Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 30 ವರ್ಷಗಳಿಂದ ಮಹಿಳೆಯಾಗಿದ್ದಾಕೆ...

30 ವರ್ಷಗಳಿಂದ ಮಹಿಳೆಯಾಗಿದ್ದಾಕೆ ಆಸ್ಪತ್ರೆಗೆ ಹೋದ ನಂತರ ‘ಪುರುಷ’!

ವೈದ್ಯರು ಹೇಳಿದ ಆಘಾತಕಾರಿ ಸತ್ಯ

ವಾರ್ತಾಭಾರತಿವಾರ್ತಾಭಾರತಿ26 Jun 2020 4:23 PM IST
share
30 ವರ್ಷಗಳಿಂದ ಮಹಿಳೆಯಾಗಿದ್ದಾಕೆ ಆಸ್ಪತ್ರೆಗೆ ಹೋದ ನಂತರ ‘ಪುರುಷ’!

ಕೊಲ್ಕತ್ತಾ: ಮೂವತ್ತು ವರ್ಷಗಳ ಕಾಲ ಯಾವುದೇ ಸಮಸ್ಯೆಯೆದುರಿಸದ ಮಹಿಳೆಯೊಬ್ಬರು ಇತ್ತೀಚೆಗೆ ಹೊಟ್ಟೆ ನೋವಿನ ಸಮಸ್ಯೆಯ ಕಾರಣ ಆಸ್ಪತ್ರೆಗೆ ತೆರಳಿದಾಗ ಆಕೆಯನ್ನು ಪರೀಕ್ಷಿಸಿದ ವೈದ್ಯರು ಆಕೆ ವೃಷಣದ ಕ್ಯಾನ್ಸರ್‍ ನಿಂದ ಬಳಲುತ್ತಿರುವ ಒಬ್ಬ `ಪುರುಷ' ಎಂದು ಪತ್ತೆ ಹಚ್ಚಿದ್ದಾರೆ.

ಈಕೆಯ 28 ವರ್ಷದ ಸೋದರಿ ಕೂಡ ನಂತರ ವೈದ್ಯಕೀಯ ಪರೀಕ್ಷೆಗೊಳಗಾದಾಗ ಆಕೆ ಕೂಡ ‘ಎಂಡ್ರೋಜನ್ ಇನ್ಸೆನ್ಸಿಟಿವಿಟಿ ಸಿಂಡ್ರೋಮ್' ಎಂಬ ಸಮಸ್ಯೆಯಿಂದ ಬಳಲುತ್ತಿರುವುದು ಬೆಳಕಿಗೆ ಬಂತು. ಈ ಸಮಸ್ಯೆಯಿರುವವರ ದೇಹ ಮಹಿಳೆಯರಂತಿದ್ದರೂ ದೇಹದೊಳಗಿನ ಅಂಶಗಳು ಮಾತ್ರ ಪುರುಷರದ್ದಾಗಿರುತ್ತದೆ.

ಮೊದಲು ವೈದ್ಯಕೀಯ ಪರೀಕ್ಷೆಗೊಳಗಾದ 30 ವರ್ಷದ ಮಹಿಳೆ ಬಿರ್ಭುಮ್ ನಿವಾಸಿಯಾಗಿದ್ದು, ಕಳೆದ  ಒಂಬತ್ತು ವರ್ಷಗಳ ಹಿಂದೆ ಆಕೆಗೆ ವಿವಾಹವಾಗಿದೆ. ಎರಡು ತಿಂಗಳ ಹಿಂದೆ ತೀವ್ರ ಹೊಟ್ಟೆ ನೋವಿನ ಕಾರಣ ಆಕೆ ನಗರದ ನೇತಾಜಿ ಸುಭಾಸ್ ಚಂದ್ರ ಬೋಸ್ ಕ್ಯಾನ್ಸರ್ ಆಸ್ಪತ್ರೆಗೆ ತಪಾಸಣೆಗಾಗಿ ಬಂದಾಗ ಆಕೆಯ ವೈದ್ಯಕೀಯ ಪರೀಕ್ಷೆಗಳನ್ನು ಕ್ಯಾನ್ಸರ್ ತಜ್ಞರಾದ ಡಾ. ಅನುಪಮ್ ದತ್ತಾ ಹಾಗೂ ಡಾ. ಸೌಮೇನ್ ದಾಸ್ ನಡೆಸಿದ್ದರು. ಆಗ ಆಕೆಯ ಅಂಗಾಂಗಗಳು- ಸ್ತನಗಳಿಂದ ಹಿಡಿದು ಜನನಾಂಗದವರೆಗೆ ಎಲ್ಲವೂ ಮಹಿಳೆಯರ ದೇಹವನ್ನೇ ಹೋಲುತ್ತಿದ್ದರೂ ಆಕೆಯ ದೇಹದೊಳಗೆ ಗರ್ಭಕೋಶ ಹಾಗೂ ಅಂಡಾಶಯಗಳಿಲ್ಲದೇ ಇರುವುದು ಅವರಿಗೆ ತಿಳಿದು ಬಂದಿತ್ತು. ಆಕೆಗೆ ಋತುಸ್ರಾವ ಕೂಡ ಆಗುತ್ತಿರಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಇಂತಹ ಸಮಸ್ಯೆ ಪ್ರತಿ 22,000 ಜನರ ಪೈಕಿ ಒಬ್ಬರಲ್ಲಿ ಮಾತ್ರ ಕಂಡು ಬರುತ್ತವೆ. ಈ ಮಹಿಳೆಯ ದೇಹದೊಳಗೆ ವೃಷಣಗಳಿರುವುದು ವೈದ್ಯರಿಗೆ ಕಂಡು ಬಂದಿದ್ದು ಬಯಾಪ್ಸಿ ನಡೆಸಿದಾಗ ಆಕೆಗೆ ವೃಷಣದ ಕ್ಯಾನ್ಸರ್ ಅಥವಾ ‘ಸೆಮಿನೋಮ’ ಇರುವುದು ಪತ್ತೆಯಾಗಿದೆ. ಸದ್ಯ ಆಕೆಗೆ ಕೀಮೋಥೆರಪಿ ನೀಡಲಾಗುತ್ತಿದ್ದು ಆಕೆಯ ಸ್ಥಿತಿ ಸ್ಥಿರವಾಗಿದೆ. ಮಹಿಳೆಯ ಇಬ್ಬರು ಚಿಕ್ಕಮ್ಮಂದಿರೂ ಇದೇ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ.  

ಈಗ ವೈದ್ಯರು ಆಕೆ ಹಾಗೂ ಆಕೆಯ ಪತಿಯ ಜತೆಗೆ ಸಮಾಲೋಚನೆ ನಡೆಸುತ್ತಿದ್ದು, ಹಿಂದಿನಂತೆಯೇ ಜೀವನ ಮುಂದುವರಿಸಲು ಸಲಹೆ ನೀಡಿದ್ದಾರೆ. ದಂಪತಿ ಮಕ್ಕಳನ್ನು ಪಡೆಯಬೇಕೆಂದು ಬಹಳ ಪ್ರಯತ್ನಿಸಿದ್ದರೂ ವಿಫಲರಾಗಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X