ತುಳುವಿನಲ್ಲಿ ಧನ್ಯವಾದ ಸಲ್ಲಿಸಿದ ಮಂಗಳೂರು ಪೊಲೀಸ್ ಆಯುಕ್ತ ಡಾ. ಹರ್ಷ
ಮಂಗಳೂರು, ಜೂ. 28: ಮಂಗಳೂರು ನಗರ ಪೊಲೀಸ್ ಆಯುಕ್ತ ಹುದ್ದೆಯಿಂದ ವರ್ಗಾವಣೆಗೊಂಡ ಡಾ. ಪಿ.ಎಸ್.ಹರ್ಷ ಸಾಮಾಜಿಕ ಜಾಲತಾಣದಲ್ಲಿ ತುಳು ಭಾಷೆಯಲ್ಲಿ ಧನ್ಯವಾದ ಸಲ್ಲಿಸಿದ್ದಾರೆ.
ವರ್ಗಾವಣೆ ಬಳಿಕ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಟ್ವಿಟರ್ನಲ್ಲಿ ಜಿಲ್ಲೆಯ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ.
ಕುಡ್ಲದ (ಮಂಗಳೂರು) ಎಲ್ಲ ಪ್ರೀತಿಯ ಬಂಧುಗಳೇ, ಕಳೆದ 11 ತಿಂಗಳಿಂದ ಮಂಗಳೂರು ಪೊಲೀಸ್ ಆಯುಕ್ತನಾಗಿ ಸೇವೆಗೈದ ನನಗೆ ಈಗ ವರ್ಗಾವಣೆಯಾಗಿದೆ. ಇಲಾಖೆಯ ಸಂಪೂರ್ಣ ಸಹಕಾರದೊಂದಿಗೆ ತುಂಬ ಪ್ರಾಮಾಣಿಕ ಮತ್ತು ಜನಪರವಾಗಿ ನನ್ನ ಕರ್ತವ್ಯ ಮಾಡಿಕೊಂಡು ಬಂದಿದ್ದೇನೆ. ನನಗೆ ಸಹಕಾರ, ಬೆಂಬಲ ಕೊಟ್ಟ ಎಲ್ಲರಿಗೂ ಹೃದಯ ಪೂರ್ವಕ ನಮಸ್ಕಾರಗಳು ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಕುಡ್ಲದ ಮಾತ ಮೋಕೆದ ಬಂಧುಲೇ, 11 ತಿಂಗೊಳುರ್ದ್ ಕುಡ್ಲದ ಪೊಲೀಸ್ ಆಯುಕ್ತೆಯಾದ್ ಸೇವೆ ಮಂದಿನ ಎಂಕ್ ಇತ್ತೆ ವರ್ಗಾವಣೆ ಅವೋಂದುಂಡು.ಇಲಾಖೆದ ಸಂಪೂರ್ಣ ಸಹಕಾರದೊಟ್ಟಿಗೆ ಮಸ್ತ್ ಪ್ರಾಮಾಣಿಕ ಬೊಕ್ಕ ಜನಪರವಾದು ಎನ್ನ ಕರ್ತವ್ಯ ಮಲ್ತೊಂದು ಬೈದೆ.ಎಂಕ್ ಸಹಕಾರ ಬೆಂಬಲ ಕೊರ್ನ ಮಾತೆರೆಗ್ಲಾ ಉಡಲ್ ದಿಂಜಿನ ಸೊಲ್ಮೆಲು. pic.twitter.com/y7rgQMoOwm
— Harsha IPS CP Mangaluru City (@compolmlr) June 28, 2020