Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಡಿಯಲ್ಲಿ ಯಥಾಸ್ಥಿತಿ ಬದಲಿಸುವ ಪ್ರಯತ್ನ...

ಗಡಿಯಲ್ಲಿ ಯಥಾಸ್ಥಿತಿ ಬದಲಿಸುವ ಪ್ರಯತ್ನ ಗಂಭೀರ ಪರಿಣಾಮಗಳನ್ನುಂಟು ಮಾಡಲಿದೆ: ಚೀನಾಕ್ಕೆ ಭಾರತದ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ27 Jun 2020 8:06 PM IST
share
ಗಡಿಯಲ್ಲಿ ಯಥಾಸ್ಥಿತಿ ಬದಲಿಸುವ ಪ್ರಯತ್ನ ಗಂಭೀರ ಪರಿಣಾಮಗಳನ್ನುಂಟು ಮಾಡಲಿದೆ: ಚೀನಾಕ್ಕೆ ಭಾರತದ ಎಚ್ಚರಿಕೆ

ಹೊಸದಿಲ್ಲಿ,ಜೂ.27: ಬಲವಂತದಿಂದ ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ)ಯಲ್ಲಿ ಯಥಾಸ್ಥಿತಿಯನ್ನು ಬದಲಿಸುವ ಪ್ರಯತ್ನಗಳು ಗಡಿಪ್ರದೇಶಗಳಲ್ಲಿ ನೆಲೆಸಿರುವ ಶಾಂತಿ ಮತ್ತು ನೆಮ್ಮದಿಗೆ ಧಕ್ಕೆಯನ್ನುಂಟು ಮಾಡುವುದಷ್ಟೇ ಅಲ್ಲ, ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳ ಮೇಲೆ ಗಂಭೀರ ಪರಿಣಾಮಗಳನ್ನೂ ಉಂಟು ಮಾಡಬಹುದು ಎಂದು ಚೀನಾದಲ್ಲಿ ಭಾರತದ ರಾಯಭಾರಿಯಾಗಿರುವ ವಿಕ್ರಮ ಮಿಸ್ರಿ ಅವರು ಬೀಜಿಂಗ್ ಸರಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ.

 ಚೀನಾ ಎಲ್‌ಎಸಿಯಲ್ಲಿ ಹೊಸ ರಚನೆಗಳನ್ನು ನಿಲ್ಲಿಸಿದರೆ ಮಾತ್ರ ಉಭಯ ದೇಶಗಳ ನಡುವಿನ ಮಿಲಿಟರಿ ಬಿಕ್ಕಟ್ಟು ಬಗೆಹರಿಸಬಹುದು ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿರುವ ಮಿಸ್ರಿ,ಪ್ರಸಕ್ತ ಬಿಕ್ಕಟ್ಟಿಗೆ ಚೀನದ ಕ್ರಮಗಳೇ ಕಾರಣ ಎಂದು ಭಾರತವು ಬೆಟ್ಟು ಮಾಡುತ್ತಲೇ ಬಂದಿದೆ. ‘ವಾಸ್ತವದಲ್ಲಿ ಎಪ್ರಿಲ್-ಮೇ ಅವಧಿಯಿಂದ ಆರಂಭಿಸಿ ಲಡಾಖ್ ವಿಭಾಗದಲ್ಲಿಯ ಎಲ್‌ಎಸಿಯಲ್ಲಿ ಚೀನಿಯರ ಹಲವಾರು ಕೃತ್ಯಗಳು ಆ ವಿಭಾಗದಲ್ಲಿ ನಮ್ಮ ಪಡೆಗಳ ಮಾಮೂಲು ಗಸ್ತು ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮತ್ತು ಅಡ್ಡಿಯನ್ನುಂಟು ಮಾಡಿದ್ದವು ಮತ್ತು ಇದು ಕೆಲವು ಬಿಕ್ಕಟ್ಟಿನ ಸ್ಥಿತಿಗಳಿಗೆ ಕಾರಣವಾಗಿದ್ದವು ’ಎಂದಿದ್ದಾರೆ.

