Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತೈಲ ಬೆಲೆ ನಿಯಂತ್ರಿಸದಿದ್ದರೆ...

ತೈಲ ಬೆಲೆ ನಿಯಂತ್ರಿಸದಿದ್ದರೆ ಪ್ರತಿಭಟನೆ: ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್ ಚಾಲಕರ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ26 Jun 2020 3:34 PM IST
share
ತೈಲ ಬೆಲೆ ನಿಯಂತ್ರಿಸದಿದ್ದರೆ ಪ್ರತಿಭಟನೆ: ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್ ಚಾಲಕರ ಎಚ್ಚರಿಕೆ

ಮಂಗಳೂರು, ಜೂ.26: ಕೊರೋನ ಸೋಂಕು, ಲಾಕ್‌ಡೌನ್‌ನಿಂದ ಈಗಾಗಲೇ ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ಚಾಲಕರು ಹಾಗೂ ಮಾಲಕರು ತತ್ತರಿಸಿದ್ದು, ಇದೀಗ ತೈಲ ಬೆಲೆ ಏರಿಕೆಯಿಂದ ಜೀವನವನ್ನೇ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಹಾಗೂ ರಾಜ್ಯ ಸರಕಾರ ತೈಲ ಬೆಲೆ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ದ.ಕ. ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಎಚ್ಚರಿಕೆ ನೀಡಿದೆ.

ಸುದ್ದಿಗೋಷ್ಠಿಯಲ್ಲಿಂದು ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ಚಾಲಕರ ಪರಿಸ್ಥಿತಿಯನ್ನು ವಿವರಿಸಿದ ಅಧ್ಯಕ್ಷ ದಿನೇಶ್ ಕುಂಪಲ ಎಂ., ಲಾಕ್‌ಡೌನ್ ಸಂದರ್ಭ ಪರಿಹಾರವಾಗಿ ಸರಕಾರ ಘೋಷಣೆ ಮಾಡಿರುವಂತೆ ಟ್ಯಾಕ್ಸಿ ಚಾಲರಿಗೆ ಐದು ಸಾವಿರ ರೂ.ನ್ನು ಎಲ್‌ಎಂವಿ ಬ್ಯಾಡ್ಜ್ ಹೊಂದಿರುವ ಎಲ್ಲಾ ಚಾಲಕರಿಗೂ ಒದಗಿಸಬೇಕು ಎಂದು ಒತ್ತಾಯಿಸಿದರು.

ಸಂಘದಡಿ 2,500ಕ್ಕೂ ಅಧಿಕ ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್ ವಾಹನಗಳಿದ್ದು, ಪ್ರಯಾಣಿಕರ ಸಾಗಾಟದಿಂದಲೇ ಬರುವ ಆದಾಯದಲ್ಲಿ ಸಂಸಾರ ನಡೆಸುವ ಬಡ ಚಾಲಕ ಹಾಗೂ ಮಾಲಕರಾಗಿರುತ್ತಾರೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಟ್ಯಾಕ್ಸಿ ಚಾಲರಿಗೆ ಘೋಷಣೆ ಮಾಡಿರುವ ಹಣ ಸರಕಾರದಿಂದ ಇನ್ನೂ ಸರಿಯಾಗಿ ಹಂಚಿಕೆಯಾಗಿಲ್ಲ. ಇದು ಟ್ಯಾಕ್ಸಿಗೆ ಮಾತ್ರ, ಮ್ಯಾಕ್ಸಿಕ್ಯಾಬ್‌ಗೆ ಇಲ್ಲ ಎಂಬ ತಾರತಮ್ಯವನ್ನೂ ಮಾಡಲಾಗುತ್ತಿದೆ. ಹಾಗಾಗಿ ಬ್ಯಾಡ್ಜ್ ಹೊಂದಿದವರಿಗೆ ಎಲ್ಲರಿಗೂ ಪರಿಹಾರ ಹಣವನ್ನು ನೀಡಬೇಕು ಎಂದವರು ಹೇಳಿದರು.

