Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್-19: ಇತರ ದೇಶಗಳಿಗಿಂತ ಭಾರತದ...

ಕೋವಿಡ್-19: ಇತರ ದೇಶಗಳಿಗಿಂತ ಭಾರತದ ಸ್ಥಿತಿ ಉತ್ತಮ: ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ27 Jun 2020 7:21 PM IST
share
ಕೋವಿಡ್-19: ಇತರ ದೇಶಗಳಿಗಿಂತ ಭಾರತದ ಸ್ಥಿತಿ ಉತ್ತಮ: ಪ್ರಧಾನಿ ಮೋದಿ

 ಹೊಸದಿಲ್ಲಿ,ಜೂ.27: ಶನಿವಾರ ಬೆಳಿಗ್ಗೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ ದಾಖಲೆಯ 18,552 ಹೊಸ ಕೊರೋನ ವೈರಸ್ ಪ್ರಕರಣಗಳು ವರದಿಯಾಗುವುದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 5.08 ಲಕ್ಷಕ್ಕೆ ತಲುಪಿದ್ದು, ಸಾವುಗಳ ಸಂಖ್ಯೆ 15,600ನ್ನು ದಾಟಿದೆ.

ಇದೇ ವೇಳೆ ವೀಡಿಯೊ ಕಾನ್ಫರೆನ್ಸ್ ಮೂಲಕ ಕೇರಳದ ಪಟ್ಟಣಂತಿಟ್ಟ ಜಿಲ್ಲೆಯಲ್ಲಿ ರೆವರಂಡ್ ಜೋಸೆಫ್ ಮಾರ್ ಥೋಮಾ ಮೆಟ್ರೋಪಾಲಿಟನ್ ಅವರ 90ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು,ದೇಶವ್ಯಾಪಿ ಲಾಕ್‌ಡೌನ್ ಮತ್ತು ಬಿಜೆಪಿ ನೇತೃತ್ವದ ಸರಕಾರವು ಕೈಗೊಂಡ ಉಪಕ್ರಮಗಳು ಕೋವಿಡ್-19 ವಿರುದ್ಧದ ಹೋರಾಟವನ್ನು ಇತರ ದೇಶಗಳಿಗಿಂತ ಹೆಚ್ಚು ಉತ್ತಮವಾಗಿ ಎದುರಿಸಲು ಭಾರತಕ್ಕೆ ನೆರವಾಗಿವೆ ಎಂದು ಹೇಳಿದರು.

ಕೊರೋನ ಯೋಧರ ಶ್ರಮದೊಂದಿಗೆ ಭಾರತವು ಕೊರೋನ ವೈರಸ್ ವಿರುದ್ಧ ದೃಢವಾಗಿ ಹೋರಾಡುತ್ತಿದೆ. ವೈರಸ್ ಭಾರತದಲ್ಲಿ ಅತ್ಯಂತ ತೀವ್ರ ಪರಿಣಾಮವನ್ನು ಬೀರಲಿದೆ ಎಂದು ವರ್ಷದ ಆರಂಭದಲ್ಲಿ ಕೆಲವರು ಭವಿಷ್ಯ ನುಡಿದಿದ್ದರು. ಆದರೆ ಲಾಕ್‌ಡೌನ್, ಸರಕಾರದ ಹಲವಾರು ಉಪಕ್ರಮಗಳು ಮತ್ತು ಜನತೆಯ ಸಹಕಾರದಿಂದಾಗಿ ಇತರ ದೇಶಗಳಿಗೆ ಹೋಲಿಸಿದರೆ ಭಾರತದ ಸ್ಥಿತಿ ಉತ್ತಮವಾಗಿದೆ. ದೇಶದಲ್ಲಿ ಚೇತರಿಕೆಯ ದರ ಹೆಚ್ಚುತ್ತಿದೆ ಎಂದರು. ಆದರೆ ಪರಿಸ್ಥಿತಿಯನ್ನು ಲಘುವಾಗಿ ಪರಿಗಣಿಸದಂತೆ ಜನತೆಗೆ ಎಚ್ಚರಿಕೆ ನೀಡಿದ ಅವರು,‘ವಾಸ್ತವದಲ್ಲಿ ನಾವು ಇನ್ನಷ್ಟು ಹೆಚ್ಚು ಎಚ್ಚರಿಕೆಯಿಂದ ಇರಬೇಕಿದೆ. ಮಾಸ್ಕ್ ಧಾರಣೆ, ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳುವುದು ಮತ್ತು ಜನನಿಬಿಡ ಸ್ಥಳಗಳಿಂದ ದೂರವಿರುವುದು ಇವು ಮುಖ್ಯವಾಗಿವೆ ’ಎಂದರು.

ರಾಹುಲ್ ಟೀಕೆ

ದೇಶದಲ್ಲಿ ಕೊರೋನ ಪ್ರಕರಣಗಳ ಸಂಖ್ಯೆ ಶನಿವಾರ ಐದು ಲಕ್ಷ ದಾಟಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು,ಈ ಸಾಂಕ್ರಾಮಿಕ ಪಿಡುಗನ್ನು ಎದುರಿಸಲು ಯಾವುದೇ ಯೋಜನೆ ಸರಕಾರದ ಬಳಿಯಿಲ್ಲ ಎಂದು ಹೇಳಿದ್ದಾರೆ.

‘ಕೋವಿಡ್-19 ದೇಶದ ಹೊಸ ಭಾಗಗಳಿಗೆ ತ್ವರಿತವಾಗಿ ಹರಡುತ್ತಿದೆ. ಅದನ್ನು ಹತ್ತಿಕ್ಕುವ ಯೋಜನೆ ಭಾರತ ಸರಕಾರದ ಬಳಿಯಿಲ್ಲ. ಪ್ರಧಾನಿ ವೌನವಾಗಿದ್ದಾರೆ. ಅವರು ಶರಣಾಗತರಾಗಿದ್ದಾರೆ ಮತ್ತು ಪಿಡುಗಿನ ವಿರುದ್ಧ ಹೋರಾಡಲು ನಿರಾಕರಿಸುತ್ತಿದ್ದಾರೆ ’ಎಂದು ಅವರು ಟ್ವೀಟಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X