Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ.ಜಿಲ್ಲೆ: ಕೃಷಿ ಇಲಾಖೆಯಿಂದ...

ದ.ಕ.ಜಿಲ್ಲೆ: ಕೃಷಿ ಇಲಾಖೆಯಿಂದ ಪಾಳುಬಿದ್ದ ಗದ್ದೆಗಳಲ್ಲಿ ಭತ್ತ ಅಭಿಯಾನ

1 ಸಾವಿರ ಎಕರೆಯಲ್ಲಿ ಸಾಧನೆಯ ಗುರಿ

ವಾರ್ತಾಭಾರತಿವಾರ್ತಾಭಾರತಿ22 Jun 2020 10:05 PM IST
share

ಮಂಗಳೂರು, ಜೂ.22: ದ.ಕ. ಜಿಲ್ಲೆಯ ವಿವಿಧೆಡೆಯಲ್ಲಿ ಹಡೀಲು (ಪಾಳು ಬಿದ್ದ) ಗದ್ದೆಗಳಲ್ಲಿ ಭತ್ತದ ಕೃಷಿ ಅಭಿಯಾನವನ್ನು ಕೃಷಿ ಇಲಾಖೆಯು ಆರಂಭಿಸಿದೆ. ಪ್ರಸಕ್ತ ಸಾಲಿನಲ್ಲಿ ಆಸಕ್ತ ರೈತರ ಸಹಕಾರದಿಂದ ಪಾಳುಬಿದ್ದ 1000 ಎಕರೆಗಳಲ್ಲಿ ಭತ್ತದ ಕೃಷಿ ಬೆಳೆಯುವ ಗುರಿಯನ್ನು ಇಲಾಖೆ ಹೊಂದಿದ್ದು, ಈಗಾಗಲೇ ಪಾಳುಬಿದ್ದ 100ಕ್ಕೂ ಅಧಿಕ ಎಕರೆ ಗದ್ದೆಗಳಲ್ಲಿ ಭತ್ತ ಬೆಳೆಯಲು ರೈತರನ್ನು ಉತ್ತೇಜಿಸಿದೆ.

ಯುವ ಸಮೂಹವು ಭತ್ತದ ಕೃಷಿಯಿಂದ ವಿಮುಖರಾಗಿದ್ದರಿಂದ ಹೊಲಗದ್ದೆಗಳು ಪಾಳು ಬೀಳುತ್ತಿರುವುದು ಸಾಮಾನ್ಯವಾಗಿದೆ. ಈ ಮಧ್ಯೆ ಮತ್ತೆ ಭತ್ತದ ಕೃಷಿಗೆ ರೈತರನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಜಿಲ್ಲಾ ಕೃಷಿ ಜಂಟಿ ನಿರ್ದೇಶಕರು ಹಾಗೂ ಸಹಾಯಕ ಕೃಷಿ ನಿರ್ದೇಶಕರು ಜಿಲ್ಲೆಯ ವಿವಿಧೆಡೆ ಸಂಚರಿಸಿ ಪಾಳುಬಿದ್ದ ಗದ್ದೆಗಳನ್ನು ಗುರುತಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈಗಾಗಲೆ ನಗರ ಹೊರವಲಯದ ಸೂರಿಂಜೆ, ಮುಲ್ಕಿ, ಅತಿಕಾರಿಬೆಟ್ಟು ಮತ್ತಿತರ ಕಡೆ ಗದ್ದೆಗಳನ್ನು ಗುರುತಿಸಲಾಗಿದ್ದು, ಅಲ್ಲಿ ಭತ್ತವನ್ನು ಬೆಳೆಯುವಂತೆ ರೈತರಲ್ಲಿ ಮನವಿ ಮಾಡಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಭತ್ತದ ಕೃಷಿಯು ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಿದೆ. 6 ವರ್ಷದ ಹಿಂದೆ ಜಿಲ್ಲೆಯಲ್ಲಿ 34,000 ಹೆಕ್ಟೇರ್‌ನಲ್ಲಿ ಭತ್ತ ಬೆಳೆಯಲಾಗುತ್ತಿದ್ದರೆ, 2020ರ ಮುಂಗಾರು ಹಂಗಾಮಿನಲ್ಲಿ ಇದು 10,260 ಹೆಕ್ಟೇರ್‌ಗೆ ಕುಸಿದಿದೆ. ವಿವಿಧ ಕಾರಣಗಳಿಂದಾಗಿ ರೈತರು ಭತ್ತದ ಬೆಳೆಯಿಂದ ವಿಮುಖರಾಗುತ್ತಿದ್ದು, ಪಾಳುಬೀಳುವ ಗದ್ದೆಗಳ ಸಂಖ್ಯೆ ಮತ್ತು ಪ್ರಮಾಣ ಹೆಚ್ಚುತ್ತಿದೆ. ಇದನ್ನು ಮನಗಂಡ ಇಲಾಖೆಯು ಭತ್ತದ ಬೆಳೆಯತ್ತ ಮತ್ತೆ ರೈತರನ್ನು ಆಕರ್ಷಿಸಿ ಹರಸಾಹಸ ಮಾಡುತ್ತಿದೆ.

