Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೆಡ್‌ ಕಾನ್ಸ್‌ಟೇಬಲ್ ಹತ್ಯೆ: ಪ್ರಕರಣದ...

ಹೆಡ್‌ ಕಾನ್ಸ್‌ಟೇಬಲ್ ಹತ್ಯೆ: ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಯೋಗೇಂದ್ರ ಯಾದವ್ ಹೆಸರು

ಈಶಾನ್ಯ ದಿಲ್ಲಿ ಗಲಭೆ

ವಾರ್ತಾಭಾರತಿವಾರ್ತಾಭಾರತಿ21 Jun 2020 11:28 PM IST
share
ಹೆಡ್‌ ಕಾನ್ಸ್‌ಟೇಬಲ್ ಹತ್ಯೆ: ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಯೋಗೇಂದ್ರ ಯಾದವ್ ಹೆಸರು

  ಹೊಸದಿಲ್ಲಿ,ಜೂ.21: ಫೆಬ್ರವರಿಯಲ್ಲಿ ಈಶಾನ್ಯ ದಿಲ್ಲಿಯಲ್ಲಿ ಭುಗಿಲೆದ್ದ ಗಲಭೆಯ ಸಂದರ್ಭ ನಡೆದ ಪೊಲೀಸ್ ಹೆಡ್‌ಕಾನ್ಸ್‌ಟೇಬಲ್ ರತನ್‌ಲಾಲ್ ಅವರ ಕೊಲೆ ಪ್ರಕರಣದ ದೋಷಾರೋಪಪಟ್ಟಿಯಲ್ಲಿ ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷ ಯೋಗೇಂದ್ರ ಯಾದವ್ ಅವರನ್ನು ಹೆಸರಿಸಲಾಗಿದೆ. ಯಾದವ್ ಜೊತೆ ವಿದ್ಯಾರ್ಥಿ ನಾಯಕಿ ಕವಲ್‌ಪ್ರೀತ್ ಕೌರ್ ಹಾಗೂ ನ್ಯಾಯವಾದಿ ಡಿ.ಎಸ್.ಬಿಂದ್ರಾ ಅವರನ್ನು ಕೂಡಾ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

  ಆದರೆ ಈ ಮೂವರನ್ನು, ಪ್ರಕರಣದ 17 ಮಂದಿ ಆರೋಪಿಗಳ ಪಟ್ಟಿಯಲ್ಲಿ ಹೆಸರಿಸಲಾಗಿಲ್ಲ. ‘‘ ಚಾಂದ್ ಭಾಗ್ ಪ್ರತಿಭಟನೆಯ ಸಂಘಟಕರಿಗೆ ಡಿ.ಎಸ್. ಬಿಂದ್ರಾ (ಎಐಎಂಐಎಂ), ಕವಲ್‌ ಪ್ರೀತ್‌ ಕೌರ್ (ಏಐಎಸ್‌ಎ), ದೇವಾಂಗನಾ ಕಲಿಟಾ (ಪಿಂಜಿರಾ ತೋಡ್), ಯೋಗೇಂದ್ರ ಯಾದವ್ ಮತ್ತಿತರರ ಜೊತೆ ನಂಟು ಇರುವುದು, ಹಿಂಸಾಚಾರದ ಹಿಂದೆ ಗುಪ್ತ ಕಾರ್ಯಸೂಚಿ ಇರುವುದನ್ನು ಸೂಚಿಸಿದೆ ’’ ಎಂದು ದೋಷಾರೋಪಪಟ್ಟಿಯಲ್ಲಿ ಹೇಳಲಾಗಿದೆಯೆಂದು ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆ ವರದಿ ಮಾಡಿದೆ.

  ಈಶಾನ್ಯ ದಿಲ್ಲಿಯಲ್ಲಿ ಫೆಬ್ರವರಿ 24ರಂದು ಗಲಭೆ ಭುಗಿಲೆದ್ದಿತ್ತು. ಹಿಂಸಾಚಾರದಲ್ಲಿ ದಿಲ್ಲಿ ಪೊಲೀಸ್ ಪಡೆಯ ಹೆಡ್‌ಕಾನ್ಸ್‌ಟೇಬಲ್ ರತನ್ ಲಾಲ್ ಸೇರಿದಂತೆ 53 ಮಂದಿ ಪ್ರಾಣ ಕಳೆದುಕೊಂಡಿದ್ದರು.

   ಚಾಂದ್‌ ಬಾಗ್‌ ನಲ್ಲಿ ಸಿಎಎ ವಿರುದ್ಧ ಕಳೆದ ಜನವರಿಯಿಂದ ಪ್ರತಿಭಟನೆ ನಡೆಯುತ್ತಿದ್ದ ಸ್ಥಳದ ಆಸುಪಾಸಿನಲ್ಲಿ ಎಸಿಪಿ ಗೋಕಲ್‌ಪುರಿ ಹಾಗೂ ಡಿಸಿಪಿ ಶಾರದಾ ಮತ್ತಿತರ ಪೊಲೀಸ್ ಅಧಿಕಾರಿಗಳ ಜೊತೆ ರತನ್‌ಲಾಲ್ ಹಾಜರಿದ್ದರು. ಈ ಸಂದರ್ಭದಲ್ಲಿ ಗುಂಪೊಂದು ದಾಳಿ ನಡೆಸಿದಾಗ, ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ರತನ್‌ಲಾಲ್‌ಗೆ ವಝೀರ್‌ಬಾದ್ ರಸ್ತೆಯಲ್ಲಿನ 5 ಅಡಿ ಎತ್ತರದ ಡಿವೈಡರ್‌ನಿಂದ ಜಿಗಿಯಲು ಸಾಧ್ಯವಾಗದೆ, ಕುಸಿದಾಗ ದುಷ್ಕರ್ಮಿಗಳ ಆತನಿಗೆ ಗುಂಡೆಸೆದಿದ್ದಾರೆ ಹಾಗೂ ಕಲ್ಲುಗಳಿಗೆ ಹೊಡೆದು ಕೊಲೆಗೈದಿದ್ದಾರೆ ಎಂದು ಚಾರ್ಜ್‌ಶೀಟ್ ಆಪಾದಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X