ಪಕ್ಷಾಂತರ ನಿಷೇಧ ಕಾನೂನಿಗೆ ಬದಲಾವಣೆ ಕುರಿತ ಸಭೆ: ಸಭಾಧ್ಯಕ್ಷರ ಸಮಿತಿಯಿಂದ ಕಾನೂನು ತಜ್ಞರಿಂದ ಅಭಿಪ್ರಾಯ ಸಂಗ್ರಹ
ಬೆಂಗಳೂರು, ಜೂ.26: ಪಕ್ಷಾಂತರ ನಿಷೇಧ ಕಾನೂನಿಗೆ ಸಕಾರಾತ್ಮಕ ಬದಲಾವಣೆಗಳನ್ನು ತರುವಲ್ಲಿ ಸಕಲ ಪ್ರಯತ್ನಗಳನ್ನು ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಲೋಕಸಭಾಧ್ಯಕ್ಷರಿಂದ ರಚಿಸಲ್ಪಟ್ಟ ಸಭಾಧ್ಯಕ್ಷರುಗಳ ಸಮಿತಿಯ ಸದಸ್ಯರು ಹಾಗೂ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಜೂ.25, 26ರಂದು ಮಾಜಿ ಅಡ್ವೊಕೇಟ್ ಜನರಲ್, ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು, ಮಾಜಿ ಲೋಕಾಯುಕ್ತರು ಹಾಗೂ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ ಡಾ.ಸಿ.ಆರ್.ಅಮರ್ನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂವಿಧಾನದ ಹತ್ತನೆಯ ಅನುಸೂಚಿಯ ಅಡಿಯಲ್ಲಿ ಪೀಠಾಸೀನಾಧಿಕಾರಿಗಳ ಅಧಿಕಾರಿಗಳು ಹಾಗೂ ಅದರ ಅಡಿಯಲ್ಲಿ ರಚಿಸಲಾದ ನಿಯಮಗಳ ಮರು ಪರಿಶೀಲನೆ ಕುರಿತು ಚರ್ಚೆ ಹಾಗೂ ಅಭಿಪ್ರಾಯಗಳನ್ನು ಸಂಗ್ರಹಿಸಲಾಯಿತು. ಈ ಎಲ್ಲ ಅಭಿಪ್ರಾಯಗಳನ್ನು ಕ್ರೋಡೀಕರಿಸಿ ಸಭಾಧ್ಯಕ್ಷರುಗಳ ಸಮಿತಿಯ ಮುಂದೆ ಸಮರ್ಪಕವಾಗಿ ಮಂಡಿಸಲಾಗುತ್ತದೆ. ಹಾಗೂ ಪಕ್ಷಾಂತರ ನಿಷೇಧ ಕಾನೂನಿಗೆ ಸಕಾರಾತ್ಮಕ ಬದಲಾವಣೆಗಳನ್ನು ತರುವ ಸಕಲ ಪ್ರಯತ್ನಗಳನ್ನು ಮಾಡಲಾಗುತ್ತದೆ.
ಮಾಜಿ ಅಡ್ವಕೇಟ್ ಜನರಲ್, ಹಿರಿಯ ನ್ಯಾಯವಾದಿ ಪ್ರೊ.ರವಿ ವರ್ಮಕುಮಾರ್, ಬಿ.ವಿ.ಆಚಾರ್ಯ ಉದಯ ಹೊಳ್ಳ, ಅಶೋಕ್ ಹಾರನಹಳ್ಳಿ, ಮಧುಸೂದನ್ ನಾಯಕ್, ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು, ಕರ್ನಾಟಕ ಹಿಂದಿನ ಲೋಕಾಯುಕ್ತ ನ್ಯಾ.ಎನ್.ಸಂತೋಷ್ ಹೆಗ್ಡೆ ಅವರಿಂದ ಅಭಿಪ್ರಾಯ ಹಾಗೂ ಲಿಖಿತ ಅಭಿಪ್ರಾಯವನ್ನು ಪಡೆಯಲಾಯಿತು.
ಅಲ್ಲದೆ, ಸಭಾಧ್ಯಕ್ಷರು ಇನ್ನೂ ಹಲವು ಕಾನೂನು ತಜ್ಞರ ಹಾಗೂ ಆಸಕ್ತ ಸಾರ್ವಜನಿಕರ ಅಭಿಪ್ರಾಯಗಳನ್ನು ಸಹ ಪಡೆದರು ಎಂದು ಪಡೆದಿದ್ದಾರೆ.