ಕೊರೋನ-ಲಾಕ್‌ಡೌನ್ ಹಿನ್ನೆಲೆಯಲ್ಲಿ ಬೇರೆ ಬೇರೆ ಕಡೆ ಕೆಲಸ ಮಾಡಿಕೊಂಡಿದ್ದವರು ಊರಿಗೆ ಮರಳಿದ್ದು, ಅವರು ಭತ್ತದ ಕೃಷಿಯತ್ತ ಆಸಕ್ತರಾಗುವಂತೆ ಅಧಿಕಾರಿಗಳು ಅಭಿಯಾನವನ್ನೇ ಅರಂಭಿಸಿದ್ದಾರೆ. ಅಂದರೆ ಪಾಳುಬಿದ್ದ ಗದ್ದೆಗಳ ಬಗ್ಗೆ ಕೃಷಿ ಸಹಾಯಕರಿಂದ ಮಾಹಿತಿ ಪಡೆಯಲಾಗುತ್ತಿದೆ. ಬಳಿಕ ಅಲ್ಲಿಗೆ ಕೃಷಿ ಇಲಾಖೆ ಜಿಲ್ಲಾ ಜಂಟಿ ನಿರ್ದೇಶಕರ ಸಹಿತ ಇತರ ಅಧಿಕಾರಿಗಳು ಭೇಟಿ ನೀಡಿ ಸ್ಥಳೀಯವಾಗಿ ರೈತರನ್ನು ಸೇರಿಸಿ ಪಾಳು ಬಿದ್ದ ಗದ್ದೆಗಳಲ್ಲಿ ಭತ್ತ ಬೆಳೆಯಲು ಪ್ರೋತ್ಸಾಹದಾಯಕ ಮಾತುಗಳೊಂದಿಗೆ ಮನವಿ ಮಾಡುತ್ತಾರೆ. ಈಗಾಗಲೇ ಕೆಲವು ಪ್ರಗತಿಪರ ಕೃಷಿಕರು ಇಲಾಖೆಯೊಂದಿಗೆ ಕೈಜೋಡಿಸಿದ್ದಾರೆ. ಭತ್ತದ ಬೆಳೆ ಮುಂದಾಗುವ ರೈತರಿಗೆ ಸಹಾಯಧನದಲ್ಲಿ ಬಿತ್ತನೆ ಬೀಜ, ಯಂತ್ರಧಾರೆ ಯೋಜನೆಯಲ್ಲಿ ಉಳುವೆ ಯಂತ್ರ ಸೌಲಭ್ಯವನ್ನು ಒದಗಿಸಲಾಗುತ್ತದೆ. ಅಲ್ಲದೆ ಸಹಾಯಧನ ಆಧಾರಿತ ಯೋಜನೆಗಳನ್ನು ಇದಕ್ಕೆ ಜೋಡಿಸುವ ಪ್ರಯತ್ನಗಳು ಕೂಡಾ ಕೃಷಿ ಇಲಾಖೆಯಿಂದ ನಡೆಯುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X