ಎಸೆಸೆಲ್ಸಿ ಪರೀಕ್ಷೆ ಮುಗಿಸಿ ಮರಳುತ್ತಿದ್ದ ವೇಳೆ ಅಪಘಾತ: ಮೂವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರ
ಗದಗ, ಜೂ.25: ಎಸೆಸೆಲ್ಸಿ ಪರೀಕ್ಷೆ ಮುಗಿಸಿಕೊಂಡು ಊರಿನ ಕಡೆಗೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಗುರುವಾರ ನಡೆದಿದೆ.
ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಹತ್ತಿರ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಲಾರಿ ನಡುವೆ ಢಿಕ್ಕಿ ಸಂಭವಿಸಿದೆ. ಮೂವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ.
ಸಿದ್ದಪ್ಪ ತಳವಾರ, ಈರಣ್ಣ ಬಡಿಗೇರ ಹಾಗೂ ಮೈಲಾರಿ ಯಳವತ್ತಿ ಎಂಬ ವಿದ್ಯಾರ್ಥಿಗಳು ಗಾಯಗೊಂಡವರು. ಮುಂಡರಗಿ ತಾಲೂಕಿನ ಕಲಕೇರಿ ಪರೀಕ್ಷಾ ಕೇಂದ್ರದಿಂದ ಪರೀಕ್ಷೆ ಮುಗಿಸಿ ವಾಪಾಸ್ ಊರಿಗೆ ತೆರಳುತ್ತಿದ್ದರು. ಈ ವೇಳೆ ಎದುರಿಗೆ ಬರುತ್ತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದಿದೆ. ಸದ್ಯ ಮೂವರು ವಿದ್ಯಾರ್ಥಿಗಳನ್ನು ಆಂಬ್ಯುಲೆನ್ಸ್ ಮೂಲಕ ಮುಂಡರಗಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
Next Story