಳಿದ ಅವರು, ಅಮಾವಾಸ್ಯೆ ಗ್ರಹಣ ಕಾಲದಲ್ಲಿ ಮನೆಯಲ್ಲಿ ಮಾತ್ರವಲ್ಲ ಸ್ಮಶಾನದಲ್ಲಿ ಊಟ ಮಾಡಿದರೂ ಏನೂ  ಆಗುವುದಿಲ್ಲ ಎಂದು ಹೇಳಿದರು. ಅಲ್ಲದೇ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಾರ್ವಜನಿಕರೊಡಗೂಡಿ ಅವರು ಉಪಹಾರ ಸೇವಿಸಿ ಕಾರ್ಯಕ್ರಮವನ್ನು ಆಯೋಜಿಸಿದ್ದ ವಿಚಾರವಾದಿ ಚೈತ್ರ ಮಿಲ್ಕ್ ಸೆಂಟರ್ ನ ಪದ್ಮರಾಜ್ ಅವರ ಸೇವೆಯನ್ನು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಲೇಖಕರಾದ ಸಿದ್ಧ ಸ್ವಾಮಿ, ಗೋವಿಂದರಾಜು, ಮಾಜಿ ಮಹಾಪೌರ ಪುರುಷೋತ್ತಮ್, ಮಹಾನಗರ ಪಾಲಿಕೆ ಸದಸ್ಯರಾದ ಪಲ್ಲವಿ ಬೇಗಂ, ಶಾರದಮ್ಮ, ಕೆ ಆರ್ ಬ್ಯಾಂಕ್ ಮಾಜಿ ಅಧ್ಯಕ್ಷ ವಾಸು, ಕನ್ನಡಪರ ಹೋರಾಟಗಾರ ದೇಶಳ್ಳಿ ರಾಮಚಂದ್ರಾಚಾರ್, ಕಾರ್ಯಕ್ರಮದ ಆಯೋಜಕ ಚೈತ್ರ ಮಿಲ್ಕ್ ಸೆಂಟರ್ ನ ಪದ್ಮರಾಜ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X