Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಕ್ಕಳಿಗೆ ಕೆಲ ಗಂಟೆಗಳ ಕಾಲ ಆನ್‍ಲೈನ್...

ಮಕ್ಕಳಿಗೆ ಕೆಲ ಗಂಟೆಗಳ ಕಾಲ ಆನ್‍ಲೈನ್ ತರಗತಿ ನಡೆಸಬಹುದಲ್ಲವೇ: ಸರಕಾರಕ್ಕೆ ಹೈಕೋರ್ಟ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ26 Jun 2020 8:40 PM IST
share
ಮಕ್ಕಳಿಗೆ ಕೆಲ ಗಂಟೆಗಳ ಕಾಲ ಆನ್‍ಲೈನ್ ತರಗತಿ ನಡೆಸಬಹುದಲ್ಲವೇ: ಸರಕಾರಕ್ಕೆ ಹೈಕೋರ್ಟ್ ಪ್ರಶ್ನೆ

ಬೆಂಗಳೂರು, ಜೂ.26: ಎಲ್‍ಕೆಜಿಯಿಂದ 5ನೆ ತರಗತಿವರೆಗಿನ ಮಕ್ಕಳಿಗೆ ಆನ್‍ಲೈನ್ ತರಗತಿಗಳನ್ನು ನಿಷೇಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಮಕ್ಕಳಿಗೆ ಕೆಲ ಗಂಟೆಗಳ ಕಾಲವಾದರೂ ಆನ್‍ಲೈನ್ ತರಗತಿಗಳನ್ನು ನಡೆಸಬಹುದಲ್ಲವೇ ಎಂದು ಸರಕಾರವನ್ನು ಪ್ರಶ್ನಿಸಿದೆ.

ಎಲ್‍ಕೆಜಿಯಿಂದ 5ನೆ ತರಗತಿವರೆಗಿನ ಮಕ್ಕಳಿಗೆ ಆನ್‍ಲೈನ್ ತರಗತಿಗಳನ್ನು ನಿಷೇಧಿಸಿರುವುದನ್ನು ಪ್ರಶ್ನಿಸಿ ಪೋಷಕರು ಮತ್ತು ಕೆಲ ಶಾಲಾ ಆಡಳಿತ ಮಂಡಳಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ನಟರಾಜ್ ರಂಗಸ್ವಾಮಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ನ್ಯಾಯಪೀಠವು ಪ್ರತಿಕ್ರಿಯಿಸಿ, ಮೇಲ್ನೋಟಕ್ಕೆ ಸರಕಾರ ಏಕಾಏಕಿ ರದ್ದು ಆದೇಶ ಹೊರಡಿಸಿರುವುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿತು. ಅಲ್ಲದೇ ಮಕ್ಕಳು ಆನ್ ಲೈನ್ ಮೂಲಕ ಶಿಕ್ಷಣ ಪಡೆಯಲು ಇಚ್ಛಿಸಿದರೆ ಸರಕಾರ ಏಕೆ ತಡೆಯಬೇಕು ಎಂದು ಪ್ರಶ್ನಿಸಿದೆ. ನ್ಯಾಯಪೀಠದ ಪ್ರಶ್ನೆಗೆ ಉತ್ತರಿಸಲು ಸರಕಾರಿ ವಕೀಲರು ಸಮಯಾವಕಾಶ ಕೋರಿದ ಹಿನ್ನೆಲೆಯಲ್ಲಿ ಕೋರ್ಟ್ ವಿಚಾರಣೆಯನ್ನು ಜೂ.29ಕ್ಕೆ ಮುಂದೂಡಿತು.

ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲರು, ಬೇರೆ ರಾಜ್ಯಗಳಲ್ಲಿ ಆನ್‍ಲೈನ್ ತರಗತಿಗಳನ್ನು ನಡೆಸಲು ಅವಕಾಶ ನೀಡಲಾಗಿದೆ. ಆದರೆ, ಕರ್ನಾಟಕದಲ್ಲಿ ಮಾತ್ರ ಆನ್‍ಲೈನ್ ತರಗತಿಗಳನ್ನು ನಿಷೇಧಿಸಲಾಗಿದೆ. ಇದು ಕಾನೂನು ಬಾಹಿರವಾಗಿದೆ ಎಂದು ಪೀಠಕ್ಕೆ ತಿಳಿಸಿದರು.

ಕೊರೋನ ಕಾರಣದಿಂದ ಶಾಲಾ, ಕಾಲೇಜುಗಳು ಬಂದ್ ಆಗಿದ್ದು, ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್‍ಲೈನ್ ಮೂಲಕ ವಿದ್ಯಾರ್ಥಿಗಳಿಗೆ ಪಾಠ ಮಾಡಲು ಆರಂಭಿಸಿದ್ದವು. ಆದರೆ ಖಾಸಗಿ ಶಾಲೆಗಳ ಕ್ರಮಕ್ಕೆ ತಡೆ ಹಾಕಿದ ರಾಜ್ಯ ಸರಕಾರ ಎಲ್‍ಕೆಜಿಯಿಂದ 5ನೆ ತರಗತಿವರೆಗೂ ಆನ್‍ಲೈನ್ ಶಿಕ್ಷಣ ನಡೆಸದಂತೆ ಸೂಚನೆ ನೀಡಿ ಆದೇಶ ಜಾರಿ ಮಾಡಿತ್ತು. ಸರಕಾರದ ಕ್ರಮ ಪ್ರಶ್ನಿಸಿದ ಕೆಲ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X