Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಪರೀಕ್ಷಾ ಕೊಠಡಿಗಳಲ್ಲಿ ಮಾಸ್ಕ್ ಧರಿಸಲು...

ಪರೀಕ್ಷಾ ಕೊಠಡಿಗಳಲ್ಲಿ ಮಾಸ್ಕ್ ಧರಿಸಲು ವಿನಾಯಿತಿ ಇರಲಿ

ಕೆ.ಎಸ್. ಮಂಗಳೂರುಕೆ.ಎಸ್. ಮಂಗಳೂರು24 Jun 2020 12:13 AM IST
share

ಮಾನ್ಯರೇ,

ಕೊರೋನ ವೈರಸ್ ಸೋಂಕು ತಡೆಗಟ್ಟಲು ಮಾಸ್ಕ್ ಧಾರಣೆ ಕಡ್ಡಾಯ ಮಾಡಿರುವುದು ಸ್ವಾಗತಾರ್ಹವೇ. ಆದರೆ ಮಾಸ್ಕನ್ನು ಬಹಳ ಹೊತ್ತು ಧರಿಸಿಕೊಂಡಿರುವುದು ಸ್ವಲ್ಪ ಕಷ್ಟ. ಅದೊಂದು ರೀತಿಯ ಅಡಚಣೆಯನ್ನೇ ಉಂಟು ಮಾಡುತ್ತಿರುತ್ತದೆ.

ಇದೀಗ ಆರಂಭವಾಗಲಿರುವ ಎಸೆಸೆಲ್ಸಿ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಬರುವುದು ಕಡ್ಡಾಯವಾಗಿದೆ. ಆದರೆ ಈ ಮಾಸ್ಕ್ ಧಾರಣೆ, ಪರೀಕ್ಷಾ ಕೊಠಡಿಗೆ ಹೋಗುವ ತನಕ ಕಡ್ಡಾಯವಾಗಿದ್ದರೆ ಸಾಕು. ಕೊಠಡಿ ಸೇರಿದ ನಂತರ ಮಾಸ್ಕನ್ನು ಮುಖದಿಂದ ತೆಗೆದಿರಿಸಿಡುವುದು ಒಳ್ಳೆಯದು. ಇಲ್ಲದಿದ್ದರೆ, ಮೂರು ಗಂಟೆಗಳ ಹೊತ್ತು ಪರೀಕ್ಷೆಯನ್ನು ಬರೆಯುತ್ತಿರುವಾಗ, ಈ ಮಾಸ್ಕ್ ಉಂಟುಮಾಡುವ ಅಡಚಣೆಯಿಂದ ವಿದ್ಯಾರ್ಥಿಯ ಏಕಾಗ್ರತೆಗೆ ಭಂಗ ಬರುತ್ತದೆ. ಮಾಸ್ಕ್ ಧರಿಸಿರುವಾಗ ಉಸಿರಾಡಲು ಕೂಡ ಸ್ವಲ್ಪ ತಡೆಯಾಗುವುದು ಸುಳ್ಳಲ್ಲ. ವಿದ್ಯಾರ್ಥಿಯ ಆರೋಗ್ಯದ ದೃಷ್ಟಿಯಿಂದಲೂ ಇದು ಅಗತ್ಯ.

ಹಾಗಾಗಿ ಪರೀಕ್ಷಾ ಕೊಠಡಿ ಸೇರಿದ ನಂತರ ವಿದ್ಯಾರ್ಥಿಗೆ ಮಾಸ್ಕನ್ನು ಮುಖದ ಮೇಲಿಂದ ತೆಗೆದಿಡಲು ಅವಕಾಶ ಕೊಡುವುದು ಒಳ್ಳೆಯದು. ಮೂಗಿನಿಂದ ಕೆಳಗೆ ಸರಿಸುವುದಾಗಲೀ, ಬಾಯಿಯನ್ನು ಮುಚ್ಚಿಡುವುದಾಗಲೀ ಅಗತ್ಯವಿಲ್ಲ. ಹೇಗೂ ಥರ್ಮಲ್ ಪರೀಕ್ಷೆ ನಡೆಸಿಯೇ ಒಳಗೆ ಬಿಡುವುದರಿಂದ ಮತ್ತು ಸುರಕ್ಷಿತ ಅಂತರವನ್ನು ಕೂಡ ಕಾಯ್ದುಕೊಳ್ಳುವುದರಿಂದ, ಪರೀಕ್ಷಾ ಕೊಠಡಿಯೊಳಗೆ ಮಾಸ್ಕ್ ಧಾರಣೆಯ ಅಗತ್ಯವಿರುವುದಿಲ್ಲ. ಪರೀಕ್ಷೆ ನಡೆಯುವುದು ಮುಖ್ಯ ಎಂದು ಭಾವಿಸಿ ಅದನ್ನು ನಡೆಸಲು ಹೊರಟಿರುವ ಇಲಾಖೆ, ವಿದ್ಯಾರ್ಥಿಗಳು ಸರಾಗವಾಗಿ ಮತ್ತು ಗಂಭೀರವಾಗಿ ಉತ್ತರ ಬರೆಯಲೂ ಅವಕಾಶ ಒದಗಿಸಬೇಕು. ಸೂಕ್ತ ಸೂಚನೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ನೀಡಬೇಕು ಮತ್ತು ಅದನ್ನು ಪರೀಕ್ಷಾ ಮೇಲ್ವಿಚಾರಕರಿಗೆ ಮನದಟ್ಟು ಮಾಡಿಕೊಡಬೇಕು. ಇಲ್ಲದೇ ಹೋದರೆ ಈ ಬಗ್ಗೆ ಸರಿಯಾದ ಮಾಹಿತಿ ಇಲ್ಲದ ಕೊಠಡಿ ಮೇಲ್ವಿಚಾರಕರು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ವಿದ್ಯಾರ್ಥಿಗಳಿಗೆ ತೊಂದರೆ ಉಂಟು ಮಾಡುವ ಸಂಭವವಿದೆ.

share
ಕೆ.ಎಸ್. ಮಂಗಳೂರು
ಕೆ.ಎಸ್. ಮಂಗಳೂರು
Next Story
X