Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನೆ, ಕಚೇರಿಯಿಂದಲೇ ಜನರ ಸೇವೆ: ಐವನ್...

ಮನೆ, ಕಚೇರಿಯಿಂದಲೇ ಜನರ ಸೇವೆ: ಐವನ್ ಡಿಸೋಜಾ

ವಾರ್ತಾಭಾರತಿವಾರ್ತಾಭಾರತಿ23 Jun 2020 3:06 PM IST
share
ಮನೆ, ಕಚೇರಿಯಿಂದಲೇ ಜನರ ಸೇವೆ: ಐವನ್ ಡಿಸೋಜಾ

ಮಂಗಳೂರು, ಜೂ.23: ವಿಧಾನ ಪರಿಷತ್‌ನ ಸದಸ್ಯನಾಗಿ ಆರು ವರ್ಷಗಳ ಸೇವಾವಧಿಯ ಇಂದು ಕೊನೆಯ ದಿನವಾಗಿದ್ದು, ಜನರ ಸರಕಾರಿ ಸೇವೆಗಳನ್ನು ಮನೆಯ ಕಚೇರಿ ಮೂಲಕವೇ ಮುಂದುವರಿಸಲಿದ್ದೇನೆ ಎಂದು ಐವನ್ ಡಿಸೋಜಾ ಹೇಳಿದ್ದಾರೆ.

ಪಾಲಿಕೆ ಕಟ್ಟಡದ ಕಚೇರಿಯಲ್ಲಿ ವಿಧಾನ ಪರಿಷತ್‌ನ ಸದಸ್ಯಾವಧಿಯ ತಮ್ಮ ಕೊನೆಯ ಪತ್ರಿಕಾಗೋಷ್ಠಿ ನಡೆಸಿದ ಅವರು, 2014ರಿಂದ ಈವರೆಗೆ ಶಾಸನ ಸಭೆಯ ಎಲ್ಲಾ ಸಭೆಗಳಿಗೆ ಹಾಜರಾಗಿ ಜನರ ಪರ ಧ್ವನಿ ಎತ್ತಿದ ತೃಪ್ತಿ ತಮಗಿದೆ ಎಂದರು.

ಮುಂದೆಯೂ ಜನರ ಅಗತ್ಯ ಸೇವೆಗಳನ್ನು ಮಾಡುವ ಜತೆಗೆ ಪಕ್ಷವನ್ನು ಬಲಿಷ್ಠವಾಗಿಸಲು ಹೆಚ್ಚಿನ ಸಮಯವನ್ನು ನೀಡಲಿದ್ದೇನೆ. ಜತೆಗೆ ವಕೀಲ ವೃತ್ತಿಯನ್ನೂ ಮುಂದುವರಿಸುವುದಾಗಿ ಐವನ್ ಡಿಸೋಜಾ ಹೇಳಿದರು.

ಸರಕಾರಿ ಮುಖ್ಯ ಸಚೇತಕನಾಗಿಯೂ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಬಗ್ಗೆ ಹೆಮ್ಮೆ ಇದ್ದು, ಸಂಸದೀಯ ಕಾರ್ಯದರ್ಶಿ(ಕಂದಾಯ ಇಲಾಖೆ)ಯಾಗಿಯೂ ಸೇವೆ ಸಲ್ಲಿಸಿದ್ದೇನೆ. ಅಧಿವೇಶನದಲ್ಲಿ ನಿಗದಿತ ಅವಧಿಯಲ್ಲಿ ಕೇಳಲು ಅವಕಾಶವಿರುವ ಪ್ರಶ್ನೆಗಳನ್ನು ಕೇಳಿ, ಗಮನ ಸೆಳೆಯುವ ಸೂಚನೆಗಳು, ಚರ್ಚೆಗಳಲ್ಲಿ ಭಾಗವಹಿಸುವ ಜತೆಗೆ ಸದನದಲ್ಲಿ ಬೀಡಿ ಕಾರ್ಮಿಕರು, ಅಸಂಘಟಿತ ಕಾರ್ಮಿಕರ ಬಗ್ಗೆ ಗಮನ ಸೆಳೆದು ಸದನವೀರ ಪ್ರಶಸ್ತಿಯನ್ನೂ ಪಡೆದಿರುವ ಬಗ್ಗೆ ತೃಪ್ತಿ ಇದೆ ಎಂದರು.

ರಾಜ್ಯದಲ್ಲಿ ಸೋಲಾರ್ ವಿದ್ಯುತ್ ಮೇಲ್ಛಾವಣಿ ಘಟಕವ್ನನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದನೆಗೆ ಹೆಚ್ಚು ಗಮನ ನೀಡಬೇಕೆಂದು ಪ್ರಸ್ತಾಪಿಸಿ, ದ.ಕ. ಜಿಲ್ಲೆಯಲ್ಲಿ ಅಭಿಯಾನ ಆರಂಭಿಸಿ ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆಯಲ್ಲಿ ದ.ಕ. ಜಿಲ್ಲೆ 2ನೆ ಸ್ಥಾನ ಪಡೆಯುವಲ್ಲಿ ಶ್ರಮ ವಹಿಸಿರುವುದಾಗಿ ಅವರು ಹೇಳಿದರು.

