ಮಣಿಪಾಲ: ಜೂ.26ರಂದು ಕನ್ನಡ ಪುಸ್ತಕ ಪ್ರಾಧಿಕಾರದ ಸಿರಿಗನ್ನಡ ಪುಸ್ತಕ ಮಳಿಗೆ ಆರಂಭ
ಉಡುಪಿ, ಜೂ.25: ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಮಣಿಪಾಲ ಯುನಿವರ್ಸಲ್ ಪ್ರೆಸ್ ಸಹಭಾಗಿತ್ವದಲ್ಲಿ ಸಿರಿಗನ್ನಡ ಪುಸ್ತಕ ಮಳಿಗೆಯ ಮಣಿಪಾಲ ಶಾಖೆಯು ಮಣಿಪಾಲದಲ್ಲಿರುವ ಸೆಂಟರ್ ಫಾರ್ ಬೇಸಿಕ್ ಸಾಯನ್ಸ್ನ ನೆಲಮಹಡಿಯಲ್ಲಿ ಜೂ.26ರ ಶುಕ್ರವಾರ ಶುಭಾರಂಭಗೊಳ್ಳಲಿದೆ.
ಮಣಿಪಾಲ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಎಚ್. ವಿನೋದ್ ಭಟ್ ಅವರು ಬೆಳಗ್ಗೆ 10 ಗಂಟೆಗೆ ಈ ಮಳಿಗೆಯ ಉದ್ಘಾಟನೆ ನೆರವೇರಿ ಸಲಿದ್ದು, ಉಡುಪಿಯ ಹಿರಿಯ ಸಾಹಿತಿಗಳಾದ ಪ್ರೊ. ಮುರಳೀಧರ ಉಪಾಧ್ಯ ಹಿರಿಯಡಕ ಮುಖ್ಯ ಅತಿಥಿಗಳಾಗಿ ಭಾಗವಹಿಲಿದ್ದಾರೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊರೋನ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ನೀಡಿರುವ ಎಲ್ಲಾ ನಿರ್ದೇಶನಗಳನ್ನು ಪಾಲಿಸಲಾಗುವುದು ಎಂದು ಮಣಿಪಾಲ ಯುನಿವರ್ಸಲ್ ಪ್ರೆಸ್ ಪ್ರಧಾನ ಸಂಪಾದಕಿ ಡಾ. ನೀತಾ ಇನಾಂದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story