Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಿರಿಯಡ್ಕ: ಭತ್ತದ ಚಾಪೆ ನೇಜಿ ತಾಕಿಗೆ...

ಹಿರಿಯಡ್ಕ: ಭತ್ತದ ಚಾಪೆ ನೇಜಿ ತಾಕಿಗೆ ಕೃಷಿ ವಿಜ್ಞಾನಿಗಳ ಭೇಟಿ

ವಾರ್ತಾಭಾರತಿವಾರ್ತಾಭಾರತಿ22 Jun 2020 6:15 PM IST
share
ಹಿರಿಯಡ್ಕ: ಭತ್ತದ ಚಾಪೆ ನೇಜಿ ತಾಕಿಗೆ ಕೃಷಿ ವಿಜ್ಞಾನಿಗಳ ಭೇಟಿ

ಉಡುಪಿ, ಜೂ.22: ಭತ್ತದ ಚಾಪೆ ನೇಜಿ ತಾಕಿಗೆ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳ ತಂಡವು ಹಿರಿಯಡ್ಕದ ಬೊಮ್ಮರಬೆಟ್ಟು ವಿನಲ್ಲಿರುವ ಸುರೇಶ್ ನಾಯಕ್ ಇವರ ತಾಕಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಪ್ರಗತಿಪರ ಕೃಷಿಕರಾಗಿರುವ ಸುರೇಶ್ ನಾಯಕ್ ಕಳೆದ 13 ವಷರ್ಗಳಿಂದ ಕೃಷಿ ವಿಜ್ಞಾನ ಕೇಂದ್ರದ ನಿಕಟ ಸಂಪರ್ಕ ಹೊಂದಿದ್ದು, ಪ್ರಸ್ತುತ ವಷರ್ದಲ್ಲಿ ಸುಮಾರು 1000 ಎಕರೆ ಪ್ರದೇಶಕ್ಕೆ ಬೇಕಾಗುವ ಚಾಪೆ ನೇಜಿಯನ್ನು ತಯಾರಿಸಿ ರೈತರ ಬೇಡಿಕೆ ಆಧಾರದ ಮೇಲೆ ಸರಬರಾಜು ಮಾಡುತ್ತಿದ್ದಾರೆ.

ಆರಂಭದಲ್ಲಿ ಸುರೇಶ್ ನಾಯಕ್ ಅವರು ಕೃಷಿಯಲ್ಲಿ ನಾಟಿ ಯಂತ್ರದ ಬಳಕೆ ಹಾಗೂ ಚಾಪೆ ನೇಜಿಯ ಬಗ್ಗೆ ತದ್ವಿರುದ್ಧವಾದ ಅಭಿಪ್ರಾಯವನ್ನು ಹೊಂದಿದ್ದು, ಈ ನೇಜಿಯನ್ನು ಜಿಲ್ಲೆಯ ರೈತರು ಮಾಡಲು ಸಾಧ್ಯವೇ ಇಲ್ಲ, ಇವು ನಮ್ಮ ಪ್ರದೇಶದ ಗದ್ದೆಗಳಿಗೆ ಹೊಂದಿಕೆಯಾಗುವುದಿಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು.

ತದ್ವಿರುದ್ಧವಾದ ಅಭಿಪ್ರಾಯವನ್ನುಹೊಂದಿದ್ದು, ಈ ನೇಜಿಯನ್ನು ಜಿಲ್ಲೆಯ ರೈತರು ಮಾಡಲು ಸ್ಯಾಧ್ಯವೇ ಇಲ್ಲ, ಇವು ನಮ್ಮ ಪ್ರದೇಶದ ಗದ್ದೆಗಳಿಗೆ ಹೊಂದಿಕೆಯಾಗುವುದಿಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಆದರೆ ಬಿದ್ಕಲ್‌ಕಟ್ಟೆ ಸಮೀಪದ ಗಾವಳಿ ಗ್ರಾಮದ ಪಾಂಡುರಂಗ ಕಿಣಿ ಅವರು 2007ರಲ್ಲಿ ಇವುಗಳನ್ನು ಪ್ರಾರಂಭಿಸಿದಾಗ ಅದರ ಯಶಸ್ಸನ್ನು ಸ್ವತಹ ಕಂಡ ಸುರೇಶ್ ನಾಯಕ್, ಯಂತ್ರ ನಾಟಿ ಹಾಗೂ ಚಾಪೆ ನೇಜಿ ತಯಾರಿಸಲು ಮುಂದಾದರು. ಇದಕ್ಕಾಗಿ ಅವರು ಬ್ರಹ್ಮಾವರ ಕೆ.ವಿ.ಕೆಯ ವಿಜ್ಞಾನಿಗಳ ನೆರವನ್ನು ಪಡೆದಿದ್ದರು.