ಲಾಕ್‌ಡೌನಿಂದಾಗಿ ಸುಮಾರು ನಾಲ್ಕು ತಿಂಗಳಿನಿಂದ ವಾಹನಗಳು ರಸ್ತೆಗಿಳಿದಿಲ್ಲ. ಇದೀಗ ರಸ್ತೆಗಿಳಿದರೂ ಬಾಡಿಗೆ ತುಂಬಾ ವಿರಳವಾಗಿದೆ. ಈ ಸಂದರ್ಭದಲ್ಲಿ ಆರ್‌ಬಿಐ ಮೂಲಕ ಬ್ಯಾಂಕ್‌ಗಳಿಗೆ ಯಾವುದೇ ಸಾಲ ವಸೂಲಿಗೆ ಒತ್ತಾಯ ಮಾಡದಂತೆ ಸೂಚನೆ ನೀಡಿದೆ. ಸಾಲದ ಕಂತನ್ನು ಬಡ್ಡಿ ರಹಿತವಾಗಿ ಪಡೆಯಬೇಕಿದ್ದರೂ ಬ್ಯಾಂಕ್‌ಗಳು ಮಾತ್ರ ವಹಾನಗಳ ಮಾಲಕರಿಗೆ ಕರೆ ಮಾಡಿ ಸಾಲ ವಸೂಲಾತಿಗೆ ಒತ್ತಾಯಿಸುತ್ತಿವೆ. ಈ ಬಗ್ಗೆ ಸರಕಾರ ಸಂಬಂಧಪಟ್ಟ ಬ್ಯಾಂಕ್‌ಗಳಿಗೆ ಅಧಿಸೂಚನೆ ನೀಡಬೇಕು. ಮಾತ್ರವಲ್ಲದೆ, ಟ್ಯಾಕ್ಸಿ ಹಾಗೂ ಮ್ಯಾಕ್ಸಿ ಕ್ಯಾಬ್ ವಾಹನಗಳಿಗೆ ಮುಂದಿನ ಆರು ತಿಂಗಳ ಕಾಲ ತೆರಿಗೆ ಹಾಗೂ ವಿಮೆಯಿಂದ ವಿನಾಯಿತಿ ನೀಡಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಬೇಕು ಎಂದು ಅವರು ಒತ್ತಾಯಿಸಿದರು.


ಕೋವಿಡ್ ನಿರ್ಮೂಲನೆಯಲ್ಲಿ ತೊಡಗಿದ ಟ್ಯಾಕ್ಸಿಗಳಿಗೆ ಗೌರವಧನ ನೀಡಿ

ಕೋವಿಡ್-19 ನಿರ್ಮೂಲನೆ ಕಾರ್ಯದಲ್ಲಿದ್ದ ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆಗಳಿಗೆ ಸಂಚಾರಕ್ಕಾಗಿ ಜಿಲ್ಲಾಡಳಿತ ಸಂಘದ ಮೂಲಕ ಸುಮಾರು 150 ವಾಹನಗಳನ್ನು ಜಿಲ್ಲೆಯಾದ್ಯಂತ ಒದಗಿಸಿದೆ. ಸುಮಾರು 57 ದಿನಗಳಾದರೂ ಇನ್ನೂ ಅವರಿಗೆ ಒದಗಿಸಬೇಕಾದ ಗೌರವಧನ ನೀಡಲಾಗಿಲ್ಲ. ಇದರಿಂದಾಗಿ ಆ ವಾಹನಗಳ ಚಾಲಕರ ಕುಟುಂಬ ನಿರ್ವಹಣೆ ಕಷ್ಟಸಾಧ್ಯವಾಗಿದೆ. ಜಿಲ್ಲಾಡಳಿತಕ್ಕೆ ಈ ಬಾರಿ ಮನವಿ ನೀಡಿದ್ದರೂ ಸ್ಪಂದನೆ ದೊರಕಿಲ್ಲ ಎಂದು ದಿನೇಶ್ ಕುಂಪಲ ಎಂ. ಬೇಸರ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಆನಂದ್ ಕೆ., ಉಪಾಧ್ಯಕ್ಷರಾದ ಹರೀಶ್ ಶೆಟ್ಟಿ ಕುತ್ತಾರು, ದಿನೇಶ್ ಮಂಗಳಾದೇವಿ, ಸುರೇಶ್ ಸುರತ್ಕಲ್ ಉಪಸ್ಥಿತರಿದ್ದರು 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X