ಶಾಸಕರ ನಿಧಿಯಿಂದ ಸರಕಾರಿ ಮತ್ತು ಅನುದಾನಿತ 25 ಶಾಲೆಗಳಿಗೆ 3 ಕಿ.ವ್ಯಾಟ್‌ನ ಸೌರಶಕ್ತಿ ಘಟಕಗಳನ್ನು ಒದಗಿಸಿದ್ದೇನೆ. ಪೆರಾಬೆಯ ಎಂಡೋಪೀಡಿತರ ಮನೆಗಳಿಗೆ ಸೌರಶಕ್ತಿ ನೀಡುವ ಕಾರ್ಯ ಮಾಡಲಾಗಿದೆ. ವಿವಿಧ ನಿಗಮ, ಯೋಜನೆ, ಅಭಿವೃದ್ಧಿ ಕಾರ್ಯಗಳಡಿ ಒಟ್ಟು 46 ಕೋಟಿ ರೂ. ಅನುದಾನವನ್ನು ಸರಕಾರದಿಂದ ಪಡೆಯಲಾಗಿದ್ದು, ಮುಖ್ಯಮಂತ್ರಿ ಪರಿಹಾರ ನಿಧಿಯಡಿ 6.62 ಕೋಟಿ ರೂ.ಗಳ ಪರಿಹಾರವನ್ನು 1600 ಕ್ಕೂ ಅಧಿಕ ಅರ್ಜಿದಾರರಿಗೆ ವಿತರಿಸಲಾಗಿದೆ. ಇದೇ ವೇಳೆ ಸುಮಾರು 63 ಉಚಿತ ವೈದ್ಯಕೀಯ ಶಿಬಿರಗಳನ್ನು ನಡೆಸಿದ್ದು, ಪತ್ನಿ ಡಾ. ಕವಿತಾ ಡಿಸೋಜಾ ಸಹಾಯದಿಂದ 350ಕ್ಕೂ ಅಧಿಕ ಉಚಿತ ಶಸ್ತ್ರ ಚಿಕಿತ್ಸೆಗಳನ್ನು ನಡೆಸಲಾಗಿದೆ, 3500ಕ್ಕೂ ಅಧಿಕ ಜನರಿಗೆ ಉಚಿತ ಕನ್ನಡಕವನ್ನು ವಿತರಿಸಲಾಗಿದೆ ಎಂದು ಅವರು ಹೇಳಿದರು.

ರಿಕ್ಷಾ ಚಾಲಕರಿಗೆ ಸುಸಜ್ಜಿತ ರಿಕ್ಷಾ ತಂಗುದಾಣಗಳ ನಿರ್ಮಾಣದಡಿ ಕರಾವಳಿ ಜಿಲ್ಲೆಯಲ್ಲಿ 68 ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ರಿಕ್ಷಾ ನಿಲ್ದಾಣಕ್ಕೆ ಹಿಂದೆ ಶಾಸಕರ ಅನುದಾನ ಉಪಯೋಗಿಸುವಂತಿರಲಿಲ್ಲ. ಇದನ್ನು ಶಾಸನ ಸಭೆಯಲ್ಲಿ ಪ್ರಶ್ನಿಸಿ, ಕಾನೂನಿನ ತಿದ್ದುಪಡಿ ತಂದು ಶಾಸಕರ ಅನುದಾನದಿಂದ ಅನುಷ್ಠಾನಗೊಳಿಸಲಾಗಿದೆ. ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆಯ ನಿಟ್ಟಿನಲ್ಲಿ ಮಾಡಿದ ಪ್ರಯತ್ನದ ಫಲವಾಗಿ 2019-20ನೆ ಬಜೆಟ್‌ನಲ್ಲಿ 200 ಕೋಟಿ ರೂ. ಅನುದಾನದೊಂದಿಗೆ ನಿಗಮ ಸ್ಥಾಪನೆಗೆ ಸರಕಾರ ಕ್ರಮ ಕೈಗೊಂಡಿದೆ. ಒಟ್ಟಿನಲ್ಲಿ ಆರು ವರ್ಷಗಳ ಅವಧಿಯಲ್ಲಿ ವಿಧಾನ ಪರಿಷತ್‌ನ ಶಾಸಕನಾಗಿಯೂ ಜನರ ಸೇವೆಯನ್ನು ಅತ್ಯುತ್ತಮವಾಗಿ ನಿರ್ವಹಿಸಬಹುದು ಎಂಬುದನ್ನು ತಾನು ನಿೂಪಿಸಿರುವುದಾಗಿ ಅವರು ಹೇಳಿದರು.

ಈ ಸಂದರ್ಭ ಐವನ್ ಡಿಸೋಜಾರನ್ನು ಅವರ ಅಭಿಮಾ ಬಳಗ ಹೂಹಾರ ಹಾಕಿ ಅಭಿನಂದಿಸಿತು. ಗೋಷ್ಠಿಯಲ್ಲಿ ಶಾಸಕ ಯು.ಟಿ.ಖಾದರ್, ಇಬ್ರಾಹೀಂ ಕೋಡಿಜಾಲ್, ಶಶಿಧರ ಹೆಗ್ಡೆ, ನ್ಯಾಯವಾದಿ ಮನುರಾಜ್, ನಾಗೇಂದ್ರ ಕುಮಾರ್, ನಝೀರ್ ಬಜಾಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X