ತೂತುಕುಡಿ ತಂದೆ-ಮಗನ ಪೊಲೀಸ್ ಕಸ್ಟಡಿ ಸಾವು ಪ್ರಕರಣ ಸಿಬಿಐಗೆ: ಸಿಎಂ ಪಳನಿಸ್ವಾಮಿ
ಚೆನ್ನೈ: ಪೊಲೀಸ್ ದೌರ್ಜನ್ಯದಿಂದ ತಂದೆ-ಮಗ ಸಾವನ್ನಪ್ಪಿದ ತೂತುಕುಡಿಯ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗುವುದು ಎಂದು ತಮಿಳುನಾಡು ಸಿಎಂ ಪಳನಿಸ್ವಾಮಿ ಹೇಳಿದ್ದಾರೆ.
ಲಾಕ್ ಡೌನ್ ಉಲ್ಲಂಘಿಸಿ 15 ನಿಮಿಷಗಳ ಕಾಲ ಅಂಗಡಿ ತೆರೆದದ್ದಕ್ಕಾಗಿ ಜಯರಾಜ್ ಮತ್ತು ಬೆನಿಕ್ಸ್ ಎಂಬವರಿಗೆ ಅಮಾನವೀಯವಾಗಿ ಪೊಲೀಸರು ಹಲ್ಲೆ ನಡೆಸಿದ್ದು, ನಂತರ ಗಂಭೀರ ಗಾಯಗಳಿಂದ ತಂದೆ ಮಗ ಸಾವನ್ನಪ್ಪಿರುವ ಘಟನೆ ದೇಶಾದ್ಯಂತ ಭಾರೀ ಆಕ್ರೋಶ ಸೃಷ್ಟಿಸಿತ್ತು.
“ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವುದಾಗಿ ಸರಕಾರ ನಿರ್ಧರಿಸಿದೆ. ಮದ್ರಾಸ್ ಹೈಕೋರ್ಟ್ ಅನುಮತಿಯೊಂದಿಗೆ ಈ ಪ್ರಕರಣ ಸಿಬಿಐಗೆ ಹಸ್ತಾಂತರಗೊಳ್ಳಲಿದೆ” ಎಂದು ಪಳನಿಸ್ವಾಮಿ ಹೇಳಿದ್ದಾರೆ.
Next Story