 ‘ಗಡಿಯಲ್ಲಿ ಚೀನಿ ಪಡೆಗಳ ಕ್ರಮಗಳು ದ್ವಿಪಕ್ಷೀಯ ಸಂಬಂಧಗಳಲ್ಲಿ ನಂಬಿಕೆಗೆ ಹಾನಿಯನ್ನುಂಟು ಮಾಡಿದೆ. ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ಪರಿಶೀಲಿಸಿ,ಭವಿಷ್ಯದ ಕ್ರಮವನ್ನು ನಿರ್ಧರಿಸುವುದು ಈಗ ಚೀನಿ ಪಡೆಗಳ ಹೊಣೆಗಾರಿಕೆಯಾಗಿದೆ. ನಮ್ಮ ದೃಷ್ಟಿಕೋನದಲ್ಲಿ ಈ ಸಮಸ್ಯೆಗೆ ಪರಿಹಾರ ಸಾಕಷ್ಟು ನೇರವಾಗಿದೆ. ಭಾರತೀಯ ಯೋಧರಿಂದ ಸಾಮಾನ್ಯ ಗಸ್ತು ಕಾರ್ಯ ನಿರ್ವಹಣೆಗೆ ತಡೆಯೊಡ್ಡುವುದನ್ನು ಚೀನಾ ನಿಲ್ಲಿಸಬೇಕು. ದ್ವಿಪಕ್ಷೆಯ ಸಂಬಂಧಗಳು ಉಭಯ ದೇಶಗಳಲ್ಲಿ ಹೆಚ್ಚು ಮಹತ್ವದ್ದಾಗಿವೆ. ಅದು ನಮಗೆ ಮಾತ್ರವಲ್ಲ,ಇಡೀ ಪ್ರದೇಶಕ್ಕೂ ಮುಖ್ಯವಾಗಿದೆ ಎಂದಿದ್ದಾರೆ.

  ಇಡೀ ಗಲ್ವಾನ್ ಕಣಿವೆಯ ಮೇಲೆ ತನ್ನ ಸ್ವಾಮಿತ್ವವಿದೆ ಎಂಬ ಚೀನಾದ ಹೇಳಿಕೆಯನ್ನು ತಳ್ಳಿಹಾಕಿರುವ ಮಿಸ್ರಿ,ಇದು ಸಂಪೂರ್ಣವಾಗಿ ಅಸಮರ್ಥನೀಯವಾಗಿದೆ ಎಂದಿದ್ದಾರೆ. ಚೀನಾ ಸರಕಾರವು ಬಳಸಿರುವ ಭಾಷೆಯು ಸಮಸ್ಯೆಯನ್ನು ಬಗೆಹರಿಸಲು ನೆರವಾಗುವುದಿಲ್ಲ ಎಂದು ಎಚ್ಚರಿಕೆಯನ್ನು ನೀಡಿರುವ ಅವರು, ‘ಗಡಿಯಲ್ಲಿ ನಾವೇನೇ ಚಟುವಟಿಕೆಗಳನ್ನು ನಡೆಸುತ್ತಿದ್ದರೂ ಅವು ಯಾವಾಗಲೂ ಎಲ್‌ಎಸಿಯ ನಮ್ಮ ಭಾಗದಲ್ಲಿಯೇ ಇರುತ್ತವೆ. ಹೀಗಾಗಿ ಚೀನಾ ಯಥಾಸ್ಥಿತಿಯನ್ನು ಬದಲಿಸುವ ತನ್ನ ಪ್ರಯತ್ನವನ್ನು ಕೈಬಿಡಬೇಕು. ಗಲ್ವಾನ್ ಕಣಿವೆಯು ಯಾವಾಗಲೂ ಭಾರತದ ನಿಯಂತ್ರಣದಲ್ಲಿದೆ. 1962ರಿಂದ ಚೀನಾದ ಭೂಪಟದಲ್ಲಿಯೂ ಅದರ ಉಲ್ಲೇಖವಿಲ್ಲ. ಸುದೀರ್ಘಾವಧಿಯಿಂದ ಭಾರತೀಯ ಯೋಧರು ಈ ಪ್ರದೇಶದಲ್ಲಿ ಗಸ್ತು ಕಾರ್ಯವನ್ನು ಯಾವುದೇ ತೊಂದರೆಯಿಲ್ಲದೆ ನಿರ್ವಹಿಸಿಕೊಂಡು ಬಂದಿದ್ದಾರೆ. ಹೀಗಿರುವಾಗ ಚೀನಾ ಈಗ ಈ ಪ್ರದೇಶದ ಮೇಲೆ ಹಕ್ಕು ಸಾಧಿಸುತ್ತಿರುವುದು ಅಚ್ಚರಿಯ ವಿಷಯವಾಗಿದೆ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X