ಇದರಿಂದ ಸುರೇಶ್ ನಾಯಕ್ ಪ್ರಸ್ತುತ ವರ್ಷದಲ್ಲಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಯಂತ್ರದಿಂದ ನಾಟಿ ಮಾಡಲು ಮುಂದಾಗಿದ್ದಾರೆ. ಇವರು ಸುಮಾರು 2.2 ಎಕರೆ ಖಾಲಿ ಜಾಗದಲ್ಲಿ ಟ್ರೇ ವಿಧಾನದಲ್ಲಿ ಚಾಪೆ ನೇಜಿ ತಯಾರಿಸಿದ್ದಾರೆ ಮತ್ತು ರೈತರಿಗೆ ನಾಟಿಯನ್ನು ಬಾಡಿಗೆ ಆಧಾರದಲ್ಲಿ ಮಾಡಿಕೊಡುತ್ತಿದ್ದಾರೆ.

2001ರಲ್ಲಿ ನಾಟಿ ಯಂತ್ರ, ಕಟಾವು ಯಂತ್ರಗಳನ್ನು ಬೇರೆ ರಾಜ್ಯಗಳಿಂದ ತರಿಸುತಿದ್ದ ನಾಯಕ್, ಇಂದು ಉಡುಪಿ ಜಿಲ್ಲೆಯ ರೈತರಿಗೆ ಭತ್ತ ನಾಟಿಯಿಂದ ಹಿಡಿದು ಕಟಾವಿನವರೆಗೆ ಬೇಕಾದ ಎಲ್ಲಾ ಯಂತ್ರೋಪಕರಣಗಳನ್ನು ನೀಡಲು ಮುಂದಾಗಿದ್ದಾರೆ. ಇವರ ಈ ಉದ್ಯಮಶೀಲತೆ ಇತರೆ ಯುವಕರಿಗೆ ಮತ್ತು ರೈತರಿಗೆ ಮಾದರಿಯಾಗಿದೆ ಎಂದು ಕೃಷಿ ವಿಜ್ಞಾನಿಗಳು ಅಭಿಪ್ರಾಯ ಪಟ್ಟಿದ್ದಾರೆ.

ಪ್ರಸ್ತುತ ಇವರು ಹಿರಿಯಡ್ಕದ ಬಳಿ ಇರುವ ಬೊಮ್ಮರಬೆಟ್ಟು ಪ್ರದೇಶದಲ್ಲಿ ಪ್ರತಿ ಚಾಪೆ ನೇಜಿ ಮ್ಯಾಟ್‌ಗೆ 40ರೂ.ನಂತೆ ಮುಂಗಡ ನೊಂದಣಿ ಆಧಾರದ ಮೇಲೆ ಮಾರಾಟ ಮಾಡುತ್ತಿದ್ದಾರೆ. ಯಂತ್ರ ನಾಟಿ ಚಾಪೆ ನೇಜಿಯು ಸೇರಿ ಪ್ರತಿ ಎಕರೆಗೆ 6,000ರೂ. ಇದರಲ್ಲಿ ನೇಜಿ ಸಾಗಾಟ ವೆಚ್ಚವನ್ನು ಆಯಾ ರೈತರೇ ಭರಿಸಬೇಕಾಗುತ್ತದೆ ಎಂದು ಕ್ಷೇತ್ರ ಭೇಟಿಯ ಸಂದಭದರ್ಲ್ಲಿ ಸುರೇಶ್ ನಾಯಕ್ ತಿಳಿಸಿದರು.

ಸುರೇಶ್ ನಾಯಕ್, ರಾಜ್ಯ ಕೃಷಿ ಮತ್ತು ತೋಟಗಾರಿಕೆ ವಿಶ್ವದ್ಯಾನಿಲಯದ ಉಪಕುಲಪತಿ ಡಾ. ಮಂಜುನಾಥ್ ನಾಯಕ್ ಮತ್ತು ವಿಸ್ತರಣಾಧಿಕಾರಿ ಡಾ. ಶಶಿಧರ್ ಇವರ ನಿಕಟ ಸಂಪರ್ಕದಲ್ಲಿದ್ದು, ಅವರಿಂದಲೂ ಯಾಂತ್ರಿಕೃತ ಭತ್ತದ ಬೇಸಾಯದ ಬ್ಗೆ ಹೆಚ್ಚಿನ ಮಾಹಿತಿ ಪಡೆಯುತ್ತಿದ್ದಾರೆ.

ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಮುಖ್ಯಸ್ಥ ಡಾ. ಬಿ. ಧನಂಜಯ, ತೋಟಗಾರಿಕಾ ವಿಜ್ಞಾನಿ ಎಚ್.ಎಸ್. ಚೈತನ್ಯ, ಬೇಸಾಯ ಶಾಸ್ತ್ರ ತಜ್ಞರಾದ ಡಾ.ಎನ್.ಇ ನವೀನ್ ಇವರು ಚಾಪೆ ನೇಜಿ ಕ್ಷೇತ್ರಕ್ಕೆ ಭೇಟಿ ನೀಡಿದವರಲ್ಲಿ ಸೇರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X